ತಮ್ಮ ಗೆಲುವನ್ನು ಕಾರ್ಯಕರ್ತರಿಗೆ, ಮತದಾರರಿಗೆ ಅರ್ಪಿಸಿದ ಶೋಭಾ ಕರಂದ್ಲಾಜೆ
ಉಡುಪಿ: ನನ್ನ ಗೆಲುವನ್ನು ನನ್ನ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅರ್ಪಿಸುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸುಮಾರು 2 ಲಕ್ಷ ಮತಗಳ ಅಂತರದಿಂದ ಅವರು ಜಯಭೇರಿ ಬಾರಿಸಿದ್ದಾರೆ. ಈ ವೇಳೆ ಮಾತನಾಡಿ, ಕುಟುಂಬ ರಾಜಕಾರಣ, ದ್ವೇಷದ ರಾಜಕಾರಣಕ್ಕೆ ಜನತೆ ತಕ್ಕ ಉತ್ತರ ಕೊಟ್ಟಿದ್ದಾರೆ. ಎರಡನೇ ಬಾರಿ ಸಂಸದೆಯಾಗಿ ಆಯ್ಕೆ ಮಾಡಿದ ಜನತೆಗೆ ಚಿರ ಋಣಿಯಾಗಿದ್ದೇನೆ. ಈ ಬಾರಿ ಉಡುಪಿ - ಚಿಕ್ಕಮಗಳೂರನ್ನು ದೇಶದಲ್ಲಿ ಮಾದರಿ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಪ್ರಯತ್ನಿಸುತ್ತೇನೆ ಎಂದು ಶೋಭಾ ಕರಂದ್ಲಾಜೆ ತಮ್ಮ ಅಭಿಪ್ರಾಯವನ್ನು "ಈಟಿವಿ ಭಾರತ್"ನೊಂದಿಗೆನೊಂದಿಗೆ ಹಂಚಿಕೊಂಡಿದ್ದಾರೆ.