ಶಾಸಕ ಭೀಮಾನಾಯ್ಕ ದುಂಡಾವರ್ತನೆ ಖಂಡಿಸಿ ಇಂದು ಹಗರಿಬೊಮ್ಮನಹಳ್ಳಿ ಬಂದ್
ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಶಾಸಕ ಎಲ್.ಬಿ.ಪಿ. ಭೀಮಾನಾಯ್ಕ ಅವರ ದುಂಡಾವರ್ತನೆ ಖಂಡಿಸಿ ಬಿಜೆಪಿ ಇಂದು ಕರೆ ನೀಡಿರುವ ಬಂದ್ ಗೆ ಹಗರಿಬೊಮ್ಮನಹಳ್ಳಿ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಮಾಜಿ ಶಾಸಕ ಕೆ.ನೇಮಿರಾಜ ನಾಯ್ಕ ಮುಂದಾಳತ್ವದಲ್ಲಿ ನಡೆಯಲಿರುವ ಬಂದ್ ಗೆ ಹಗರಿಬೊಮ್ಮನ ಹಳ್ಳಿ ಪಟ್ಟಣದ ಅಂಗಡಿ-ಮುಂಗಟ್ಟುಗಳು ಬೆಳ್ಳಂಬೆಳಗ್ಗೆ ಸಂಪೂರ್ಣವಾಗಿ ಬಂದ್ ಆಗಿವೆ.