ಕೆಎಸ್ಆರ್​​ಟಿಸಿ ಬಸ್​​ ಸ್ಟ್ಯಾಂಡ್​​ಗೆ ನುಗ್ಗಿದ ನೀರು: ತೆಪ್ಪದ ಮೂಲಕ ಪ್ರಯಾಣಿಕರ ರಕ್ಷಣೆ

By

Published : Aug 30, 2022, 4:15 PM IST

thumbnail

ಮಂಡ್ಯ: ಜಿಲ್ಲೆಯಲ್ಲಿ ಮಳೆ ಆರ್ಭಟ ಮತ್ತೆ ಮುಂದುವರೆದಿದ್ದು, ಸತತ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ಇದರಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ ಕೆಎಸ್ಆರ್​​ಟಿಸಿ ಬಸ್ ನಿಲ್ದಾಣಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದ್ದು, ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಸ್​ನಲ್ಲಿದ್ದ ಕೆಲವು ಪ್ರಯಾಣಿಕರನ್ನು ತೆಪ್ಪದ ಮೂಲಕ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಬಸ್ ಸ್ಟ್ಯಾಂಡ್ ಸಂಪೂರ್ಣ ಜಲಾವೃತಗೊಂಡಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.