ಬಳ್ಳಾರಿ: ಜಮೀನಿಗೆ ಉರುಳಿದ ಬಸ್; ಹಲವು ಪ್ರಯಾಣಿಕರಿಗೆ ಗಾಯ - ಬಳ್ಳಾರಿಯಲ್ಲಿ ಬಸ್ ಅಪಘಾತ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16022544-thumbnail-3x2-sanju.jpg)
ಸಾರಿಗೆ ಸಂಸ್ಥೆಯ ಬಸ್ ರಸ್ತೆ ಬಳಿಯ ಜಮೀನಿಗೆ ಉರುಳಿಬಿದ್ದು 5ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ನಡೆಯಿತು. ಸಿರುಗುಪ್ಪದಿಂದ ಬಳ್ಳಾರಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡು ಜಮೀನಿಗೆ ಉರುಳಿದೆ. ಬಸ್ನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಸಿರುಗುಪ್ಪ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ತೆಕ್ಕಲಕೋಟೆ ಠಾಣೆಯ ಪೊಲೀಸರು, ಸಿರುಗುಪ್ಪ ಡಿಪೋ ವ್ಯವಸ್ಥಾಪಕ ತಿರುಮಲೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.