thumbnail

By

Published : Sep 25, 2022, 2:55 PM IST

ETV Bharat / Videos

ಹಾವೇರಿ: ಅದ್ದೂರಿಯಾಗಿ ನೆರವೇರಿದ ಗಣೇಶ ಮೂರ್ತಿ ನಿಮಜ್ಜನ

ಹಾವೇರಿ: ನಗರದ ಕಾಗಿನೆಲೆ ಸರ್ಕಲ್​​ನಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪನೆ ಮಾಡಿದ್ದ ಹಿಂದೂ ಮಹಾಗಣಪತಿ ನಿಮಜ್ಜನ ಕಾರ್ಯಕ್ರಮ ನಿನ್ನೆ ನೆರವೇರಿತು. ನಗರದ ಪ್ರಮುಖ ಬೀದಿಗಳಲ್ಲಿ ಗಣೇಶ ಮೂರ್ತಿಯ ಭವ್ಯ ಮೆರವಣಿಗೆ ಮಾಡಲಾಯಿತು. ಕಾಗಿನೆಲೆ ಸರ್ಕಲ್‌ನಿಂದ ಆರಂಭವಾದ ಮೆರವಣಿಗೆ ಗಾಂಧಿ ವೃತ್ತ, ಸುಭಾಷ್​​ ವೃತ್ತ ಸೇರಿದಂತೆ ನಗರದ‌ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯುದ್ದಕ್ಕೂ ಯುವಕರು ಹಾಗೂ ಜನರು ಡಿಜೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.