ಪ್ರವಾಹದ ನೀರಿನಲ್ಲಿ ಯೂಥ್ ಕಾಂಗ್ರೆಸ್ ಅಧ್ಯಕ್ಷನ ವಿನೂತನ ಪ್ರತಿಭಟನೆ: ವಿಡಿಯೋ ನೋಡಿ
![ETV Thumbnail thumbnail](https://etvbharatimages.akamaized.net/etvbharat/prod-images/320-214-16299592-thumbnail-3x2-bng.jpg)
ಬೆಂಗಳೂರು: ಭಾರೀ ಮಳೆಗೆ ಬೆಂಗಳೂರು ನಗರದ ಹಲವು ಭಾಗಗಳು ಮುಳುಗಡೆಯಾಗಿವೆ. ನೀರು ಮನೆಗಳಿಗೆ ನುಗ್ಗಿ ಜನರು ತೀವ್ರ ಪಡಿಪಾಟಲು ಪಡುತ್ತಿದ್ದಾರೆ. ಇದಕ್ಕೆ ಸರ್ಕಾರದ ನಿರ್ಲಕ್ಷ್ಯ ಆಡಳಿತವೇ ಕಾರಣ ಎಂದು ರಾಜ್ಯ ಯುವ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿದೆ. ಈ ವೇಳೆ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ಪ್ರವಾಹದ ನೀರಿನಲ್ಲಿ ಗಾಳಿ ತುಂಬಿದ ರಬ್ಬರ್ ಟ್ಯೂಬ್ ಮೇಲೆ ಕುಳಿತು ಈಜಾಡಿದ ರೀತಿ ಸಾಗಿ ವಿಶಿಷ್ಟವಾಗಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ.
Last Updated : Sep 6, 2022, 5:55 PM IST