thumbnail

By

Published : Aug 29, 2022, 8:30 PM IST

ETV Bharat / Videos

ಅಂತ್ಯಸಂಸ್ಕಾರದ ಸಂದರ್ಭ ನೀರಿನಲ್ಲಿ ಕೊಚ್ಚಿ ಹೋದ ಮೃತದೇಹ: ವಿಡಿಯೋ

ರಾಣಿಬಾಗ್​​(ಉತ್ತರಾಖಂಡ): ಕಳೆದ ಕೆಲ ದಿನಗಳಿಂದ ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ ಭೀಕರ ಮಳೆ ಸುರಿಯುತ್ತಿದೆ. ಕೆಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಸಂದರ್ಭದಲ್ಲಿ ಅಂತ್ಯಸಂಸ್ಕಾರ ನಡೆಸಲು ತೆಗೆದುಕೊಂಡು ಹೋಗಿದ್ದ ಮೂರು ಮೃತದೇಹಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ರಾಣಿಬಾಗ್​ ಎಂಬಲ್ಲಿ ಘಟನೆ ನಡೆದಿದೆ. ಚಿತ್ರಶಾಲಾ ಘಾಟ್‌ಗೆ ಅಂತಿಮ ಸಂಸ್ಕಾರಕ್ಕಾಗಿ ಈ ಮೃತದೇಹಗಳನ್ನು ತೆಗೆದುಕೊಂಡು ಬರಲಾಗಿತ್ತು. ಮೃತದೇಹಗಳಿಗೆ ಅಂತಿಮ ಪೂಜೆ ಮುಗಿಸಿ ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ವೇಳೆ ದಿಢೀರ್ ಪ್ರವಾಹ ಪರಿಸ್ಥಿತಿ ತಲೆದೋರಿದ್ದು ಗೌಲಾ ನದಿಯಲ್ಲಿ ಶವಗಳು ತೇಲಿಕೊಂಡು ಹೋಗಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.