ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ಗೆ ನುಗ್ಗಿದ ನೀರು: ತೆಪ್ಪದ ಮೂಲಕ ಪ್ರಯಾಣಿಕರ ರಕ್ಷಣೆ - ಮಂಡ್ಯ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16237505-thumbnail-3x2-bin.jpg)
ಮಂಡ್ಯ: ಜಿಲ್ಲೆಯಲ್ಲಿ ಮಳೆ ಆರ್ಭಟ ಮತ್ತೆ ಮುಂದುವರೆದಿದ್ದು, ಸತತ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ಇದರಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದ್ದು, ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಸ್ನಲ್ಲಿದ್ದ ಕೆಲವು ಪ್ರಯಾಣಿಕರನ್ನು ತೆಪ್ಪದ ಮೂಲಕ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಬಸ್ ಸ್ಟ್ಯಾಂಡ್ ಸಂಪೂರ್ಣ ಜಲಾವೃತಗೊಂಡಿದೆ.