ETV Bharat / bharat

ಸೆಪ್ಟೆಂಬರ್ 21ಕ್ಕೆ ದೆಹಲಿ ಹೊಸ ಸಿಎಂ ಆಗಿ ಅತಿಶಿ ಪ್ರಮಾಣ: ಮುಖೇಶ್ ಅಹ್ಲಾವತ್​ಗೆ ಕ್ಯಾಬಿನೆಟ್​​ನಲ್ಲಿ ಸ್ಥಾನ - ATISHI TO TAKE OATH AS CM

author img

By ETV Bharat Karnataka Team

Published : 9 hours ago

Updated : 9 hours ago

ಸೆಪ್ಟೆಂಬರ್ 21 ರಂದು ಅತಿಶಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಇತರ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರಲ್ಲಿ ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ಹೆಸರುಗಳು ಸೇರಿವೆ. ನೂತನ ಸಚಿವರಾಗಿ ಮುಖೇಶ್ ಅಹ್ಲಾವತ್ ಹೆಸರು ಕೇಳಿ ಬರುತ್ತಿದ್ದು, ಚರ್ಚೆಗೆ ಗ್ರಾಸವಾಗಿದೆ. ಮುಖೇಶ್ ಅಹ್ಲಾವತ್ ಸುಲ್ತಾನಪುರಿ ಕ್ಷೇತ್ರದ ಶಾಸಕರಾಗಿದ್ದು, ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದವರು. ಆನಂದ್ ಸ್ಥಾನಕ್ಕೆ ರಾಜ್ ಕುಮಾರ್ ಬರಲಿದ್ದಾರೆ.

atishi-oath-ceremony-as-chief-minister-of-delhi-at-21-september-mukesh-kumar-ahlawat-new-cabinet-minister-in-delhi
ಸೆಪ್ಟೆಂಬರ್ 21ಕ್ಕೆ ದೆಹಲಿ ಹೊಸ ಸಿಎಂ ಆಗಿ ಅತಿಶಿ ಪ್ರಮಾಣ: ಮುಖೇಶ್ ಅಹ್ಲಾವತ್​ಗೆ ಕ್ಯಾಬಿನೆಟ್​​ನಲ್ಲಿ ಸ್ಥಾನ (ETV Bharat)

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಹೆಸರು ಘೋಷಣೆಯಾಗಿರುವ ಬೆನ್ನಲ್ಲೇ, ಹೊಸ ಸಂಪುಟದಲ್ಲಿ ಯಾರ್ಯಾರಿಗೆ ಸ್ಥಾನ ದೊರೆಯಲಿದೆ ಎಂಬ ಚರ್ಚೆ ಶುರುವಾಗಲಿದೆ. ಸೆಪ್ಟೆಂಬರ್ 21ರಂದು ಅತಿಶಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಅಂದು ನೂತನ ಸಚಿವರಾಗಿ ಮುಖೇಶ್ ಅಹ್ಲಾವತ್ ಸಿಎಂ ಜತೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸುಲ್ತಾನಪುರಿಯ ಶಾಸಕರಾಗಿರುವ ಅವರು, ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ್ದಾರೆ.

ಸೆಪ್ಟೆಂಬರ್ 21 ರಂದು ಅತಿಶಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ಸಿಎಂ ಅತಿಶಿ ಜತೆ ಇತರ ಮಂತ್ರಿಗಳು ಸಹ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ಪಕ್ಷವು ಹೇಳಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

ಅರವಿಂದ್ ಕೇಜ್ರಿವಾಲ್ ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಅಂದರೆ ಮಂಗಳವಾರ ಅತಿಶಿ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದ್ದರು. ಮಂಗಳವಾರ ಸಂಜೆ ರಾಜನಿವಾಸ್ ತಲುಪಿದ ಕೇಜ್ರಿವಾಲ್ ಅವರು ಎಲ್‌ಜಿಗೆ ರಾಜೀನಾಮೆ ಸಲ್ಲಿಸಿದರು. ಈ ಸಮಯದಲ್ಲಿ, ಅತಿಶಿ ಅವರೊಂದಿಗೆ ಹೊಸ ಸರ್ಕಾರ ರಚಿಸಲು ಹಕ್ಕು ಕೂಡಾ ಮಂಡಿಸಿದ್ದರು.

ಲೆಫ್ಟಿನೆಂಟ್ ಗವರ್ನರ್ ಅವರು ಬುಧವಾರ ರಾಷ್ಟ್ರಪತಿಗಳ ಅನುಮೋದನೆಗಾಗಿ ಎರಡೂ ಪ್ರಸ್ತಾವನೆಗಳನ್ನು ಕಳುಹಿಸಿದ್ದಾರೆ. ಇದರಲ್ಲಿ ಸೆಪ್ಟೆಂಬರ್ 21 ರಂದು ಅತಿಶಿ ಅವರಿಗೆ ಪ್ರಮಾಣ ವಚನ ಬೋಧಿಸಲು ಎಲ್‌ಜಿ ರಾಷ್ಟ್ರಪತಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಕಡತವನ್ನು ಕೇಂದ್ರ ಗೃಹ ಸಚಿವಾಲಯಕ್ಕೂ ಕಳುಹಿಸಲಾಗಿದೆ.

ಅತಿಶಿ ಅವರೊಂದಿಗೆ ಈ 5 ಸಂಭಾವ್ಯ ಸಚಿವರು ಪ್ರಮಾಣ ವಚನ ಸ್ವೀಕಾರ

1. ಗೋಪಾಲ್ ರೈ

2. ಕೈಲಾಶ್ ಗೆಹ್ಲೋಟ್

3. ಸೌರಭ್ ಭಾರದ್ವಾಜ್

4. ಇಮ್ರಾನ್ ಹುಸೇನ್

5. ಮುಖೇಶ್ ಅಹ್ಲಾವತ್

ಇದನ್ನು ಓದಿ:ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ; ತಪ್ಪಿದ ಅನಾಹುತ - Kashi Vishwanath Temple

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಹೆಸರು ಘೋಷಣೆಯಾಗಿರುವ ಬೆನ್ನಲ್ಲೇ, ಹೊಸ ಸಂಪುಟದಲ್ಲಿ ಯಾರ್ಯಾರಿಗೆ ಸ್ಥಾನ ದೊರೆಯಲಿದೆ ಎಂಬ ಚರ್ಚೆ ಶುರುವಾಗಲಿದೆ. ಸೆಪ್ಟೆಂಬರ್ 21ರಂದು ಅತಿಶಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಅಂದು ನೂತನ ಸಚಿವರಾಗಿ ಮುಖೇಶ್ ಅಹ್ಲಾವತ್ ಸಿಎಂ ಜತೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸುಲ್ತಾನಪುರಿಯ ಶಾಸಕರಾಗಿರುವ ಅವರು, ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ್ದಾರೆ.

ಸೆಪ್ಟೆಂಬರ್ 21 ರಂದು ಅತಿಶಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ಸಿಎಂ ಅತಿಶಿ ಜತೆ ಇತರ ಮಂತ್ರಿಗಳು ಸಹ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ಪಕ್ಷವು ಹೇಳಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

ಅರವಿಂದ್ ಕೇಜ್ರಿವಾಲ್ ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಅಂದರೆ ಮಂಗಳವಾರ ಅತಿಶಿ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದ್ದರು. ಮಂಗಳವಾರ ಸಂಜೆ ರಾಜನಿವಾಸ್ ತಲುಪಿದ ಕೇಜ್ರಿವಾಲ್ ಅವರು ಎಲ್‌ಜಿಗೆ ರಾಜೀನಾಮೆ ಸಲ್ಲಿಸಿದರು. ಈ ಸಮಯದಲ್ಲಿ, ಅತಿಶಿ ಅವರೊಂದಿಗೆ ಹೊಸ ಸರ್ಕಾರ ರಚಿಸಲು ಹಕ್ಕು ಕೂಡಾ ಮಂಡಿಸಿದ್ದರು.

ಲೆಫ್ಟಿನೆಂಟ್ ಗವರ್ನರ್ ಅವರು ಬುಧವಾರ ರಾಷ್ಟ್ರಪತಿಗಳ ಅನುಮೋದನೆಗಾಗಿ ಎರಡೂ ಪ್ರಸ್ತಾವನೆಗಳನ್ನು ಕಳುಹಿಸಿದ್ದಾರೆ. ಇದರಲ್ಲಿ ಸೆಪ್ಟೆಂಬರ್ 21 ರಂದು ಅತಿಶಿ ಅವರಿಗೆ ಪ್ರಮಾಣ ವಚನ ಬೋಧಿಸಲು ಎಲ್‌ಜಿ ರಾಷ್ಟ್ರಪತಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಕಡತವನ್ನು ಕೇಂದ್ರ ಗೃಹ ಸಚಿವಾಲಯಕ್ಕೂ ಕಳುಹಿಸಲಾಗಿದೆ.

ಅತಿಶಿ ಅವರೊಂದಿಗೆ ಈ 5 ಸಂಭಾವ್ಯ ಸಚಿವರು ಪ್ರಮಾಣ ವಚನ ಸ್ವೀಕಾರ

1. ಗೋಪಾಲ್ ರೈ

2. ಕೈಲಾಶ್ ಗೆಹ್ಲೋಟ್

3. ಸೌರಭ್ ಭಾರದ್ವಾಜ್

4. ಇಮ್ರಾನ್ ಹುಸೇನ್

5. ಮುಖೇಶ್ ಅಹ್ಲಾವತ್

ಇದನ್ನು ಓದಿ:ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ; ತಪ್ಪಿದ ಅನಾಹುತ - Kashi Vishwanath Temple

Last Updated : 9 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.