ರಾಜಧಾನಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಾಜ್ಯಪಾಲರಿಂದ ಸ್ವಾಗತ
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂದು ನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಿದ್ದಾರೆ. ದೆಹಲಿಯಿಂದ ನೇರವಾಗಿ ವಿಶೇಷ ವಿಮಾನ ಮೂಲಕ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ ವಜೂಭಾಯಿ ವಾಲಾ ಸ್ವಾಗತಿಸಿದರು. ಇಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದು, ನಾಳೆ ಮಧ್ಯಾಹ್ನ ಖಾಸಗಿ ಹೊಟೇಲ್ನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ.
Last Updated : Feb 21, 2020, 9:42 PM IST