thumbnail

ರಾಜಸ್ಥಾನದಲ್ಲಿ ಮುಂದುವರೆದ ಹಿಂಸಾಚಾರ: ಪೊಲೀಸರ ಮೇಲೆ ಕಲ್ಲು ತೂರಾಟ, ಹಲ್ಲೆ

By

Published : Jun 29, 2022, 6:50 PM IST

ಉದಯಪುರ(ರಾಜಸ್ಥಾನ): ಹಿಂದೂ ವ್ಯಕ್ತಿ ಭೀಕರ ಹತ್ಯೆಗೆ ಸಂಬಂಧಿಸಿದಂತೆ ರಾಜಸ್ಥಾನದ ವಿವಿಧ ಪ್ರದೇಶಗಳಲ್ಲಿ ಇಂದು ಪ್ರತಿಭಟನೆ ನಡೆದಿದೆ. ಪ್ರಮುಖವಾಗಿ ಭೀಮ್​, ರಾಜ್​ ಸಮಂದ್​ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆಯಿತು. ಕಿಡಿಗೇಡಿಗಳು ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಹರಿತವಾದ ಆಯುಧದಿಂದ ಪೊಲೀಸ್ ಕಾನ್​​ಸ್ಟೆಬಲ್​ ಮೇಲೆ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.