ETV Bharat / bharat

'ಸತ್ಯಕ್ಕೆ ತೊಂದರೆ ಕೊಡಬಹುದು, ಆದರೆ ಸೋಲಿಸಲು ಸಾಧ್ಯವಿಲ್ಲ': ಆಪ್‌ ಸಂಸದ ರಾಘವ್​ ಚಡ್ಡಾ - Raghav Chadha

author img

By ANI

Published : Sep 13, 2024, 12:15 PM IST

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇಂದು ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು, ಆಪ್‌ ಹಾಗು ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ.

aap-leader-reaction-after-sc-grant-bail-to-arvind-kejriwal
ಎಎಪಿ ಸಂಸದ ರಾಘವ್​ ಚಡ್ಡಾ (ANI)

ನವದೆಹಲಿ: ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್​ ಜಾಮೀನು ಮಂಜೂರು ಮಾಡಿರುವುದನ್ನು ಆಮ್​ ಆದ್ಮಿ ಪಕ್ಷ (ಎಎಪಿ) ಸ್ವಾಗತಿಸಿದ್ದು, "ಸತ್ಯಕ್ಕೆ ತೊಂದರೆ ನೀಡಬಹುದು, ಆದರೆ ಅದನ್ನು ಸೋಲಿಸಲು ಸಾಧ್ಯವಿಲ್ಲ" ಎಂದು ಬಣ್ಣಿಸಿದೆ.

ಈ ಕುರಿತು ಪೋಸ್ಟ್​ ಮಾಡಿರುವ ಎಎಪಿ ಸಂಸದ ರಾಘವ್​ ಚಡ್ಡಾ, ಅರವಿಂದ್​ ಕೇಜ್ರಿವಾಲ್​ ಅವರಿಗೆ ಸ್ವಾಗತ. ನಿಮ್ಮನ್ನು ತುಂಬಾ ಮಿಸ್​ ಮಾಡಿಕೊಂಡಿದ್ದೆವು. ಸತ್ಯಕ್ಕೆ ತೊಂದರೆ ನೀಡಬಹುದು. ಆದರೆ, ಸೋಲಿಸಲು ಸಾಧ್ಯವಿಲ್ಲ. ಅಂತಿಮವಾಗಿ ಗೌರವಾನ್ವಿತ ಸುಪ್ರೀಂ ಕೋರ್ಟ್​ ದೆಹಲಿಯ ಪುತ್ರ ಅರವಿಂದ್​ ಕೇಜ್ರಿವಾಲ್‌ರನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿದೆ, ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ದೆಹಲಿ ಸಚಿವೆ ಅತಿಶಿ, ಸತ್ಯಮೇವ ಜಯತೇ ಎಂದು ಪೋಸ್ಟ್​ ಮಾಡಿದ್ದಾರೆ.

ಕೇಜ್ರಿವಾಲ್​ ಪತ್ನಿ ಸುನೀತಾ ಹರ್ಷ ವ್ಯಕ್ತಪಡಿಸಿ ಪೋಸ್ಟ್​ ಮಾಡಿದ್ದಾರೆ. ನಮ್ಮ ಪರವಾಗಿ ಬಲವಾಗಿ ನಿಂತಿದ್ದಕ್ಕೆ ಎಎಪಿ ಕುಟುಂಬಕ್ಕೆ ಧನ್ಯವಾದಗಳು. ನಮ್ಮ ಇತರೆ ನಾಯಕರೂ ಶೀಘ್ರದಲ್ಲೇ ಬಿಡುಗಡೆಯಾಗಲಿ ಎಂದು ಆಶಿಸಿದ್ದಾರೆ.

ದೆಹಲಿಯ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಸುಪ್ರೀಂ ಕೋರ್ಟ್​ ನಿರ್ಧಾರ ಸ್ವಾಗತಿಸಿದ್ದು, ಸುಳ್ಳು ಮತ್ತು ಪಿತೂರಿ ವಿರುದ್ಧ ಮತ್ತೊಮ್ಮೆ ಸತ್ಯ ಗೆಲುವು ಕಂಡಿದೆ ಎಂದಿದ್ದಾರೆ.

ಕಾಂಗ್ರೆಸ್​ ನಾಯಕ ಮತ್ತು ರಾಜ್ಯಸಭಾ ಸಂಸದ ಪ್ರಮೋದ್​ ತಿವಾರಿ ಪ್ರತಿಕ್ರಿಯಿಸಿ, ಮೊದಲಿಗೆ ಜಾರ್ಖಂಡ್​ ಸಿಎಂ ಹೇಮಂತ್​ ಸೊರೇನ್ ಅವರಿ​​ಗೆ ಜಾಮೀನು ಸಿಕ್ಕಿತು. ಇದೀಗ ಅರವಿಂದ್​ ಕೇಜ್ರಿವಾಲ್​ ಅವರಿಗೆ ದೊರೆತಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಪ್ರತಿಪಕ್ಷಗಳ ವಿರುದ್ಧ ದುರ್ಬಳಕೆ ಮಾಡಿ ದೇಶದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ ಎಂದು ಟೀಕಿಸಿದರು.

ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ಗೆ ಕೊನೆಗೂ ಸಿಕ್ತು ಜಾಮೀನು

ನವದೆಹಲಿ: ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್​ ಜಾಮೀನು ಮಂಜೂರು ಮಾಡಿರುವುದನ್ನು ಆಮ್​ ಆದ್ಮಿ ಪಕ್ಷ (ಎಎಪಿ) ಸ್ವಾಗತಿಸಿದ್ದು, "ಸತ್ಯಕ್ಕೆ ತೊಂದರೆ ನೀಡಬಹುದು, ಆದರೆ ಅದನ್ನು ಸೋಲಿಸಲು ಸಾಧ್ಯವಿಲ್ಲ" ಎಂದು ಬಣ್ಣಿಸಿದೆ.

ಈ ಕುರಿತು ಪೋಸ್ಟ್​ ಮಾಡಿರುವ ಎಎಪಿ ಸಂಸದ ರಾಘವ್​ ಚಡ್ಡಾ, ಅರವಿಂದ್​ ಕೇಜ್ರಿವಾಲ್​ ಅವರಿಗೆ ಸ್ವಾಗತ. ನಿಮ್ಮನ್ನು ತುಂಬಾ ಮಿಸ್​ ಮಾಡಿಕೊಂಡಿದ್ದೆವು. ಸತ್ಯಕ್ಕೆ ತೊಂದರೆ ನೀಡಬಹುದು. ಆದರೆ, ಸೋಲಿಸಲು ಸಾಧ್ಯವಿಲ್ಲ. ಅಂತಿಮವಾಗಿ ಗೌರವಾನ್ವಿತ ಸುಪ್ರೀಂ ಕೋರ್ಟ್​ ದೆಹಲಿಯ ಪುತ್ರ ಅರವಿಂದ್​ ಕೇಜ್ರಿವಾಲ್‌ರನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿದೆ, ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ದೆಹಲಿ ಸಚಿವೆ ಅತಿಶಿ, ಸತ್ಯಮೇವ ಜಯತೇ ಎಂದು ಪೋಸ್ಟ್​ ಮಾಡಿದ್ದಾರೆ.

ಕೇಜ್ರಿವಾಲ್​ ಪತ್ನಿ ಸುನೀತಾ ಹರ್ಷ ವ್ಯಕ್ತಪಡಿಸಿ ಪೋಸ್ಟ್​ ಮಾಡಿದ್ದಾರೆ. ನಮ್ಮ ಪರವಾಗಿ ಬಲವಾಗಿ ನಿಂತಿದ್ದಕ್ಕೆ ಎಎಪಿ ಕುಟುಂಬಕ್ಕೆ ಧನ್ಯವಾದಗಳು. ನಮ್ಮ ಇತರೆ ನಾಯಕರೂ ಶೀಘ್ರದಲ್ಲೇ ಬಿಡುಗಡೆಯಾಗಲಿ ಎಂದು ಆಶಿಸಿದ್ದಾರೆ.

ದೆಹಲಿಯ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಸುಪ್ರೀಂ ಕೋರ್ಟ್​ ನಿರ್ಧಾರ ಸ್ವಾಗತಿಸಿದ್ದು, ಸುಳ್ಳು ಮತ್ತು ಪಿತೂರಿ ವಿರುದ್ಧ ಮತ್ತೊಮ್ಮೆ ಸತ್ಯ ಗೆಲುವು ಕಂಡಿದೆ ಎಂದಿದ್ದಾರೆ.

ಕಾಂಗ್ರೆಸ್​ ನಾಯಕ ಮತ್ತು ರಾಜ್ಯಸಭಾ ಸಂಸದ ಪ್ರಮೋದ್​ ತಿವಾರಿ ಪ್ರತಿಕ್ರಿಯಿಸಿ, ಮೊದಲಿಗೆ ಜಾರ್ಖಂಡ್​ ಸಿಎಂ ಹೇಮಂತ್​ ಸೊರೇನ್ ಅವರಿ​​ಗೆ ಜಾಮೀನು ಸಿಕ್ಕಿತು. ಇದೀಗ ಅರವಿಂದ್​ ಕೇಜ್ರಿವಾಲ್​ ಅವರಿಗೆ ದೊರೆತಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಪ್ರತಿಪಕ್ಷಗಳ ವಿರುದ್ಧ ದುರ್ಬಳಕೆ ಮಾಡಿ ದೇಶದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ ಎಂದು ಟೀಕಿಸಿದರು.

ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ಗೆ ಕೊನೆಗೂ ಸಿಕ್ತು ಜಾಮೀನು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.