ETV Bharat / bharat

ದೇಶದ ಮೇಲೆ ಆರ್​ಎಸ್​ಎಸ್​ ಸಿದ್ಧಾಂತ ಹೇರಲು ಯುಜಿಸಿ ಕರಡು ತಿದ್ದುಪಡಿ ಮಾಡಲಾಗಿದೆ: ರಾಹುಲ್​ ಗಾಂಧಿ - RAHUL GANDHI OPPOSES UGC DRAFT

ಕೇಂದ್ರ ಸರ್ಕಾರ ಯುಜಿಸಿ ನಿಯಮಗಳಿಗೆ ತಂದ ತಿದ್ದುಪಡಿಗಳಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ವಿರೋಧಿಸಿದರು.

ರಾಹುಲ್​ ಗಾಂಧಿ
ರಾಹುಲ್​ ಗಾಂಧಿ (ETV Bharat)
author img

By ETV Bharat Karnataka Team

Published : Feb 6, 2025, 6:38 PM IST

ನವದೆಹಲಿ: "ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಕರಡು ತಿದ್ದುಪಡಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಿದ್ಧಾಂತಗಳನ್ನು ದೇಶದ ಮೇಲೆ ಹೇರುವುದಾಗಿದೆ" ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಆಪಾದಿಸಿದರು.

ವಿಶ್ವವಿದ್ಯಾಲಯಗಳು, ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ ಕರಡು ನಿಯಮಗಳಿಗೆ ತಂದಿರುವ ತಿದ್ದುಪಡಿಗಳನ್ನು ವಿರೋಧಿಸಿ ಡಿಎಂಕೆ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ವೇಳೆ ಮಾತನಾಡಿದ ಅವರು, ಆರ್​ಎಸ್​ಎಸ್​ನ "ಒಂದು ಇತಿಹಾಸ, ಒಂದು ಸಂಪ್ರದಾಯ, ಒಂದು ಭಾಷೆ" ಕಲ್ಪನೆಯನ್ನು ಜನರ ಮೇಲೆ ಹೇರುವುದಾಗಿದೆ ಎಂದು ಆರೋಪಿಸಿದರು.

ಸಂವಿಧಾನದ ಮೇಲಿನ ದಾಳಿ : "ದೇಶದ ಇತರ ಇತಿಹಾಸಗಳು, ಸಂಸ್ಕೃತಿಗಳು ಮತ್ತು ಸಂಪ್ರದಾಯಗಳನ್ನು ನಿರ್ಮೂಲನೆ ಮಾಡುವುದು ಆರ್‌ಎಸ್‌ಎಸ್‌ನ ಗುರಿಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಸಾಥ್​ ನೀಡುತ್ತಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ" ಎಂದು ದೂರಿದರು.

"ಪ್ರತಿಯೊಂದು ರಾಜ್ಯವೂ ತನ್ನದೇ ಆದ ಸಂಪ್ರದಾಯ, ಇತಿಹಾಸ, ಭಾಷೆ ಹೊಂದಿದೆ. ಅದನ್ನು ಎಲ್ಲರೂ ಗೌರವಿಸಬೇಕು. ತಮಿಳುನಾಡು ಕೂಡ ತನ್ನದೇ ಭಾಷೆ, ಇತಿಹಾಸ ಹೊಂದಿದೆ. ಕೇಂದ್ರ ಸರ್ಕಾರವು ಆರ್​ಎಸ್​ಎಸ್​ ಸಿದ್ಧಾಂತಗಳನ್ನು ಆ ರಾಜ್ಯದ ಮೇಲೆ ಹೇರಲು ಬಯಸುತ್ತಿದೆ. ಈ ಮೂಲಕ ಇತರ ರಾಜ್ಯಗಳಿಗೂ ಅವಮಾನ ಮಾಡುತ್ತಿದೆ" ಎಂದು ಟೀಕಿಸಿದರು.

ರಾಜ್ಯಗಳ ಅಧಿಕಾರ ಮೊಟಕು : ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದರು. "ರಾಜ್ಯ ಸರ್ಕಾರಗಳ ಎಲ್ಲಾ ಅಧಿಕಾರವನ್ನು ಕಿತ್ತುಕೊಳ್ಳಲು ಕೇಂದ್ರ ಬಯಸುತ್ತಿದೆ" ಎಂದು ಆರೋಪಿಸಿದರು.

"ರಾಜಕಾರಣಿಗಳನ್ನು ಕೈಗಾರಿಕೋದ್ಯಮಿಗಳ ಸೇವಕರನ್ನಾಗಿ ಮಾಡಲು ಮುಂದಾಗಿದೆ. ಹೊಸ ಶಿಕ್ಷಣ ನೀತಿಯನ್ನು ಎಂದಿಗೂ ಬೆಂಬಲಿಸಲು ಸಾಧ್ಯವಿಲ್ಲ. ನಮ್ಮ ಪಕ್ಷವು ಎನ್​ಇಪಿಯನ್ನು ವಿರೋಧಿಸುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನೀತಿಗಳಿಗೆ ನಮ್ಮ ಬೆಂಬಲ ಇರಲಿದೆ" ಎಂದರು.

ಯುಜಿಸಿ ವಿರುದ್ಧ 6 ರಾಜ್ಯಗಳ ನಿರ್ಣಯ : ಕೇಂದ್ರ ಸರ್ಕಾರ ಯುಜಿಸಿ ನಿಯಮಗಳಿಗೆ ತಂದ ತಿದ್ದುಪಡಿಗಳನ್ನು ವಿರೋಧಿಸಿ 6 ಬಿಜೆಪಿಯೇತರ ರಾಜ್ಯಗಳು ನಿರ್ಣಯ ಅಂಗೀಕರಿಸಿವೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾವೇಶದಲ್ಲಿ ಕರ್ನಾಟಕ, ತೆಲಂಗಾಣ, ಕೇರಳ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್ ರಾಜ್ಯಗಳು ಯುಜಿಸಿ ಕರಡು ನಿಯಮಗಳ ವಿರುದ್ಧ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಿವೆ.

ಇದನ್ನೂ ಓದಿ: ದೇಶಾದ್ಯಂತ ಹೊಸ ಶಿಕ್ಷಣ ನೀತಿ ಜಾರಿಗೆ ಎಲ್ಲ ಕ್ರಮ: ಯುಜಿಸಿ ಅಧ್ಯಕ್ಷ ಎಂ ಜಗದೀಶ

ನವದೆಹಲಿ: "ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಕರಡು ತಿದ್ದುಪಡಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಿದ್ಧಾಂತಗಳನ್ನು ದೇಶದ ಮೇಲೆ ಹೇರುವುದಾಗಿದೆ" ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಆಪಾದಿಸಿದರು.

ವಿಶ್ವವಿದ್ಯಾಲಯಗಳು, ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ ಕರಡು ನಿಯಮಗಳಿಗೆ ತಂದಿರುವ ತಿದ್ದುಪಡಿಗಳನ್ನು ವಿರೋಧಿಸಿ ಡಿಎಂಕೆ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ವೇಳೆ ಮಾತನಾಡಿದ ಅವರು, ಆರ್​ಎಸ್​ಎಸ್​ನ "ಒಂದು ಇತಿಹಾಸ, ಒಂದು ಸಂಪ್ರದಾಯ, ಒಂದು ಭಾಷೆ" ಕಲ್ಪನೆಯನ್ನು ಜನರ ಮೇಲೆ ಹೇರುವುದಾಗಿದೆ ಎಂದು ಆರೋಪಿಸಿದರು.

ಸಂವಿಧಾನದ ಮೇಲಿನ ದಾಳಿ : "ದೇಶದ ಇತರ ಇತಿಹಾಸಗಳು, ಸಂಸ್ಕೃತಿಗಳು ಮತ್ತು ಸಂಪ್ರದಾಯಗಳನ್ನು ನಿರ್ಮೂಲನೆ ಮಾಡುವುದು ಆರ್‌ಎಸ್‌ಎಸ್‌ನ ಗುರಿಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಸಾಥ್​ ನೀಡುತ್ತಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ" ಎಂದು ದೂರಿದರು.

"ಪ್ರತಿಯೊಂದು ರಾಜ್ಯವೂ ತನ್ನದೇ ಆದ ಸಂಪ್ರದಾಯ, ಇತಿಹಾಸ, ಭಾಷೆ ಹೊಂದಿದೆ. ಅದನ್ನು ಎಲ್ಲರೂ ಗೌರವಿಸಬೇಕು. ತಮಿಳುನಾಡು ಕೂಡ ತನ್ನದೇ ಭಾಷೆ, ಇತಿಹಾಸ ಹೊಂದಿದೆ. ಕೇಂದ್ರ ಸರ್ಕಾರವು ಆರ್​ಎಸ್​ಎಸ್​ ಸಿದ್ಧಾಂತಗಳನ್ನು ಆ ರಾಜ್ಯದ ಮೇಲೆ ಹೇರಲು ಬಯಸುತ್ತಿದೆ. ಈ ಮೂಲಕ ಇತರ ರಾಜ್ಯಗಳಿಗೂ ಅವಮಾನ ಮಾಡುತ್ತಿದೆ" ಎಂದು ಟೀಕಿಸಿದರು.

ರಾಜ್ಯಗಳ ಅಧಿಕಾರ ಮೊಟಕು : ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದರು. "ರಾಜ್ಯ ಸರ್ಕಾರಗಳ ಎಲ್ಲಾ ಅಧಿಕಾರವನ್ನು ಕಿತ್ತುಕೊಳ್ಳಲು ಕೇಂದ್ರ ಬಯಸುತ್ತಿದೆ" ಎಂದು ಆರೋಪಿಸಿದರು.

"ರಾಜಕಾರಣಿಗಳನ್ನು ಕೈಗಾರಿಕೋದ್ಯಮಿಗಳ ಸೇವಕರನ್ನಾಗಿ ಮಾಡಲು ಮುಂದಾಗಿದೆ. ಹೊಸ ಶಿಕ್ಷಣ ನೀತಿಯನ್ನು ಎಂದಿಗೂ ಬೆಂಬಲಿಸಲು ಸಾಧ್ಯವಿಲ್ಲ. ನಮ್ಮ ಪಕ್ಷವು ಎನ್​ಇಪಿಯನ್ನು ವಿರೋಧಿಸುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನೀತಿಗಳಿಗೆ ನಮ್ಮ ಬೆಂಬಲ ಇರಲಿದೆ" ಎಂದರು.

ಯುಜಿಸಿ ವಿರುದ್ಧ 6 ರಾಜ್ಯಗಳ ನಿರ್ಣಯ : ಕೇಂದ್ರ ಸರ್ಕಾರ ಯುಜಿಸಿ ನಿಯಮಗಳಿಗೆ ತಂದ ತಿದ್ದುಪಡಿಗಳನ್ನು ವಿರೋಧಿಸಿ 6 ಬಿಜೆಪಿಯೇತರ ರಾಜ್ಯಗಳು ನಿರ್ಣಯ ಅಂಗೀಕರಿಸಿವೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾವೇಶದಲ್ಲಿ ಕರ್ನಾಟಕ, ತೆಲಂಗಾಣ, ಕೇರಳ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್ ರಾಜ್ಯಗಳು ಯುಜಿಸಿ ಕರಡು ನಿಯಮಗಳ ವಿರುದ್ಧ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಿವೆ.

ಇದನ್ನೂ ಓದಿ: ದೇಶಾದ್ಯಂತ ಹೊಸ ಶಿಕ್ಷಣ ನೀತಿ ಜಾರಿಗೆ ಎಲ್ಲ ಕ್ರಮ: ಯುಜಿಸಿ ಅಧ್ಯಕ್ಷ ಎಂ ಜಗದೀಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.