ನೆರೆ ಸಂತ್ರಸ್ತರಿಗಾಗಿ ಮಿಡಿದ ಸುಧಾ ಮೂರ್ತಿ... ಏನ್ ಹೇಳ್ತಾರೆ ಇನ್ಫಿ ಸೂಪರ್ ಲೇಡಿ
ರಾಜ್ಯದಲ್ಲಿ ಉಂಟಾದ ಪ್ರವಾಹದಿಂದ ಹಲವಾರು ಜನರು ತಮ್ಮ ಮೂಲ ಅಸ್ತಿತ್ವವನ್ನೇ ಕಳೆದುಕೊಂಡಿದ್ದಾರೆ, ಕೃಷ್ಣಾ ನದಿ ಮತ್ತು ಭಾರಿ ಮಳೆಯಿಂದ ಉಂಟಾದ ಪ್ರವಾಹಕ್ಕೆ ಅಕ್ಷರಶಃ ಉತ್ತರ ಕರ್ನಾಟಕ ಸೇರಿದಂತೆ ಮಲೆನಾಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ನಲುಗಿ ಹೋಗಿವೆ. ಸಂತ್ರಸ್ತರ ಸಹಾಯಕ್ಕೆ ಕರುನಾಡಿನಾಡಿನ ಜನತೆ ಸಹಾಯ ಹಸ್ತ ಚಾಚಿದ್ದು, ಇತ್ತ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿಯವರು ಸ್ವತಃ ತಾವೇ ಸಂತ್ರಸ್ತರಿಗೆ ದಿನ ಬಳಕೆಯ ಸಾಮಾಗ್ರಿಗಳನ್ನು ಸಿದ್ಧಪಡಿಸಿ ನೆರೆ ಹಾವಳಿಗೆ ನಲುಗಿದ ಜನರಿಗೆ ನೀಡಲು ಮುಂದಾಗಿದ್ದಾರೆ.