ಕಾಲುವೆ ಬಳಿ ಪ್ರತ್ಯಕ್ಷವಾದ ಮೊಸಳೆ ಸೆರೆ ಹಿಡಿದ ಗ್ರಾಮಸ್ಥರು - ಮುದ್ದೇಬಿಹಾಳ ತಾಲೂಕಿನ ಸಿದ್ದಾಪುರ ಗ್ರಾಮದ ಮೊಸಳೆ ಸೆರೆ
🎬 Watch Now: Feature Video

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸಿದ್ದಾಪುರ ಗ್ರಾಮದ ಕಾಲುವೆ ಬಳಿ ಮೊಸಳೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಚಿಮ್ಮಲಗಿ ಏತ ನೀರಾವರಿ ಯೋಜನೆಯ ಉಪ ಕಾಲುವೆಯಲ್ಲಿ ಮೊಸಳೆ ಕಾಣಿಸಿಕೊಂಡಿತ್ತು. ಹಗ್ಗ ಕಟ್ಟಿ ಮೊಸಳೆ ಹಿಡಿದ ಗ್ರಾಮಸ್ಥರು ಬಳಿಕ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಒಪ್ಪಿಸಿದ್ದು, ಅರಣ್ಯ ಅಧಿಕಾರಿಗಳು ಕೃಷ್ಣಾ ನದಿಗೆ ಬಿಟ್ಟಿದ್ದಾರೆ.