ETV Bharat / bharat

ಟ್ಯೂಷನ್​ನಿಂದ ಮರಳುತ್ತಿದ್ದ 10ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ - Assam Girl Gangraped

author img

By ETV Bharat Karnataka Team

Published : Aug 23, 2024, 10:41 PM IST

ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ಅಸ್ಸಾಂ ಸಿಎಂ ಹಿಮಂತ್​ ಬಿಸ್ವಾ ಶರ್ಮಾ ನೀಡಿದ್ದಾರೆ.

Assam 14 year old girl was allegedly gang raped when she was returning home from tuition
ಅಸ್ಸಾಂ ಸಿಎಂ ಹಿಮಂತ್​ ಬಿಸ್ವಾ ಶರ್ಮಾ (IANS)

ನಾಗಾನ್​: ಕೋಲ್ಕತ್ತಾ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮತ್ತೊಂದು ಹೇಯ ಕೃತ್ಯ ಅಸ್ಸಾಂ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಇಲ್ಲಿನ ನಾಗಾನ್​ನ ಧಿಂಗ್​ ಪ್ರದೇಶದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆಗೆ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಘಟನೆಯ ವಿವರ: ಆಗಸ್ಟ್​ 22ರಂದು ಧಿಂಗ್​ ನಗರದಲ್ಲಿ ಟ್ಯೂಷನ್​ ಮುಗಿಸಿ ಮರಳುತ್ತಿದ್ದ ಬಾಲಕಿಯನ್ನು ಮೂವರು ದುಷ್ಕರ್ಮಿಗಳು ಎಳೆದೊಯ್ದು ಭಗಕ್​ ಗಾನ್​ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ, ಸ್ಥಳೀಯ ಸ್ಮಶಾನದ ಬಳಿ ಬಿಟ್ಟು ಹೋಗಿದ್ದಾರೆ. ಬೆತ್ತಲಾಗಿ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯನ್ನು ಪಾದಚಾರಿಯೊಬ್ಬರು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣಕ್ಕೆ ಸ್ಥಳಕ್ಕೆ ಬಂದು ಸಂತ್ರಸ್ತೆಯನ್ನು ಆಸ್ಪತ್ರೆ ದಾಖಲಿಸಿ, ಪ್ರಕರಣ ದಾಖಲಿಸಿದ್ದಾರೆ.

ದುರದೃಷ್ಟಕರ ಘಟನೆ- ಎಸ್​ಪಿ: ಈ ಪ್ರಕರಣ ರಾಜ್ಯದಲ್ಲಿ ಆಘಾತ ಮೂಡಿಸಿದೆ. ನಾಗಾನ್​ ಜಿಲ್ಲಾ ಎಸ್‌ಪಿ ಸ್ವಪನನಿಲ್​ ದೆಕಾ ಅವರನ್ನೊಳಗೊಂಡ ಪೊಲೀಸರ ತಂಡ ತನಿಖೆಗೆ ಮುಂದಾಗಿದೆ. ಘಟನೆ ಕುರಿತು ಮಾತನಾಡಿರುವ ಎಸ್​ಪಿ, ಇದು ದುರಾದೃಷ್ಟಕರ. ಆರೋಪಿಗಳ ಪತ್ತೆ ಕ್ರಮ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಅವರನ್ನು ಬಂಧಿಸಿ, ಶಿಕ್ಷೆಗೆ ಒಳಪಡಿಸಲಾಗುವುದು ಎಂದಿದ್ದಾರೆ.

ಧಿಂಗ್​ ಬಂದ್​: ಕೋಲ್ಕತ್ತಾದ ಬಳಿಕ ಅಸ್ಸಾಂನಲ್ಲಿ ನಡೆದಿರುವ ಘಟನೆ ಇದೀಗ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆ ಮೂಡಿಸಿದೆ ಎಂದು ಸ್ಥಳೀಯ ಸಂಘಟನೆಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪರಾಧಿಗಳನ್ನು ತಕ್ಷಣ ಬಂಧಿಸಬೇಕು ಎಂಬ ಬೇಡಿಕೆಯೊಂದಿಗೆ ಅಖಿಲ ಭಾರತ ವಿದ್ಯಾರ್ಥಿ ಯೂನಿಯನ್​ ಮತ್ತು ಸ್ಥಳೀಯರು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದರು.

ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ: ಘಟನೆ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ, ಹೇಯ ಕೃತ್ಯ ಎಸಗಿದ ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಇಲಿ ಪಾಷಾಣ ಸೇವಿಸಿ​ ಅತ್ಯಾಚಾರ ಪ್ರಕರಣದ ಆರೋಪಿ ಸಾವು

ನಾಗಾನ್​: ಕೋಲ್ಕತ್ತಾ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮತ್ತೊಂದು ಹೇಯ ಕೃತ್ಯ ಅಸ್ಸಾಂ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಇಲ್ಲಿನ ನಾಗಾನ್​ನ ಧಿಂಗ್​ ಪ್ರದೇಶದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆಗೆ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಘಟನೆಯ ವಿವರ: ಆಗಸ್ಟ್​ 22ರಂದು ಧಿಂಗ್​ ನಗರದಲ್ಲಿ ಟ್ಯೂಷನ್​ ಮುಗಿಸಿ ಮರಳುತ್ತಿದ್ದ ಬಾಲಕಿಯನ್ನು ಮೂವರು ದುಷ್ಕರ್ಮಿಗಳು ಎಳೆದೊಯ್ದು ಭಗಕ್​ ಗಾನ್​ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ, ಸ್ಥಳೀಯ ಸ್ಮಶಾನದ ಬಳಿ ಬಿಟ್ಟು ಹೋಗಿದ್ದಾರೆ. ಬೆತ್ತಲಾಗಿ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯನ್ನು ಪಾದಚಾರಿಯೊಬ್ಬರು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣಕ್ಕೆ ಸ್ಥಳಕ್ಕೆ ಬಂದು ಸಂತ್ರಸ್ತೆಯನ್ನು ಆಸ್ಪತ್ರೆ ದಾಖಲಿಸಿ, ಪ್ರಕರಣ ದಾಖಲಿಸಿದ್ದಾರೆ.

ದುರದೃಷ್ಟಕರ ಘಟನೆ- ಎಸ್​ಪಿ: ಈ ಪ್ರಕರಣ ರಾಜ್ಯದಲ್ಲಿ ಆಘಾತ ಮೂಡಿಸಿದೆ. ನಾಗಾನ್​ ಜಿಲ್ಲಾ ಎಸ್‌ಪಿ ಸ್ವಪನನಿಲ್​ ದೆಕಾ ಅವರನ್ನೊಳಗೊಂಡ ಪೊಲೀಸರ ತಂಡ ತನಿಖೆಗೆ ಮುಂದಾಗಿದೆ. ಘಟನೆ ಕುರಿತು ಮಾತನಾಡಿರುವ ಎಸ್​ಪಿ, ಇದು ದುರಾದೃಷ್ಟಕರ. ಆರೋಪಿಗಳ ಪತ್ತೆ ಕ್ರಮ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಅವರನ್ನು ಬಂಧಿಸಿ, ಶಿಕ್ಷೆಗೆ ಒಳಪಡಿಸಲಾಗುವುದು ಎಂದಿದ್ದಾರೆ.

ಧಿಂಗ್​ ಬಂದ್​: ಕೋಲ್ಕತ್ತಾದ ಬಳಿಕ ಅಸ್ಸಾಂನಲ್ಲಿ ನಡೆದಿರುವ ಘಟನೆ ಇದೀಗ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆ ಮೂಡಿಸಿದೆ ಎಂದು ಸ್ಥಳೀಯ ಸಂಘಟನೆಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪರಾಧಿಗಳನ್ನು ತಕ್ಷಣ ಬಂಧಿಸಬೇಕು ಎಂಬ ಬೇಡಿಕೆಯೊಂದಿಗೆ ಅಖಿಲ ಭಾರತ ವಿದ್ಯಾರ್ಥಿ ಯೂನಿಯನ್​ ಮತ್ತು ಸ್ಥಳೀಯರು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದರು.

ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ: ಘಟನೆ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮಾ, ಹೇಯ ಕೃತ್ಯ ಎಸಗಿದ ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಇಲಿ ಪಾಷಾಣ ಸೇವಿಸಿ​ ಅತ್ಯಾಚಾರ ಪ್ರಕರಣದ ಆರೋಪಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.