ETV Bharat / bharat

ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣ ಸ್ವೀಕಾರ: ಮೂರನೇ 'ಮಹಿಳಾ ಸಿಎಂ' ಅಭಿದಾನ - Atishi takes oath

author img

By ETV Bharat Karnataka Team

Published : 3 hours ago

Updated : 2 hours ago

ದೆಹಲಿ ನೂತನ ಸಿಎಂ ಆಗಿ ಅತಿಶಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಲೆಫ್ಟಿನೆಂಟ್​ ಗವರ್ನರ್​ ವಿನಯ್​ ಕುಮಾರ್​​ ಸಕ್ಸೇನಾ ಅವರು ಗೌಪ್ಯತೆ ಬೋಧಿಸಿದರು.

ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣ ಸ್ವೀಕಾರ
ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣ ಸ್ವೀಕಾರ (ETV BHARAT)

ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಜೊತೆಗೆ ರಾಷ್ಟ್ರಪತಿಗಳ ಅನುಮೋದನೆ ಪಡೆದ ಐವರು ಶಾಸಕರಾದ ಕೈಲಾಶ್ ಗೆಹ್ಲೋಟ್, ಗೋಪಾಲ್​ ರೈ, ಸೌರಭ್​ ಭಾರಧ್ವಾಜ್​, ಇಮ್ರಾನ್ ಹುಸೇನ್, ಮುಖೇಶ್ ಅಹ್ಲಾವತ್ ಕ್ಯಾಬಿನೆಟ್​ ಸಚಿವರಾಗಿ ಪ್ರತಿಜ್ಞಾವಿಧಿ ಪಡೆದರು.

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ತಮ್ಮ ನಿವಾಸದಲ್ಲಿ ನೂತನ ಸಿಎಂ ಅತಿಶಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭ ಸರಳವಾಗಿ ನೆರವೇರಿತು. ದೆಹಲಿ ಸರ್ಕಾರದ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು.

ಅಬಕಾರಿ ಹಗರಣದಲ್ಲಿ ಆರೋಪ ಹೊತ್ತಿರುವ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಬಳಿಕ ಅತಿಶಿ ಅವರನ್ನು ಆಗಿ ಆಮ್​ ಆದ್ಮಿ ಪಕ್ಷದ ಶಾಸಕಾಂಗದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿತ್ತು. ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಪಕ್ಷದ ಕಾರ್ಯಕರ್ತರು ಮೌನಕ್ಕೆ ಜಾರಿದ್ದು, ಅತಿಶಿ ಅವರ ಪದಗ್ರಹಣ ಸಮಾರಂಭ ಕೂಡ ಅತ್ಯಂತ ಸರಳವಾಗಿ ನಡೆಯಿತು.

ಸಚಿವ ಸ್ಥಾನದಿಂದ ಮುಖ್ಯಮಂತ್ರಿ: ದೆಹಲಿ ಅಬಕಾರಿ ಹಗರಣದಲ್ಲಿ ಆರೋಪಿತರಾಗಿ ಸಿಬಿಐ ಬಂಧನಕ್ಕೆ ಒಳಗಾದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆಯ ನಂತರ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಅವರು ಅತಿಶಿ ಅವರನ್ನು ತಮ್ಮ ಸಂಪುಟದಲ್ಲಿ ಸಚಿವರನ್ನಾಗಿ ನೇಮಿಸಿದ್ದರು. 2023 ರ ಮಾರ್ಚ್​ನಲ್ಲಿ ಅತಿಶಿ ಮಂತ್ರಿಯಾದರು. ಅತಿಶಿ ಅವರು ಒಂದೇ ವರ್ಷದ ಅವಧಿಯಲ್ಲಿ ಸಚಿವರಾಗಿ ಬಳಿಕ ಮುಖ್ಯಮಂತ್ರಿಯಾಗಿ ಪದೋನ್ನತಿ ಪಡೆದುಕೊಂಡಂತಾಗಿದೆ.

ಸಂಭ್ರಮಾಚರಣೆ ಮಾಡದಂತೆ ಮನವಿ: ಅತಿಶಿ ಅವರು ದೆಹಲಿ ಸರ್ಕಾರದ ಅಧಿಕಾರದ ಚುಕ್ಕಾಣಿ ಹಿಡಿದರೂ, ಸಂಭ್ರಮಾಚರಣೆ ನಡೆಸದಂತೆ ಆಪ್​​ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದರು. ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾದ ದಿನವೇ ಅವರು ಈ ನಿರ್ಧಾರ ಪ್ರಕಟಿಸಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿರುವುದು ಬೇಸರ ತಂದಿದೆ. ಇದು ಸಂಭ್ರಮಿಸುವ ಸಮಯವಲ್ಲ ಎಂದು ಹೇಳಿದ್ದರು.

ಮೂರನೇ ಮಹಿಳಾ ಸಿಎಂ: ಅತಿಶಿ ಅವರು ದೆಹಲಿ ಸಿಎಂ ಗದ್ದುಗೆ ಏರಿದ ಮೂರನೇ ಮಹಿಳೆ ಎಂಬ ಅಭಿದಾನಕ್ಕೆ ಪಾತ್ರರಾದರು. ಇದಕ್ಕೂ ಮೊದಲು ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಅವರು ಸತತ 15 ವರ್ಷಗಳ ಕಾಲ ದೆಹಲಿಯ ಮುಖ್ಯಮಂತ್ರಿಯಾಗಿದ್ದರು. ಅವರಿಗಿಂತ ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್ ದೆಹಲಿ ಸಿಎಂ ಆಗಿ ಅಧಿಕಾರ ನಡೆಸಿದ್ದರು.

ಅತಿ ಹೆಚ್ಚು ಖಾತೆ ಹೊಂದಿರುವ ಮುಖ್ಯಮಂತ್ರಿ: ಮುಖ್ಯಮಂತ್ರಿಯಾಗುವ ಮುನ್ನ ಅತಿಶಿ ಅವರು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಅತಿ ಹೆಚ್ಚು ಖಾತೆಗಳನ್ನು ಹೊಂದಿದ್ದ ಸಚಿವರಾಗಿದ್ದರು. ಪ್ರಸ್ತುತ ಅವರ ಬಳಿ ಹಣಕಾಸು, ಕಂದಾಯ, ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಉನ್ನತ ಶಿಕ್ಷಣ, ಪ್ರವಾಸೋದ್ಯಮ, ಕಲೆ ಮತ್ತು ಸಂಸ್ಕೃತಿ ಮತ್ತು ಭಾಷೆ, ಲೋಕೋಪಯೋಗಿ ಇಲಾಖೆ, ವಿದ್ಯುತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸೇವೆ ಮತ್ತು ಜಾಗೃತ ಇಲಾಖೆ ಖಾತೆಗಳಿವೆ. ಮುಖ್ಯಮಂತ್ರಿಯಾದ ನಂತರವೂ ಈ ಎಲ್ಲ ಇಲಾಖೆಗಳನ್ನು ಅವರೇ ನಿಭಾಯಿಸುತ್ತಾರೆ ಎಂದು ಹೇಳಲಾಗಿದೆ.

ಸಂಪುಟಕ್ಕೆ ಹೊಸ ಸೇರ್ಪಡೆ: ನೂತನ ಮುಖ್ಯಮಂತ್ರಿ ಅತಿಶಿ ಅವರ ಸಂಪುಟದಲ್ಲಿ ಮುಖೇಶ್ ಅಹ್ಲಾವತ್ ಅವರನ್ನು ಹೊಸದಾಗಿ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್, ಇಮ್ರಾನ್ ಹುಸೇನ್ ಕ್ಯಾಬಿನೆಟ್ ಮಂತ್ರಿಗಳಾಗಿ ಮುಂದುವರಿಯಲಿದ್ದಾರೆ.

ಸೆಪ್ಟೆಂಬರ್ 26-27 ರಂದು ವಿಧಾನಸಭೆ ಅಧಿವೇಶನ: ಹೊಸ ಮುಖ್ಯಮಂತ್ರಿಯಾಗಿರುವ ಅತಿಶಿ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಾಗಿದೆ. ಸೆಪ್ಟೆಂಬರ್​ 26-27ರಂದು ವಿಧಾನಸಭೆ ಅಧಿವೇಶನ ನಡೆಯಲಿದೆ.

ಇದನ್ನೂ ಓದಿ: ಉತ್ತಮ ಗುಣಮಟ್ಟದ 1 ಕೆಜಿ ಶುದ್ಧ ತುಪ್ಪಕ್ಕೆ ₹1664, ತಿರುಪತಿ ಲಡ್ಡು ಪ್ರಸಾದಕ್ಕೆ ₹320 ದರದ ತುಪ್ಪ ಬಳಕೆ! - Animal Fat In Tirupati Laddu

ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಜೊತೆಗೆ ರಾಷ್ಟ್ರಪತಿಗಳ ಅನುಮೋದನೆ ಪಡೆದ ಐವರು ಶಾಸಕರಾದ ಕೈಲಾಶ್ ಗೆಹ್ಲೋಟ್, ಗೋಪಾಲ್​ ರೈ, ಸೌರಭ್​ ಭಾರಧ್ವಾಜ್​, ಇಮ್ರಾನ್ ಹುಸೇನ್, ಮುಖೇಶ್ ಅಹ್ಲಾವತ್ ಕ್ಯಾಬಿನೆಟ್​ ಸಚಿವರಾಗಿ ಪ್ರತಿಜ್ಞಾವಿಧಿ ಪಡೆದರು.

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ತಮ್ಮ ನಿವಾಸದಲ್ಲಿ ನೂತನ ಸಿಎಂ ಅತಿಶಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭ ಸರಳವಾಗಿ ನೆರವೇರಿತು. ದೆಹಲಿ ಸರ್ಕಾರದ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು.

ಅಬಕಾರಿ ಹಗರಣದಲ್ಲಿ ಆರೋಪ ಹೊತ್ತಿರುವ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಬಳಿಕ ಅತಿಶಿ ಅವರನ್ನು ಆಗಿ ಆಮ್​ ಆದ್ಮಿ ಪಕ್ಷದ ಶಾಸಕಾಂಗದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿತ್ತು. ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಪಕ್ಷದ ಕಾರ್ಯಕರ್ತರು ಮೌನಕ್ಕೆ ಜಾರಿದ್ದು, ಅತಿಶಿ ಅವರ ಪದಗ್ರಹಣ ಸಮಾರಂಭ ಕೂಡ ಅತ್ಯಂತ ಸರಳವಾಗಿ ನಡೆಯಿತು.

ಸಚಿವ ಸ್ಥಾನದಿಂದ ಮುಖ್ಯಮಂತ್ರಿ: ದೆಹಲಿ ಅಬಕಾರಿ ಹಗರಣದಲ್ಲಿ ಆರೋಪಿತರಾಗಿ ಸಿಬಿಐ ಬಂಧನಕ್ಕೆ ಒಳಗಾದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆಯ ನಂತರ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಅವರು ಅತಿಶಿ ಅವರನ್ನು ತಮ್ಮ ಸಂಪುಟದಲ್ಲಿ ಸಚಿವರನ್ನಾಗಿ ನೇಮಿಸಿದ್ದರು. 2023 ರ ಮಾರ್ಚ್​ನಲ್ಲಿ ಅತಿಶಿ ಮಂತ್ರಿಯಾದರು. ಅತಿಶಿ ಅವರು ಒಂದೇ ವರ್ಷದ ಅವಧಿಯಲ್ಲಿ ಸಚಿವರಾಗಿ ಬಳಿಕ ಮುಖ್ಯಮಂತ್ರಿಯಾಗಿ ಪದೋನ್ನತಿ ಪಡೆದುಕೊಂಡಂತಾಗಿದೆ.

ಸಂಭ್ರಮಾಚರಣೆ ಮಾಡದಂತೆ ಮನವಿ: ಅತಿಶಿ ಅವರು ದೆಹಲಿ ಸರ್ಕಾರದ ಅಧಿಕಾರದ ಚುಕ್ಕಾಣಿ ಹಿಡಿದರೂ, ಸಂಭ್ರಮಾಚರಣೆ ನಡೆಸದಂತೆ ಆಪ್​​ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದರು. ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾದ ದಿನವೇ ಅವರು ಈ ನಿರ್ಧಾರ ಪ್ರಕಟಿಸಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿರುವುದು ಬೇಸರ ತಂದಿದೆ. ಇದು ಸಂಭ್ರಮಿಸುವ ಸಮಯವಲ್ಲ ಎಂದು ಹೇಳಿದ್ದರು.

ಮೂರನೇ ಮಹಿಳಾ ಸಿಎಂ: ಅತಿಶಿ ಅವರು ದೆಹಲಿ ಸಿಎಂ ಗದ್ದುಗೆ ಏರಿದ ಮೂರನೇ ಮಹಿಳೆ ಎಂಬ ಅಭಿದಾನಕ್ಕೆ ಪಾತ್ರರಾದರು. ಇದಕ್ಕೂ ಮೊದಲು ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಅವರು ಸತತ 15 ವರ್ಷಗಳ ಕಾಲ ದೆಹಲಿಯ ಮುಖ್ಯಮಂತ್ರಿಯಾಗಿದ್ದರು. ಅವರಿಗಿಂತ ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್ ದೆಹಲಿ ಸಿಎಂ ಆಗಿ ಅಧಿಕಾರ ನಡೆಸಿದ್ದರು.

ಅತಿ ಹೆಚ್ಚು ಖಾತೆ ಹೊಂದಿರುವ ಮುಖ್ಯಮಂತ್ರಿ: ಮುಖ್ಯಮಂತ್ರಿಯಾಗುವ ಮುನ್ನ ಅತಿಶಿ ಅವರು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಅತಿ ಹೆಚ್ಚು ಖಾತೆಗಳನ್ನು ಹೊಂದಿದ್ದ ಸಚಿವರಾಗಿದ್ದರು. ಪ್ರಸ್ತುತ ಅವರ ಬಳಿ ಹಣಕಾಸು, ಕಂದಾಯ, ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಉನ್ನತ ಶಿಕ್ಷಣ, ಪ್ರವಾಸೋದ್ಯಮ, ಕಲೆ ಮತ್ತು ಸಂಸ್ಕೃತಿ ಮತ್ತು ಭಾಷೆ, ಲೋಕೋಪಯೋಗಿ ಇಲಾಖೆ, ವಿದ್ಯುತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸೇವೆ ಮತ್ತು ಜಾಗೃತ ಇಲಾಖೆ ಖಾತೆಗಳಿವೆ. ಮುಖ್ಯಮಂತ್ರಿಯಾದ ನಂತರವೂ ಈ ಎಲ್ಲ ಇಲಾಖೆಗಳನ್ನು ಅವರೇ ನಿಭಾಯಿಸುತ್ತಾರೆ ಎಂದು ಹೇಳಲಾಗಿದೆ.

ಸಂಪುಟಕ್ಕೆ ಹೊಸ ಸೇರ್ಪಡೆ: ನೂತನ ಮುಖ್ಯಮಂತ್ರಿ ಅತಿಶಿ ಅವರ ಸಂಪುಟದಲ್ಲಿ ಮುಖೇಶ್ ಅಹ್ಲಾವತ್ ಅವರನ್ನು ಹೊಸದಾಗಿ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್, ಇಮ್ರಾನ್ ಹುಸೇನ್ ಕ್ಯಾಬಿನೆಟ್ ಮಂತ್ರಿಗಳಾಗಿ ಮುಂದುವರಿಯಲಿದ್ದಾರೆ.

ಸೆಪ್ಟೆಂಬರ್ 26-27 ರಂದು ವಿಧಾನಸಭೆ ಅಧಿವೇಶನ: ಹೊಸ ಮುಖ್ಯಮಂತ್ರಿಯಾಗಿರುವ ಅತಿಶಿ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಾಗಿದೆ. ಸೆಪ್ಟೆಂಬರ್​ 26-27ರಂದು ವಿಧಾನಸಭೆ ಅಧಿವೇಶನ ನಡೆಯಲಿದೆ.

ಇದನ್ನೂ ಓದಿ: ಉತ್ತಮ ಗುಣಮಟ್ಟದ 1 ಕೆಜಿ ಶುದ್ಧ ತುಪ್ಪಕ್ಕೆ ₹1664, ತಿರುಪತಿ ಲಡ್ಡು ಪ್ರಸಾದಕ್ಕೆ ₹320 ದರದ ತುಪ್ಪ ಬಳಕೆ! - Animal Fat In Tirupati Laddu

Last Updated : 2 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.