thumbnail

By

Published : Nov 20, 2019, 6:01 PM IST

ETV Bharat / Videos

ಶಾಮನೂರು ಶಿವಶಂಕರಪ್ಪ ಮಗನ ಕಾರ್​​ಗೆ ಬೈಕ್​ ಡಿಕ್ಕಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ನೆಲಮಂಗಲ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಪುತ್ರ ಗಣೇಶ್​​ರವರ BMW ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮೃತಪಟ್ಟಿದ್ದಾನೆ. ಕಾರ್​ ಬೈಕ್​​​ಗೆ ಡಿಕ್ಕಿ ಹೊಡೆಯುವ ಎದೆ ಝಲ್ ಅನ್ನುವಂತ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನೆಲಮಂಗಲ ತಾಲೂಕಿನ ಜಿಂದಾಲ್ ಕಾರ್ಖಾನೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ಹೊರಟ್ಟಿದ್ದ ಗಣೇಶ್​​ ಅವರ BMW ಕಾರಿಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮೇಲಕ್ಕೆ ಹಾರಿ ಬಿದ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ದಯಾನಂದ್ (60) ವರ್ಷ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.