ETV Bharat / bharat

ಟೈಪ್2 ಡಯಾಬಿಟೀಸ್​ ಇದ್ದರೂ ಜೈಲಿನಲ್ಲಿ ಕೇಜ್ರಿವಾಲ್​ರಿಂದ ಅಧಿಕ ಸಿಹಿ ಸೇವನೆ: ನ್ಯಾಯಾಲಯಕ್ಕೆ ಇಡಿ ಹೇಳಿಕೆ - Arvind Kejriwal

author img

By PTI

Published : Apr 18, 2024, 6:33 PM IST

ದೆಹಲಿ ಸಿಎಂ ಕೇಜ್ರಿವಾಲ್ ಅವರು ಜೈಲಿನಲ್ಲಿ ಸಕ್ಕರೆ ಅಂಶ ಹೆಚ್ಚಾಗಿರುವ ಆಹಾರ ಪದಾರ್ಥಗಳನ್ನು ಸೇವಿಸುತ್ತಿದ್ದಾರೆ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ.

Kejriwal eating food high in sugar despite type 2 diabetes to make grounds for bail
Kejriwal eating food high in sugar despite type 2 diabetes to make grounds for bail

ನವದೆಹಲಿ: ಅಬಕಾರಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮಗೆ ಟೈಪ್ 2 ಮಧುಮೇಹವಿದ್ದರೂ ಪ್ರತಿದಿನ ಮಾವು ಮತ್ತು ಸಿಹಿತಿಂಡಿಗಳಂತಹ ಸಕ್ಕರೆಯ ಅಂಶ ಹೆಚ್ಚಾಗಿರುವ ಆಹಾರಗಳನ್ನು ಸೇವಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ನ್ಯಾಯಾಲಯಕ್ಕೆ ಹೇಳಿದೆ. ವೈದ್ಯಕೀಯ ಆಧಾರದಲ್ಲಿ ಜಾಮೀನು ಪಡೆಯುವ ಸಲುವಾಗಿ ಕಾರಣಗಳನ್ನು ಸೃಷ್ಟಿಸಲು ಅವರು ಹೀಗೆ ಮಾಡುತ್ತಿದ್ದಾರೆ ಎಂದು ಇಡಿ ಆರೋಪಿಸಿದೆ.

ಸಿಬಿಐ ಮತ್ತು ಇಡಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಜಾರಿ ನಿರ್ದೇಶನಾಲಯ (ಇಡಿ) ಇಂಥದ್ದೊಂದು ವಾದ ಮಂಡಿಸಿದೆ. ಕೇಜ್ರಿವಾಲ್ ಅವರ ಡಯಟ್ ಚಾರ್ಟ್ ಸೇರಿದಂತೆ ಈ ವಿಷಯದ ಬಗ್ಗೆ ವರದಿ ಸಲ್ಲಿಸುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಸಕ್ಕರೆ ಮಟ್ಟದಲ್ಲಿ ಏರಿಳಿತವಾಗುತ್ತಿರುವುದರಿಂದ ತಮ್ಮ ದೈನಂದಿನ ವೈದ್ಯರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕಿಸಲು ಅನುಮತಿ ನೀಡುವಂತೆ ಕೇಜ್ರಿವಾಲ್ ನ್ಯಾಯಾಲಯಕ್ಕೆ ಮನವಿ ಮಾಡಿರುವುದು ಗಮನಾರ್ಹ. ನ್ಯಾಯಾಲಯವು ಈ ವಿಷಯದ ಬಗ್ಗೆ ನಾಳೆ ಮುಂದಿನ ವಿಚಾರಣೆ ನಡೆಸುವ ಸಾಧ್ಯತೆಯಿದ್ದು, ಅಷ್ಟರೊಳಗೆ ವರದಿ ಸಲ್ಲಿಸುವಂತೆ ನ್ಯಾಯಾಧೀಶರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

"ಅರವಿಂದ್ ಕೇಜ್ರಿವಾಲ್ ಅವರು ಟೈಪ್ 2 ಮಧುಮೇಹ ಹೊಂದಿದ್ದರೂ ಹೆಚ್ಚಿನ ಸಕ್ಕರೆ ಅಂಶವಿರುವ ಆಹಾರವನ್ನು ಸೇವಿಸುತ್ತಿದ್ದಾರೆ. ಅವರು ಪ್ರತಿದಿನ ಆಲೂ ಪೂರಿ, ಮಾವು, ಸಿಹಿತಿಂಡಿಗಳನ್ನು ಸೇವಿಸುತ್ತಿದ್ದಾರೆ. ವೈದ್ಯಕೀಯ ಜಾಮೀನಿಗೆ ಆಧಾರ ಸೃಷ್ಟಿಸಲು ಹೀಗೆ ಮಾಡಲಾಗುತ್ತಿದೆ" ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ.

ಏತನ್ಮಧ್ಯೆ, 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ನಿಧಿಯನ್ನು ನಿರ್ವಹಿಸಿದ ಆರೋಪ ಹೊತ್ತಿರುವ ಚನ್ ಪ್ರೀತ್ ಸಿಂಗ್ ಅವರ ಇಡಿ ಕಸ್ಟಡಿ ಅವಧಿ ಮುಗಿದಿದೆ. ಹೀಗಾಗಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಧೀಶರು ಏಪ್ರಿಲ್ 23 ರವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

ದಕ್ಷಿಣ ರಾಜ್ಯದ ಗುಂಪಿನಿಂದ ಕಿಕ್ ಬ್ಯಾಕ್ ರೂಪದಲ್ಲಿ ಪಡೆದ 100 ಕೋಟಿ ರೂ.ಗಳ ಪೈಕಿ ಹೆಚ್ಚಿನ ಭಾಗವನ್ನು ಆಪ್ ಗೋವಾ ವಿಧಾನಸಭಾ ಚುನಾವಣೆಗಾಗಿ ಬಳಸಿದೆ ಎಂದು ಇಡಿ ಆರೋಪಿಸಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ಏಪ್ರಿಲ್ 26 ರವರೆಗೆ ವಿಸ್ತರಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಧೀಶರು ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದರು.

ಇದನ್ನೂ ಓದಿ: ರಾಜ್ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ - Raj Kundra

ನವದೆಹಲಿ: ಅಬಕಾರಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮಗೆ ಟೈಪ್ 2 ಮಧುಮೇಹವಿದ್ದರೂ ಪ್ರತಿದಿನ ಮಾವು ಮತ್ತು ಸಿಹಿತಿಂಡಿಗಳಂತಹ ಸಕ್ಕರೆಯ ಅಂಶ ಹೆಚ್ಚಾಗಿರುವ ಆಹಾರಗಳನ್ನು ಸೇವಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ನ್ಯಾಯಾಲಯಕ್ಕೆ ಹೇಳಿದೆ. ವೈದ್ಯಕೀಯ ಆಧಾರದಲ್ಲಿ ಜಾಮೀನು ಪಡೆಯುವ ಸಲುವಾಗಿ ಕಾರಣಗಳನ್ನು ಸೃಷ್ಟಿಸಲು ಅವರು ಹೀಗೆ ಮಾಡುತ್ತಿದ್ದಾರೆ ಎಂದು ಇಡಿ ಆರೋಪಿಸಿದೆ.

ಸಿಬಿಐ ಮತ್ತು ಇಡಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಜಾರಿ ನಿರ್ದೇಶನಾಲಯ (ಇಡಿ) ಇಂಥದ್ದೊಂದು ವಾದ ಮಂಡಿಸಿದೆ. ಕೇಜ್ರಿವಾಲ್ ಅವರ ಡಯಟ್ ಚಾರ್ಟ್ ಸೇರಿದಂತೆ ಈ ವಿಷಯದ ಬಗ್ಗೆ ವರದಿ ಸಲ್ಲಿಸುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಸಕ್ಕರೆ ಮಟ್ಟದಲ್ಲಿ ಏರಿಳಿತವಾಗುತ್ತಿರುವುದರಿಂದ ತಮ್ಮ ದೈನಂದಿನ ವೈದ್ಯರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕಿಸಲು ಅನುಮತಿ ನೀಡುವಂತೆ ಕೇಜ್ರಿವಾಲ್ ನ್ಯಾಯಾಲಯಕ್ಕೆ ಮನವಿ ಮಾಡಿರುವುದು ಗಮನಾರ್ಹ. ನ್ಯಾಯಾಲಯವು ಈ ವಿಷಯದ ಬಗ್ಗೆ ನಾಳೆ ಮುಂದಿನ ವಿಚಾರಣೆ ನಡೆಸುವ ಸಾಧ್ಯತೆಯಿದ್ದು, ಅಷ್ಟರೊಳಗೆ ವರದಿ ಸಲ್ಲಿಸುವಂತೆ ನ್ಯಾಯಾಧೀಶರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

"ಅರವಿಂದ್ ಕೇಜ್ರಿವಾಲ್ ಅವರು ಟೈಪ್ 2 ಮಧುಮೇಹ ಹೊಂದಿದ್ದರೂ ಹೆಚ್ಚಿನ ಸಕ್ಕರೆ ಅಂಶವಿರುವ ಆಹಾರವನ್ನು ಸೇವಿಸುತ್ತಿದ್ದಾರೆ. ಅವರು ಪ್ರತಿದಿನ ಆಲೂ ಪೂರಿ, ಮಾವು, ಸಿಹಿತಿಂಡಿಗಳನ್ನು ಸೇವಿಸುತ್ತಿದ್ದಾರೆ. ವೈದ್ಯಕೀಯ ಜಾಮೀನಿಗೆ ಆಧಾರ ಸೃಷ್ಟಿಸಲು ಹೀಗೆ ಮಾಡಲಾಗುತ್ತಿದೆ" ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ.

ಏತನ್ಮಧ್ಯೆ, 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ನಿಧಿಯನ್ನು ನಿರ್ವಹಿಸಿದ ಆರೋಪ ಹೊತ್ತಿರುವ ಚನ್ ಪ್ರೀತ್ ಸಿಂಗ್ ಅವರ ಇಡಿ ಕಸ್ಟಡಿ ಅವಧಿ ಮುಗಿದಿದೆ. ಹೀಗಾಗಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಧೀಶರು ಏಪ್ರಿಲ್ 23 ರವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

ದಕ್ಷಿಣ ರಾಜ್ಯದ ಗುಂಪಿನಿಂದ ಕಿಕ್ ಬ್ಯಾಕ್ ರೂಪದಲ್ಲಿ ಪಡೆದ 100 ಕೋಟಿ ರೂ.ಗಳ ಪೈಕಿ ಹೆಚ್ಚಿನ ಭಾಗವನ್ನು ಆಪ್ ಗೋವಾ ವಿಧಾನಸಭಾ ಚುನಾವಣೆಗಾಗಿ ಬಳಸಿದೆ ಎಂದು ಇಡಿ ಆರೋಪಿಸಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ಏಪ್ರಿಲ್ 26 ರವರೆಗೆ ವಿಸ್ತರಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಧೀಶರು ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದರು.

ಇದನ್ನೂ ಓದಿ: ರಾಜ್ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ - Raj Kundra

ETV Bharat Logo

Copyright © 2024 Ushodaya Enterprises Pvt. Ltd., All Rights Reserved.