ETV Bharat / bharat

1962ರ ನಂತರ ಮೊದಲ ಬಾರಿಗೆ ಒಂದು ಸರ್ಕಾರ ಸತತ 3ನೇ ಬಾರಿ ಗೆದ್ದಿದೆ: ಪ್ರಧಾನಿ ಮೋದಿ - PM Modi

ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ 2024ರ ಲೋಕಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿತು. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಸರ್ಕಾರ ರಚಿಸಲು ಸರಳ ಬಹುಮತ ಪಡೆದಿದೆ. ಚುನಾವಣಾ ಫಲಿತಾಂಶದ ಬಳಿಕ ಸಂಜೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿ, ಮಾತನಾಡಿದರು.

author img

By ETV Bharat Karnataka Team

Published : Jun 4, 2024, 10:48 PM IST

ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ (IANS)

ನವದೆಹಲಿ: ಬಿಜೆಪಿ ಮತ್ತು ಎನ್‌ಡಿಎ ಮೇಲೆ ಜನರು ಪೂರ್ಣ ಪ್ರಮಾಣದ ಆತ್ಮವಿಶ್ವಾಸವನ್ನು ತೋರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣಾ ಫಲಿತಾಂಶವು ದೇಶದ ಜನರು, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ನಂಬಿಕೆಯ ಗೆಲುವು ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.

ಇಂದು ಸಂಜೆ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿ ನೆರೆದಿದ್ದ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಅವರು ಮಾತನಾಡಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವೇದಿಕೆಯ ಹಿಂಭಾಗದಲ್ಲಿ 'ಥ್ಯಾಂಕ್ಯೂ ಇಂಡಿಯಾ' ಎಂದು ಉರ್ದು ಸೇರಿದಂತೆ ದೇಶದ ಭಾಷೆಗಳಲ್ಲಿ ಬರೆಯಲಾಗಿತ್ತು.

1962ರ ಬಳಿಕ ಇದೇ ಮೊದಲ ಬಾರಿಗೆ ಒಂದು ಸರ್ಕಾರಕ್ಕೆ ಕೇಂದ್ರದಲ್ಲಿ 3ನೇ ಬಾರಿಗೆ ಬಹುಮತ ದೊರೆತಿದೆ ಎಂದು ಮೋದಿ ತಿಳಿಸಿದರು. ಇದಕ್ಕೂ ಮುನ್ನ ಮೋದಿ "ಜೈ ಜಗನ್ನಾಥ್" ಎನ್ನುತ್ತಾ ಭಾಷಣ ಆರಂಭಿಸಿ, ಒಡಿಶಾದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಟ್ಟ ಜನತೆಗೆ ಧನ್ಯವಾದ ಹೇಳಿದರು.

ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯೊಬ್ಬರು ಜಯ ಗಳಿಸಿರುವುದನ್ನು ಅವರು ಉಲ್ಲೇಖಿಸಿದರು. ರಾಜ್ಯದಲ್ಲಿ ಪಕ್ಷದ ಅನೇಕ ಕಾರ್ಯಕರ್ತರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಸ್ಮರಿಸಿದರು.

ಮೋದಿ ತಮ್ಮ ಭಾಷಣದಲ್ಲಿ, ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು, ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಎನ್‌ಡಿಎ ಉತ್ತಮ ಸಾಧನೆ ತೋರಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ, ವಿಶ್ವದ ಅತಿದೊಡ್ಡ ಚುನಾವಣೆಯನ್ನು ಅತ್ಯಂತ ದಕ್ಷತೆಯಿಂದ ನೆರವೇರಿಸಿದ ಕೇಂದ್ರ ಚುನಾವಣಾ ಆಯೋಗವನ್ನೂ ಅಭಿನಂದಿಸಿದರು.

ಇದನ್ನೂ ಓದಿ: ಬಿಜೆಪಿ ನೇತೃತ್ವದ ಎನ್‌ಡಿಎಗೆ ಸರಳ ಬಹುಮತ: ಮತ್ತೆ ಪುಟಿದೆದ್ದ ಕಾಂಗ್ರೆಸ್​ ಮೈತ್ರಿಕೂಟ - Lok Sabha Election Results 2024

ನವದೆಹಲಿ: ಬಿಜೆಪಿ ಮತ್ತು ಎನ್‌ಡಿಎ ಮೇಲೆ ಜನರು ಪೂರ್ಣ ಪ್ರಮಾಣದ ಆತ್ಮವಿಶ್ವಾಸವನ್ನು ತೋರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣಾ ಫಲಿತಾಂಶವು ದೇಶದ ಜನರು, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ನಂಬಿಕೆಯ ಗೆಲುವು ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.

ಇಂದು ಸಂಜೆ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿ ನೆರೆದಿದ್ದ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಅವರು ಮಾತನಾಡಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವೇದಿಕೆಯ ಹಿಂಭಾಗದಲ್ಲಿ 'ಥ್ಯಾಂಕ್ಯೂ ಇಂಡಿಯಾ' ಎಂದು ಉರ್ದು ಸೇರಿದಂತೆ ದೇಶದ ಭಾಷೆಗಳಲ್ಲಿ ಬರೆಯಲಾಗಿತ್ತು.

1962ರ ಬಳಿಕ ಇದೇ ಮೊದಲ ಬಾರಿಗೆ ಒಂದು ಸರ್ಕಾರಕ್ಕೆ ಕೇಂದ್ರದಲ್ಲಿ 3ನೇ ಬಾರಿಗೆ ಬಹುಮತ ದೊರೆತಿದೆ ಎಂದು ಮೋದಿ ತಿಳಿಸಿದರು. ಇದಕ್ಕೂ ಮುನ್ನ ಮೋದಿ "ಜೈ ಜಗನ್ನಾಥ್" ಎನ್ನುತ್ತಾ ಭಾಷಣ ಆರಂಭಿಸಿ, ಒಡಿಶಾದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಟ್ಟ ಜನತೆಗೆ ಧನ್ಯವಾದ ಹೇಳಿದರು.

ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯೊಬ್ಬರು ಜಯ ಗಳಿಸಿರುವುದನ್ನು ಅವರು ಉಲ್ಲೇಖಿಸಿದರು. ರಾಜ್ಯದಲ್ಲಿ ಪಕ್ಷದ ಅನೇಕ ಕಾರ್ಯಕರ್ತರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಸ್ಮರಿಸಿದರು.

ಮೋದಿ ತಮ್ಮ ಭಾಷಣದಲ್ಲಿ, ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು, ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಎನ್‌ಡಿಎ ಉತ್ತಮ ಸಾಧನೆ ತೋರಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ, ವಿಶ್ವದ ಅತಿದೊಡ್ಡ ಚುನಾವಣೆಯನ್ನು ಅತ್ಯಂತ ದಕ್ಷತೆಯಿಂದ ನೆರವೇರಿಸಿದ ಕೇಂದ್ರ ಚುನಾವಣಾ ಆಯೋಗವನ್ನೂ ಅಭಿನಂದಿಸಿದರು.

ಇದನ್ನೂ ಓದಿ: ಬಿಜೆಪಿ ನೇತೃತ್ವದ ಎನ್‌ಡಿಎಗೆ ಸರಳ ಬಹುಮತ: ಮತ್ತೆ ಪುಟಿದೆದ್ದ ಕಾಂಗ್ರೆಸ್​ ಮೈತ್ರಿಕೂಟ - Lok Sabha Election Results 2024

ETV Bharat Logo

Copyright © 2024 Ushodaya Enterprises Pvt. Ltd., All Rights Reserved.