ಬೀದರ್​.. ಸಾರಿಗೆ ಸಂಸ್ಥೆ ಬಸ್​​ಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

By

Published : Dec 14, 2020, 12:33 PM IST

thumbnail
ಸಾರಿಗೆ ಸಂಸ್ಥೆ ನೌಕರರ ಧರಣಿ ನಿರಂತರವಾಗಿದ್ದು, ಈ ವೇಳೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗದ ಬಸ್​ಗಳಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ನಗರದ ಬರಿದ್​ ಶಾಹಿ ಗಾರ್ಡನ್ ಬಳಿ ಕಲಬುರಗಿ ಡಿಪೋದ ಬಸ್​​ನಲ್ಲಿ 25ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಕಲ್ಲು ತೂರಾಟ ನಡೆಸಿದ್ದು, ಬಸ್​ನ ಹಿಂಬಾಗದ ಗ್ಲಾಸ್ ಪುಡಿ ಪುಡಿಯಾಗಿವೆ. ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟ ಮಾಡಿ ಪರಾರಿಯಾದ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.