ETV Bharat / bharat

ರಾಷ್ಟ್ರಪತಿ ಭವನದಲ್ಲಿ ಕತಾರ್​ ದೊರೆಗೆ ಗಾರ್ಡ್‌ ಆಫ್‌ ಆನರ್‌, ಸಾಂಪ್ರದಾಯಿಕ ಸ್ವಾಗತ- ವಿಡಿಯೋ - AMIR OF QATAR IN DELHI

ಭಾರತ-ಕತಾರ್ ದ್ವಿಪಕ್ಷೀಯ ಸಂಬಂಧವೃದ್ಧಿಯಲ್ಲಿ ಇದು ಅತ್ಯಂತ ಪ್ರಮುಖ ಭೇಟಿ. ಹಲವು ಅಭಿವೃದ್ಧಿ ಯೋಜನೆಗಳ ಪಾಲುದಾರಿಕೆಯ ಕುರಿತು ಪ್ರಧಾನಿ ಮೋದಿ ಮತ್ತು ಕತಾರ್​ ದೊರೆ ಮಹತ್ವದ ಚರ್ಚೆ ನಡೆಸಲಿದ್ದಾರೆ.

amir-of-qatar-receives-guard-of-honour-at-rashtrapati-bhavan
ರಾಷ್ಟ್ರಪತಿ ಭವನದಲ್ಲಿ ಕತಾರ್​ ದೊರೆಗೆ ಗಾರ್ಡ್​ ಆಫ್​ ಆನರ್​ (ANI)
author img

By ETV Bharat Karnataka Team

Published : Feb 18, 2025, 12:21 PM IST

Updated : Feb 18, 2025, 1:14 PM IST

ನವದೆಹಲಿ: ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ಕತಾರ್​ ದೊರೆ ತಮೀಮ್​ ಬಿನ್​ ಹಮದ್​ ಅಲ್​ ಥನಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಇಂದು ಗಾರ್ಡ್​ ಆಫ್​ ಆನರ್​ ಮೂಲಕ ಸರ್ಕಾರಿ ಗೌರವಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಜೊತೆಯಲ್ಲಿ ಹಿರಿಯ ಸಚಿವರು ಕತಾರ್‌ ದೊರೆಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ವೇಳೆ ಕತಾರ್‌ ನಿಯೋಗವನ್ನು ರಾಷ್ಟ್ರಪತಿ ಮುರ್ಮು ಸ್ವಾಗತಿಸಿದರು.

ಭಾರತ ಭೇಟಿಗಾಗಿ ಸೋಮವಾರ ತಮೀಮ್​ ಬಿನ್​ ಹಮದ್​ ಅಲ್​ ಥಾನಿ ಭಾರತಕ್ಕೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಖುದ್ದು ವಿಮಾನ ನಿಲ್ದಾಣಕ್ಕೆ ತೆರಳಿ ಬರಮಾಡಿಕೊಂಡು ವಿಶೇಷ ಗೌರವ ನೀಡಿದ್ದರು. ಈ ಸಂದರ್ಭದಲ್ಲಿ ವಿದೇಶಾಂಗ ಸಚಿವ ಜೈಶಂಕರ್​ ಕೂಡ ಉಪಸ್ಥಿತರಿದ್ದರು. "ಕತಾರ್​ ದೊರೆ ತನ್ನ ಸಹೋದರನಿದ್ದಂತೆ" ಎಂದು ಹೇಳಿದ್ದ ಪ್ರಧಾನಿ ಮೋದಿ, ಅವರ ಭೇಟಿ ಫಲಪ್ರದವಾಗಲಿ ಎಂದು ಹಾರೈಸಿದ್ದರು.

ಕತಾರ್​ ದೊರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಚರ್ಚೆ ನಡೆಸಲಿದ್ದು, ಅವರಿಗಾಗಿ ವಿಶೇಷ ಔತಣಕೂಟವನ್ನು ಆಯೋಜಿಸಿದ್ದಾರೆ. ಇದಾದ ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ಹಲವು ವಿಚಾರಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಕತಾರ್​ ದೊರೆಯೊಂದಿಗೆ ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಉದ್ಯಮಿಗಳ ನಿಯೋಗವೂ ಆಗಮಿಸಿದೆ. ಈ ಮೊದಲು 2015ರ ಮಾರ್ಚ್​ನಲ್ಲಿ ಕತಾರ್​ ದೊರೆ ಭಾರತಕ್ಕೆ ಭೇಟಿ ನೀಡಿದ್ದರು. ಇದು ಅವರ ಎರಡನೇ ಭೇಟಿಯಾಗಿದೆ.

ಕತಾರ್​ನಲ್ಲಿ ಭಾರತದ ಅತೀ ದೊಡ್ಡ ವಲಸಿಗ ಸಮುದಾಯವಿದೆ. ಕತಾರ್​ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಅವರ ಸಕಾರಾತ್ಮಕ ಕೊಡುಗೆಗಳು ಮೆಚ್ಚುಗೆ ಪಡೆದಿವೆ. ಈ ಭೇಟಿಯು ಎರಡು ದೇಶಗಳ ನಡುವಿನ ಹಲವು ಅಭಿವೃದ್ಧಿ ಪಾಲುದಾರಿಕೆಗೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಆಲಂಗಿಸಿಕೊಂಡು ಸ್ವಾಗತ ಕೋರಿದ ಅಧ್ಯಕ್ಷ ಟ್ರಂಪ್

ನವದೆಹಲಿ: ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ಕತಾರ್​ ದೊರೆ ತಮೀಮ್​ ಬಿನ್​ ಹಮದ್​ ಅಲ್​ ಥನಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಇಂದು ಗಾರ್ಡ್​ ಆಫ್​ ಆನರ್​ ಮೂಲಕ ಸರ್ಕಾರಿ ಗೌರವಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಜೊತೆಯಲ್ಲಿ ಹಿರಿಯ ಸಚಿವರು ಕತಾರ್‌ ದೊರೆಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ವೇಳೆ ಕತಾರ್‌ ನಿಯೋಗವನ್ನು ರಾಷ್ಟ್ರಪತಿ ಮುರ್ಮು ಸ್ವಾಗತಿಸಿದರು.

ಭಾರತ ಭೇಟಿಗಾಗಿ ಸೋಮವಾರ ತಮೀಮ್​ ಬಿನ್​ ಹಮದ್​ ಅಲ್​ ಥಾನಿ ಭಾರತಕ್ಕೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಖುದ್ದು ವಿಮಾನ ನಿಲ್ದಾಣಕ್ಕೆ ತೆರಳಿ ಬರಮಾಡಿಕೊಂಡು ವಿಶೇಷ ಗೌರವ ನೀಡಿದ್ದರು. ಈ ಸಂದರ್ಭದಲ್ಲಿ ವಿದೇಶಾಂಗ ಸಚಿವ ಜೈಶಂಕರ್​ ಕೂಡ ಉಪಸ್ಥಿತರಿದ್ದರು. "ಕತಾರ್​ ದೊರೆ ತನ್ನ ಸಹೋದರನಿದ್ದಂತೆ" ಎಂದು ಹೇಳಿದ್ದ ಪ್ರಧಾನಿ ಮೋದಿ, ಅವರ ಭೇಟಿ ಫಲಪ್ರದವಾಗಲಿ ಎಂದು ಹಾರೈಸಿದ್ದರು.

ಕತಾರ್​ ದೊರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಚರ್ಚೆ ನಡೆಸಲಿದ್ದು, ಅವರಿಗಾಗಿ ವಿಶೇಷ ಔತಣಕೂಟವನ್ನು ಆಯೋಜಿಸಿದ್ದಾರೆ. ಇದಾದ ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ಹಲವು ವಿಚಾರಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಕತಾರ್​ ದೊರೆಯೊಂದಿಗೆ ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಉದ್ಯಮಿಗಳ ನಿಯೋಗವೂ ಆಗಮಿಸಿದೆ. ಈ ಮೊದಲು 2015ರ ಮಾರ್ಚ್​ನಲ್ಲಿ ಕತಾರ್​ ದೊರೆ ಭಾರತಕ್ಕೆ ಭೇಟಿ ನೀಡಿದ್ದರು. ಇದು ಅವರ ಎರಡನೇ ಭೇಟಿಯಾಗಿದೆ.

ಕತಾರ್​ನಲ್ಲಿ ಭಾರತದ ಅತೀ ದೊಡ್ಡ ವಲಸಿಗ ಸಮುದಾಯವಿದೆ. ಕತಾರ್​ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಅವರ ಸಕಾರಾತ್ಮಕ ಕೊಡುಗೆಗಳು ಮೆಚ್ಚುಗೆ ಪಡೆದಿವೆ. ಈ ಭೇಟಿಯು ಎರಡು ದೇಶಗಳ ನಡುವಿನ ಹಲವು ಅಭಿವೃದ್ಧಿ ಪಾಲುದಾರಿಕೆಗೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಆಲಂಗಿಸಿಕೊಂಡು ಸ್ವಾಗತ ಕೋರಿದ ಅಧ್ಯಕ್ಷ ಟ್ರಂಪ್

Last Updated : Feb 18, 2025, 1:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.