thumbnail

By

Published : Jan 1, 2020, 9:06 PM IST

ETV Bharat / Videos

ಉದ್ಧವ್​ ಠಾಕ್ರೆ ಹೇಳಿಕೆ ಖಂಡಿಸಿ ದಾವಣಗೆರೆಯಲ್ಲಿ ಪ್ರತಿಭಟನೆ

ಬೆಳಗಾವಿ ವಿಚಾರದಲ್ಲಿ ಪದೇ ಪದೇ ಖ್ಯಾತೆ ತೆಗೆದು ಕನ್ನಡಿಗರನ್ನು ಕೆರಳಿಸುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಹೇಳಿಕೆ ಖಂಡಿಸಿ ಕರ್ನಾಟಕ ನವನಿರ್ಮಾಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಜಯದೇವ ಸರ್ಕಲ್​ನಲ್ಲಿ ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು, ಬೆಳಗಾವಿ ಜಿಲ್ಲೆಯ ಗಡಿಭಾಗದ ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರುತ್ತವೆ. ಅವುಗಳನ್ನ ಪಡೆದುಕೊಳ್ಳುತ್ತೇವೆ ಎಂದು ಹೇಳಿಕೆ ನೀಡಿ ಕನ್ನಡಿಗರನ್ನ ಪ್ರಚೋದಿಸಲಾಗುತ್ತಿದೆ. ಈ ಹೇಳಿಕೆಯನ್ನು ಖಂಡಿಸಿದ ಕರ್ನಾಟಕ ನವನಿರ್ಮಾಣ ವೇದಿಕೆ ಯಾವುದೇ ಕಾರಣಕ್ಕೂ ರಾಜ್ಯದ ಒಂದು ತುಂಡು ಜಾಗವನ್ನ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವ ಸಾಧ್ಯತೆ ಇಲ್ಲ. ರಾಜ್ಯದ ಗಡಿ, ನೆಲ ವಿಚಾರಕ್ಕೆ ಬಂದರೆ ರಕ್ತವನ್ನಾದರೂ ಚೆಲ್ಲುತ್ತೇವೆ ಎಂದು ಆಕ್ರೋಶ ವ್ತಕ್ತಪಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.