ಕೃಷಿ ಕಾಯ್ದೆ ವಿರೋಧಿಸಿ ಟ್ರ್ಯಾಕ್ಟರ್ ಪರೇಡ್: ತಹಶೀಲ್ದಾರ್ ಮೂಲಕ ಪ್ರಧಾನಿಗೆ ಮನವಿ ಸಲ್ಲಿಕೆ

By

Published : Jan 26, 2021, 6:01 PM IST

thumbnail

ಹಾವೇರಿ/ದಾವಣಗೆರೆ: ಕೇಂದ್ರ ಬಿಜೆಪಿ ಸರ್ಕಾರ ತಂದಿರುವ ಮೂರು‌ ಕೃಷಿ ಕಾಯ್ದೆಗಳ ವಿರುದ್ಧ ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ವಿವಿಧ ರೈತ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷದಿಂದ ಟ್ರ್ಯಾಕ್ಟರ್ ಪರೇಡ್ ನಡೆಸಲಾಯಿತು. ರಾಣೆಬೆನ್ನೂರು ನಗರದ ಮಾಗೋಡ ಕ್ರಾಸ್​ನಿಂದ ಆರಂಭದವಾದ ಟ್ರ್ಯಾಕ್ಟರ್ ಪರೇಡ್ ಸುಮಾರು ಮೂರು ಕಿ.ಮೀ. ಚಲಿಸಿ ತಹಶೀಲ್ದಾರ ಕಚೇರಿಗೆ ತೆರಳಿತು. ವಿವಿಧ ಸಂಘಟನೆ ಮುಖಂಡರು ತಹಶೀಲ್ದಾರ್ ಶಂಕರ ಜಿ.ಎನ್. ಮೂಲಕ ಪ್ರಧಾನಿ ‌ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ದಾವಣಗೆರೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಟ್ರ್ಯಾಕ್ಟರ್ ಪರೇಡ್​ನಲ್ಲಿ ನೂರಕ್ಕೂ ಹೆಚ್ಚು ಟ್ರ್ಯಾಕ್ಟರ್​ಗಳೊಂದಿಗೆ ರೈತರು ಬೀದಿಗಿಳಿದು ಪ್ರತಿಭಟನೆ‌ ನಡೆಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.