ಹಾವೇರಿ: ಅದ್ದೂರಿಯಾಗಿ ನೆರವೇರಿದ ಗಣೇಶ ಮೂರ್ತಿ ನಿಮಜ್ಜನ - ಹಿಂದೂ ಮಹಾಗಣಪತಿ ನಿಮಜ್ಜನ ಕಾರ್ಯಕ್ರಮ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16468052-thumbnail-3x2-news.jpg)
ಹಾವೇರಿ: ನಗರದ ಕಾಗಿನೆಲೆ ಸರ್ಕಲ್ನಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪನೆ ಮಾಡಿದ್ದ ಹಿಂದೂ ಮಹಾಗಣಪತಿ ನಿಮಜ್ಜನ ಕಾರ್ಯಕ್ರಮ ನಿನ್ನೆ ನೆರವೇರಿತು. ನಗರದ ಪ್ರಮುಖ ಬೀದಿಗಳಲ್ಲಿ ಗಣೇಶ ಮೂರ್ತಿಯ ಭವ್ಯ ಮೆರವಣಿಗೆ ಮಾಡಲಾಯಿತು. ಕಾಗಿನೆಲೆ ಸರ್ಕಲ್ನಿಂದ ಆರಂಭವಾದ ಮೆರವಣಿಗೆ ಗಾಂಧಿ ವೃತ್ತ, ಸುಭಾಷ್ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯುದ್ದಕ್ಕೂ ಯುವಕರು ಹಾಗೂ ಜನರು ಡಿಜೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.