ಹೈದರಾಬಾದ್ : ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾಪುರಮೆಟ್ ವ್ಯಾಪ್ತಿಯಲ್ಲಿ ಗುರುವಾರ ಮಹೇಶ್ವರಂ ಎಸ್ಒಟಿ ಹಾಗೂ ಅಬ್ದುಲ್ಲಾಪುರಮೆಟ್ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ 300 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಗಾಂಜಾ ಕಳ್ಳಸಾಗಣೆ ಮಾರ್ಗದ ಬಗ್ಗೆ ಪೂರ್ವ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಎಸ್ಒಟಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ವಿಶಾಖಪಟ್ಟಣದಿಂದ ಹೈದರಾಬಾದ್ಗೆ ಗಾಂಜಾ ಸಾಗಿಸಲಾಗುತ್ತಿದ್ದ ಕಂಟೇನರ್ ಅನ್ನು ತಡೆಹಿಡಿದು ಪೊಲೀಸರು ತಪಾಸಣೆ ನಡೆಸಿದರು. ಅಧಿಕಾರಿಗಳು ಕಂಟೇನರ್ ಅನ್ನು ವಶಪಡಿಸಿಕೊಂಡಿದ್ದು, ಸಾಗಾಟ ಮಾಡುತ್ತಿದ್ದವನನ್ನು ಕಸ್ಟಡಿಗೆ ಪಡೆದಿದ್ದಾರೆ. ವಶಪಡಿಸಿಕೊಂಡ ಗಾಂಜಾ ಸುಮಾರು 1 ಕೋಟಿ ರೂ. ಮೌಲ್ಯದ್ದಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಮಾಧ್ಯಮಗೋಷ್ಟಿ ಕರೆದಿರುವ ಪೊಲೀಸರು, ಕಳ್ಳಸಾಗಣೆ ಜಾಲ ಮತ್ತು ನಡೆಯುತ್ತಿರುವ ತನಿಖೆಗಳ ಕುರಿತು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಿದ್ದಾರೆ.
ಇದನ್ನೂ ಓದಿ: ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 119 ಕೆ.ಜಿ ಗಾಂಜಾ ವಶ, ನಾಲ್ವರು ಆರೋಪಿಗಳು ಅರೆಸ್ಟ್