thumbnail

By

Published : Feb 19, 2020, 11:36 PM IST

ETV Bharat / Videos

ಸಿಎಎ, ಎನ್ಆರ್​ಸಿ ಹಾಗೂ ಎನ್​ಪಿಆರ್ ವಿರೋಧಿಸಿ ಕೊಪ್ಪಳದಲ್ಲಿ ಪ್ರತಿಭಟನೆ

ಕೊಪ್ಪಳ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ಉಳಿಸಿ ಆಂದೋಲನ ಸಮಿತಿ ಕಾರ್ಯಕರ್ತರು ನಗರದ ಅಶೋಕ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿದರು. ಆನೆಗುಂದಿ ಉತ್ಸವದಲ್ಲಿ ನಿನ್ನ ದಾಖಲೆ ಯಾವಾಗ ನೀಡುವೆ ಎಂಬ ಕವಿತೆ ವಾಚಿಸಿದ ಕವಿ ಸಿರಾಜ್ ಬಿಸರಳ್ಳಿ ಹಾಗೂ ಕವನ ವಾಚನದ ವಿಡಿಯೋ ಪ್ರಸಾರ ಮಾಡಿದ ರಾಜಾಭಕ್ಷಿ ವಿರುದ್ಧ ಹಾಕಲಾಗಿರುವ ಕೇಸನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಬೇಡವಾದ ಕಾಯ್ದೆಗಳನ್ನು ಜಾರಿಗೊಳಿಸಿದೆ. ಸಿಎಎ, ಎನ್ಆರ್​ಸಿ ಹಾಗೂ ಎನ್​ಪಿಆರ್ ಕಾಯ್ದೆ ಜನವಿರೋಧಿಯಾಗಿವೆ. ಇಂತಹ ಕಾನೂನು ಜಾರಿ ಮಾಡುವ ಮೂಲಕ ಪ್ರಧಾನಿ ಮೋದಿ ಹಿಟ್ಲರ್ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.