ETV Bharat / bharat

ಕಾಲ್ತುಳಿತದ ನಂತರ ದೆಹಲಿ ರೈಲು ನಿಲ್ದಾಣದಲ್ಲಿ ಜನದಟ್ಟಣೆ ನಿರ್ವಹಣೆಗೆ CRPF ನಿಯೋಜನೆ - CRPF DEPLOYED AT RAILWAY STATION

ದೆಹಲಿಯ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ನಂತರ, ಜನದಟ್ಟಣೆ ನಿರ್ವಹಣೆಗೆ ಇದೀಗ ಪೊಲೀಸರ ಜೊತೆಗೆ ಸಿಆರ್​​ಪಿಎಫ್​ ನಿಯೋಜಿಸಲಾಗಿದೆ.

after-stampede-in-new-delhi-railway-station-crpf-and-6-officer-deployed-for-crowd-management
ನವದೆಹಲಿ ರೈಲು ನಿಲ್ದಾಣ (ANI)
author img

By ETV Bharat Karnataka Team

Published : Feb 17, 2025, 12:20 PM IST

ನವದೆಹಲಿ: ನವದೆಹಲಿಯ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಬಳಿಕ ಜನದಟ್ಟಣೆ ನಿರ್ವಹಣೆಗೆ ಇದೀಗ ದೆಹಲಿ ಪೊಲೀಸರೊಂದಿಗೆ ಕೇಂದ್ರ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್‌)ಯನ್ನು ನಿಯೋಜಿಸಲಾಗಿದೆ. ಹಿರಿಯ ಸಿಆರ್​ಪಿಎಫ್‌ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜನಸಂದಣಿ ನಿರ್ವಹಣೆ ಹೆಚ್ಚಿಸಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು 6 ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿಗಳನ್ನು ನಿಲ್ದಾಣದಲ್ಲಿ ನಿಯೋಜಿಸಿದ್ದಾರೆ. ವಿವಿಧ ಜಿಲ್ಲೆಗಳಿಂದ ಬಂದಿರುವ ಈ ಅಧಿಕಾರಿಗಳನ್ನು ವಿಶೇಷವಾಗಿ ದೇಶದ ಅತ್ಯಂತ ಜನನಿಬಿಡ ಸಾರಿಗೆ ಕೇಂದ್ರಗಳ ಪೈಕಿ ಒಂದಾದ ನವದೆಹಲಿ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

ಈಗಾಗಲೇ ದಟ್ಟಣೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವ, ಯಶಸ್ವಿಯಾಗಿ ನಿರ್ವಹಿಸಿರುವ ವಿವಿಧ ಜಿಲ್ಲೆಗಳ ಅಧಿಕಾರಿಗಳು ಇವರಾಗಿದ್ದಾರೆ. ಇವರಲ್ಲಿ ಕೆಲವರು ನಿಲ್ದಾಣಗಳಲ್ಲಿ ಎಸ್​ಎಚ್​ಒ ಆಗಿ ಕಾರ್ಯನಿರ್ವಹಿಸಿದ್ದು, ಜನಸಂದಣಿಯಲ್ಲಿ ಲಾಜಿಸ್ಟಿಕ್​ ಮತ್ತು ಭದ್ರತಾ ಸವಾಲುಗಳನ್ನು ಅರ್ಥೈಸಿಕೊಂಡು ಕೆಲಸ ಮಾಡಲಿದ್ದಾರೆ.

ಶನಿವಾರ ದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದಲ್ಲಿ 18 ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ದೆಹಲಿ ಕಾಲ್ತುಳಿತ: ತನಿಖಾ ಸಮಿತಿ ರಚನೆ, ಮೃತರಿಗೆ ₹10 ಲಕ್ಷ ಪರಿಹಾರ ಘೋಷಿಸಿದ ರೈಲ್ವೆ

ಇದನ್ನೂ ಓದಿ: ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ?: ಪ್ರತ್ಯಕ್ಷದರ್ಶಿಗಳ ಮಾತು

ನವದೆಹಲಿ: ನವದೆಹಲಿಯ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಬಳಿಕ ಜನದಟ್ಟಣೆ ನಿರ್ವಹಣೆಗೆ ಇದೀಗ ದೆಹಲಿ ಪೊಲೀಸರೊಂದಿಗೆ ಕೇಂದ್ರ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್‌)ಯನ್ನು ನಿಯೋಜಿಸಲಾಗಿದೆ. ಹಿರಿಯ ಸಿಆರ್​ಪಿಎಫ್‌ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜನಸಂದಣಿ ನಿರ್ವಹಣೆ ಹೆಚ್ಚಿಸಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು 6 ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿಗಳನ್ನು ನಿಲ್ದಾಣದಲ್ಲಿ ನಿಯೋಜಿಸಿದ್ದಾರೆ. ವಿವಿಧ ಜಿಲ್ಲೆಗಳಿಂದ ಬಂದಿರುವ ಈ ಅಧಿಕಾರಿಗಳನ್ನು ವಿಶೇಷವಾಗಿ ದೇಶದ ಅತ್ಯಂತ ಜನನಿಬಿಡ ಸಾರಿಗೆ ಕೇಂದ್ರಗಳ ಪೈಕಿ ಒಂದಾದ ನವದೆಹಲಿ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

ಈಗಾಗಲೇ ದಟ್ಟಣೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವ, ಯಶಸ್ವಿಯಾಗಿ ನಿರ್ವಹಿಸಿರುವ ವಿವಿಧ ಜಿಲ್ಲೆಗಳ ಅಧಿಕಾರಿಗಳು ಇವರಾಗಿದ್ದಾರೆ. ಇವರಲ್ಲಿ ಕೆಲವರು ನಿಲ್ದಾಣಗಳಲ್ಲಿ ಎಸ್​ಎಚ್​ಒ ಆಗಿ ಕಾರ್ಯನಿರ್ವಹಿಸಿದ್ದು, ಜನಸಂದಣಿಯಲ್ಲಿ ಲಾಜಿಸ್ಟಿಕ್​ ಮತ್ತು ಭದ್ರತಾ ಸವಾಲುಗಳನ್ನು ಅರ್ಥೈಸಿಕೊಂಡು ಕೆಲಸ ಮಾಡಲಿದ್ದಾರೆ.

ಶನಿವಾರ ದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದಲ್ಲಿ 18 ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ದೆಹಲಿ ಕಾಲ್ತುಳಿತ: ತನಿಖಾ ಸಮಿತಿ ರಚನೆ, ಮೃತರಿಗೆ ₹10 ಲಕ್ಷ ಪರಿಹಾರ ಘೋಷಿಸಿದ ರೈಲ್ವೆ

ಇದನ್ನೂ ಓದಿ: ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ?: ಪ್ರತ್ಯಕ್ಷದರ್ಶಿಗಳ ಮಾತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.