ಭಾರಿ ಮಳೆಗೆ ರಾಮನಗರ ರಸ್ತೆಗಳು ಜಲಾವೃತ.. ಬಸ್ನಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ
ರಾಮನಗರ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಾಮನಗರದ ಬಿಳಗುಂಬ ಸರ್ವೀಸ್ ರಸ್ತೆ ಬಳಿ ಧಾರಾಕಾರ ಮಳೆಗೆ ಖಾಸಗಿ ಬಸ್ಸೊಂದು ಕೊಚ್ಚಿಕೊಂಡು ಹೋಗುತ್ತಿದ್ದಾಗ ಸ್ಥಳೀಯರು ಬಸ್ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದರು. ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಜಲಾವೃತವಾಗಿದೆ. ಸಂಗನಬಸವನದೊಡ್ಡಿ ಬಳಿಯ ಹೆದ್ದಾರಿ ಸಂಪೂರ್ಣವಾಗಿ ಕೆರೆಯಂತಾಗಿದೆ.
Last Updated : Aug 29, 2022, 12:57 PM IST