ಹೈದರಾಬಾದ್ ಎನ್‌ಕೌಂಟರ್ ಬಗ್ಗೆ ಮೈಸೂರು ರಾಜವಂಶಸ್ಥ ಯದುವೀರ್ ಹೇಳಿದ್ದೇನು?

By

Published : Dec 7, 2019, 1:18 PM IST

thumbnail
ಮೈಸೂರು: ನಿನ್ನೆ ಹೈದರಾಬಾದ್ ಘಟನೆಯ ಬಗ್ಗೆ ಖಾಸಗಿ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ ಮಹರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ ನೀಡಿದ್ದು, ಹೈದರಾಬಾದ್ ಎನ್​ಕೌಂಟರ್ ಘಟನೆಯಿಂದ ಸಂತಸ ಎನ್ನುವುದಕ್ಕಿಂತ ಸಮಾಧಾನ ತಂದಿದೆ. ಕಾನೂನು ಪ್ರಕಾರವಾಗಿ ಆಗಿದ್ದರೆ ಒಳ್ಳೆಯದಿತ್ತು. ಆದರೆ ನಿನ್ನೆ ಆ ಸ್ಥಳದಲ್ಲಿ ನಡೆದ ಘಟನೆಗೆ ಪೊಲೀಸರು ಯಾವ ರೀತಿ ಪ್ರತಿಕ್ರಿಯೆ ನೀಡಬೇಕಿತ್ತೊ ಅದೇ ರೀತಿ ನಡೆದಿದೆ. ಈ ಘಟನೆಯ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ. ಘಟನೆಯ ಬಗ್ಗೆ ಸ್ಥಳಕ್ಕೆ ಆರೋಪಿಗಳನ್ನು ಕರೆದುಕೊಂಡು ಹೋದಾಗ ಅವರು ಪರಾರಿ ಆಗುತ್ತಿದ್ದರು. ಆ ಸಂದರ್ಭದಲ್ಲಿ ಎನ್‌ಕೌಂಟರ್ ಅಗಿದೆ. ಇದು ಒಂದು ರೀತಿ ಕಾನೂನು ಪ್ರಕಾರವಾಗಿಯೇ ನಡೆದಿದೆ ಎಂದು ಯದುವೀರ್ ಹೇಳಿದ್ರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.