ETV Bharat / bharat

ಗುಜರಾತ್​: ಎರಡು ಸಮುದಾಯಗಳ ನಡುವೆ ಕಲ್ಲು ತೂರಾಟ, ಇಬ್ಬರಿಗೆ ಗಾಯ, ಹಲವು ವಾಹನಗಳು ಜಖಂ - Bharuch Clash

author img

By PTI

Published : Sep 11, 2024, 12:07 PM IST

ಭರುಚ್​ ನಗರದಲ್ಲಿ ಎರಡು ಸಮುದಾಯದ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಅನೇಕ ವಾಹನಗಳು ಜಖಂಗೊಂಡಿವೆ ಎಂದು ಎಸ್​ಪಿ ತಿಳಿಸಿದ್ದಾರೆ.

2-person-injured-in-communal-clash-in-bharuch-police-detained-17
ಸಂಗ್ರಹ ಚಿತ್ರ (ANI)

ಭರುಚ್(ಗುಜರಾತ್): ಧಾರ್ಮಿಕ ಧ್ವಜ ಅಳವಡಿಕೆ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಉಂಟಾದ ಕೋಮು ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡ ಘಟನೆ ಗುಜರಾತ್​​ನ ಭರುಚ್​ ನಗರದಲ್ಲಿ ನಡೆದಿದೆ. 17 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳವಾರ ರಾತ್ರಿ ಭರುಚ್​ನ ಗೋಕುಲ್​ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸುದ್ದಿ ತಿಳಿದು ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಈ ವೇಳೆ ಗಲಭೆಕೋರರು ಓಡಿಹೋಗಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ಸಮುದಾಯದ ಉದ್ರಿಕ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅನೇಕ ವಾಹನಗಳು ಜಖಂಗೊಂಡಿವೆ ಎಂದು ಎಸ್​ಪಿ ಮಯೂರ್​ ಛವ್ಡಾ ಮಾಹಿತಿ ನೀಡಿದ್ದಾರೆ.

ಗೋಕುಲ್​ ನಗರದಲ್ಲಿ ಧಾರ್ಮಿಕ ಧ್ವಜ ಅಳವಡಿಕೆ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಗಲಭೆ ಉಂಟಾಗಿದೆ. ಒಂದು ಸಮುದಾಯ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದು, ಹಿಂಸಾಚಾರದಲ್ಲಿ ಭಾಗಿಯಾದ ಮತ್ತೊಂದು ಸಮುದಾಯದ 17 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಗೋಕುಲ್​ ನಗರ​​ ಎರಡು ಸಮುದಾಯದ ಜನರನ್ನು ಹೊಂದಿರುವ ಪ್ರದೇಶ. ಈದ್​ ಮಿಲಾದ್ ಹಿನ್ನೆಲೆಯಲ್ಲಿ ಧಾರ್ಮಿಕ ಧ್ವಜ ಮತ್ತು ಬ್ಯಾನರ್​ ಕಟ್ಟುವ ಸಲುವಾಗಿ ಘರ್ಷಣೆ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿಂಸಾಚಾರದಲ್ಲಿ ಭಾಗಿಯಾದ 20 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ತನಿಖೆ ನಡೆಸಲಾಗುವುದು ಎಂದು ಪೊಲೀಸ್​ ಅಧಿಕಾರಿ ಛವ್ಡಾ ತಿಳಿಸಿದರು.

ಭಾನುವಾರ ಸೂರತ್​ನಲ್ಲೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಗಣೇಶ ಪೆಂಡಾಲ್​ ಮೇಲೆ ಕೆಲವು ದುಷ್ಕರ್ಮಿಗಳು ಕಲ್ಲೆಸೆದ ಪರಿಣಾಮ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆರು ಅಪ್ರಾಪ್ತರು ಸೇರಿದಂತೆ 27 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್​ ಪ್ರತಿಭಟನೆ; ಪೊಲೀಸರಿಂದ ಬಿಗಿ ಭದ್ರತೆ

ಭರುಚ್(ಗುಜರಾತ್): ಧಾರ್ಮಿಕ ಧ್ವಜ ಅಳವಡಿಕೆ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಉಂಟಾದ ಕೋಮು ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡ ಘಟನೆ ಗುಜರಾತ್​​ನ ಭರುಚ್​ ನಗರದಲ್ಲಿ ನಡೆದಿದೆ. 17 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳವಾರ ರಾತ್ರಿ ಭರುಚ್​ನ ಗೋಕುಲ್​ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸುದ್ದಿ ತಿಳಿದು ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಈ ವೇಳೆ ಗಲಭೆಕೋರರು ಓಡಿಹೋಗಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ಸಮುದಾಯದ ಉದ್ರಿಕ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅನೇಕ ವಾಹನಗಳು ಜಖಂಗೊಂಡಿವೆ ಎಂದು ಎಸ್​ಪಿ ಮಯೂರ್​ ಛವ್ಡಾ ಮಾಹಿತಿ ನೀಡಿದ್ದಾರೆ.

ಗೋಕುಲ್​ ನಗರದಲ್ಲಿ ಧಾರ್ಮಿಕ ಧ್ವಜ ಅಳವಡಿಕೆ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಗಲಭೆ ಉಂಟಾಗಿದೆ. ಒಂದು ಸಮುದಾಯ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದು, ಹಿಂಸಾಚಾರದಲ್ಲಿ ಭಾಗಿಯಾದ ಮತ್ತೊಂದು ಸಮುದಾಯದ 17 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಗೋಕುಲ್​ ನಗರ​​ ಎರಡು ಸಮುದಾಯದ ಜನರನ್ನು ಹೊಂದಿರುವ ಪ್ರದೇಶ. ಈದ್​ ಮಿಲಾದ್ ಹಿನ್ನೆಲೆಯಲ್ಲಿ ಧಾರ್ಮಿಕ ಧ್ವಜ ಮತ್ತು ಬ್ಯಾನರ್​ ಕಟ್ಟುವ ಸಲುವಾಗಿ ಘರ್ಷಣೆ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿಂಸಾಚಾರದಲ್ಲಿ ಭಾಗಿಯಾದ 20 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ತನಿಖೆ ನಡೆಸಲಾಗುವುದು ಎಂದು ಪೊಲೀಸ್​ ಅಧಿಕಾರಿ ಛವ್ಡಾ ತಿಳಿಸಿದರು.

ಭಾನುವಾರ ಸೂರತ್​ನಲ್ಲೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಗಣೇಶ ಪೆಂಡಾಲ್​ ಮೇಲೆ ಕೆಲವು ದುಷ್ಕರ್ಮಿಗಳು ಕಲ್ಲೆಸೆದ ಪರಿಣಾಮ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆರು ಅಪ್ರಾಪ್ತರು ಸೇರಿದಂತೆ 27 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್​ ಪ್ರತಿಭಟನೆ; ಪೊಲೀಸರಿಂದ ಬಿಗಿ ಭದ್ರತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.