ದೇಗುಲದ ಗರ್ಭಗುಡಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ 'ಜೋಡಿ ಹಕ್ಕಿಗಳು': ವಿಡಿಯೋ

By

Published : Aug 12, 2022, 9:57 PM IST

thumbnail
ಉಡುಪಿ: ಯುವಕ ಮತ್ತು ಯುವತಿ ಮರವಂತೆ ದೇವಸ್ಥಾನದ ಗರ್ಭಗುಡಿಗೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿ ವಿಫಲವಾದ ಘಟನೆ ನಡೆದಿದೆ. ಕುಂದಾಪುರ ತ್ರಾಸಿ ಸಮೀಪ ಶ್ರೀ ಮಹಾರಾಜ ಸ್ವಾಮಿ, ಶ್ರೀ ವರಾಹ ದೇವಸ್ಥಾನಕ್ಕೆ ಯಾರೂ ಇಲ್ಲದ ವೇಳೆ ಈ ಇಬ್ಬರು ಬಾಗಿಲು ಒಡೆದು, ಒಳನುಗ್ಗಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವರಾಹ ವಿಷ್ಣು ನರಸಿಂಹ ದೇವರ ಮೂರ್ತಿ ಮುಟ್ಟಿ ಅಪವಿತ್ರಗೊಳಿಸಿದ ಯುವಕ ಬಳಿಕ ಏನೂ ಸಿಗದೆ ಬರಿಗೈಯಲ್ಲಿ ವಾಪಸ್ ಆಗಿದ್ದಾನೆ. ಕಳ್ಳನ ಮುಖ ಚಹರೆ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕುಂದಾಪುರ ತಾಲೂಕಿನ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.