ETV Bharat / bharat

ಬಿಜೆಪಿ, ಕಾಂಗ್ರೆಸ್​ಗಾಗಿ ದಲಿತರು ಮತ ವ್ಯರ್ಥ ಮಾಡಿಕೊಳ್ಳಬೇಡಿ: ಹರಿಯಾಣ, ಕಾಶ್ಮೀರದ ಜನತೆಗೆ ಮಾಯಾವತಿ ಮನವಿ - BSP Chief Mayawati Appeal

author img

By ETV Bharat Karnataka Team

Published : 2 hours ago

ಕಾಂಗ್ರೆಸ್​ ಅಥವಾ ಬಿಜೆಪಿಗೆ ಮತ ಚಲಾಯಿಸಿ ದಲಿತರು ತಮ್ಮ ಮತವನ್ನು ವ್ಯರ್ಥ ಮಾಡಿಕೊಳ್ಳಬಾರದು ಎಂದು ಮಾಯಾವತಿ ಹೇಳಿದ್ದಾರೆ.

ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ
ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ (IANS)

ನವದೆಹಲಿ: ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ದಲಿತರ ಬಗ್ಗೆ ನಿರ್ಲಕ್ಷ್ಯ ಮತ್ತು ತಿರಸ್ಕಾರದ ಭಾವನೆ ಹೊಂದಿವೆ ಎಂದು ಭಾನುವಾರ ಆರೋಪಿಸಿರುವ ಬಹುಜನ ಸಮಾಜ ಪಕ್ಷದ (ಬಿಎಸ್​ಪಿ) ಮುಖ್ಯಸ್ಥೆ ಮಾಯಾವತಿ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ದಲಿತರು ಬಿಎಸ್​ಪಿಗೆ ಮತ ಚಲಾಯಿಸುವಂತೆ ಕರೆ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮತ ಚಲಾಯಿಸುವಾಗ ಮತದಾರರು ಈ ಐತಿಹಾಸಿಕ ನಿರ್ಲಕ್ಷ್ಯದ ಬಗ್ಗೆ ಜಾಗರೂಕರಾಗಿರಬೇಕು ಎಂದು ಅವರು ಮನವಿ ಮಾಡಿದರು.

"ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಈ ಸಮಯದಲ್ಲಿ ಕಾಂಗ್ರೆಸ್ ದಲಿತರನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವುದು ಮತ್ತು ತಿರಸ್ಕಾರ ಭಾವನೆಯಿಂದ ನೋಡುತ್ತಿರುವುದು ಆ ಪಕ್ಷದೊಳಗೆ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ತೋರಿಸುತ್ತದೆ. ಆ ಪಕ್ಷದ ನಿಲುವುಗಳು ಈಗ ಸರಿಯಾಗಿಲ್ಲ ಎಂದ ಮೇಲೆ ಭವಿಷ್ಯದಲ್ಲಿ ನಾವು ಅವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯ? ಹೀಗಾಗಿ ದಲಿತರು ಕಾಂಗ್ರೆಸ್​ ಅಥವಾ ಬಿಜೆಪಿಗೆ ಮತ ನೀಡಿ ತಮ್ಮ ಮತವನ್ನು ವ್ಯರ್ಥ ಮಾಡಬಾರದು" ಎಂದು ಮಾಯಾವತಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಕಾಂಗ್ರೆಸ್ ನಿರಂತರವಾಗಿ ಮೀಸಲಾತಿಯನ್ನು ವಿರೋಧಿಸುತ್ತಿದೆ ಎಂದು ಆರೋಪಿಸಿದ ಅವರು, "ದಲಿತರು ಬಿಎಸ್​ಪಿಗೆ ಸಾಮೂಹಿಕವಾಗಿ ಮತ ಚಲಾಯಿಸಬೇಕು. ದಲಿತರ ಹಿತಾಸಕ್ತಿಗಳನ್ನು ರಕ್ಷಿಸಲು, ಅವರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರ ಸಾಂವಿಧಾನಿಕ ಹಕ್ಕುಗಳನ್ನು ಪಡೆಯಲು ನಿರಂತರವಾಗಿ ಹೋರಾಡುವ ಏಕೈಕ ಪಕ್ಷ ಬಿಎಸ್​ಪಿ ಆಗಿದೆ" ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್, ಬಿಜೆಪಿ ಅಥವಾ ಇತರ ಯಾವುದೇ ಮೈತ್ರಿಕೂಟಗಳ ಸುಳ್ಳು ಭರವಸೆಗಳಿಂದ ಪ್ರಭಾವಿತರಾಗದಂತೆ ಜಮ್ಮು ಮತ್ತು ಕಾಶ್ಮೀರದ ದಲಿತ ಸಮುದಾಯಕ್ಕೆ ಅವರು ಮನವಿ ಮಾಡಿದರು. ಆ ಪಕ್ಷಗಳ ದಲಿತ ವಿರೋಧಿ ಇತಿಹಾಸವನ್ನು ಗಮನದಲ್ಲಿಟ್ಟುಕೊಂಡು, ದಲಿತ ಮತದಾರರು ತಮ್ಮ ಅಮೂಲ್ಯವಾದ ಮತಗಳನ್ನು ಬಿಎಸ್​ಪಿಗೆ ಮಾತ್ರ ಚಲಾಯಿಸಬೇಕು ಎಂದು ಅವರು ಹೇಳಿದರು.

ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್​ಪಿ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್​ಡಿ)ದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದ್ದು, 90 ಸ್ಥಾನಗಳ ಪೈಕಿ 37 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪ್ರಸ್ತುತ, ಹರಿಯಾಣ ವಿಧಾನಸಭೆಯಲ್ಲಿ ಬಿಎಸ್​ಪಿಯ ಯಾವುದೇ ಶಾಸಕರಿಲ್ಲ. ಐಎನ್ಎಲ್​​ಡಿಯ ಅಭಯ್ ಚೌಟಾಲಾ ಆ ಪಕ್ಷದ ಏಕೈಕ ಶಾಸಕರಾಗಿದ್ದಾರೆ.

ಈ ಹಿಂದೆ 2014ರಿಂದ 2019ರವರೆಗೆ ಹರಿಯಾಣ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದ ಚೌಟಾಲಾ, ಪ್ರಸ್ತುತ ವಿಧಾನಸಭೆಯಲ್ಲಿ ಐಎನ್ಎಲ್​ಡಿಯ ಏಕೈಕ ಪ್ರತಿನಿಧಿಯಾಗಿ ಉಳಿದಿದ್ದಾರೆ.

ಎರಡೂ ಪಕ್ಷಗಳು 2024ರ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದವು. ಆದರೆ ಆ ಚುನಾವಣೆಯಲ್ಲಿ ಈ ಮೈತ್ರಿಕೂಟಕ್ಕೆ ಹೇಳಿಕೊಳ್ಳುವಂಥ ಯಶಸ್ಸು ಸಿಕ್ಕಿರಲಿಲ್ಲ. ಐಎನ್ಎಲ್​ಡಿ ಶೇ 1.74ರಷ್ಟು ಮತಗಳನ್ನು ಪಡೆದರೆ, ಬಿಎಸ್​ಪಿ ಶೇ 1.28ರಷ್ಟು ಮತಗಳನ್ನು ಗಳಿಸಿದೆ. ಐಎನ್ಎಲ್​ಡಿ ಏಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಎಸ್​ಪಿ ಒಂಬತ್ತು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ಇದನ್ನೂ ಓದಿ: ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನಾಳೆ ಪ್ರಮಾಣ ವಚನ ಸ್ವೀಕಾರ - Udhayanidhi Stalin

ನವದೆಹಲಿ: ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ದಲಿತರ ಬಗ್ಗೆ ನಿರ್ಲಕ್ಷ್ಯ ಮತ್ತು ತಿರಸ್ಕಾರದ ಭಾವನೆ ಹೊಂದಿವೆ ಎಂದು ಭಾನುವಾರ ಆರೋಪಿಸಿರುವ ಬಹುಜನ ಸಮಾಜ ಪಕ್ಷದ (ಬಿಎಸ್​ಪಿ) ಮುಖ್ಯಸ್ಥೆ ಮಾಯಾವತಿ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ದಲಿತರು ಬಿಎಸ್​ಪಿಗೆ ಮತ ಚಲಾಯಿಸುವಂತೆ ಕರೆ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮತ ಚಲಾಯಿಸುವಾಗ ಮತದಾರರು ಈ ಐತಿಹಾಸಿಕ ನಿರ್ಲಕ್ಷ್ಯದ ಬಗ್ಗೆ ಜಾಗರೂಕರಾಗಿರಬೇಕು ಎಂದು ಅವರು ಮನವಿ ಮಾಡಿದರು.

"ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಈ ಸಮಯದಲ್ಲಿ ಕಾಂಗ್ರೆಸ್ ದಲಿತರನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವುದು ಮತ್ತು ತಿರಸ್ಕಾರ ಭಾವನೆಯಿಂದ ನೋಡುತ್ತಿರುವುದು ಆ ಪಕ್ಷದೊಳಗೆ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ತೋರಿಸುತ್ತದೆ. ಆ ಪಕ್ಷದ ನಿಲುವುಗಳು ಈಗ ಸರಿಯಾಗಿಲ್ಲ ಎಂದ ಮೇಲೆ ಭವಿಷ್ಯದಲ್ಲಿ ನಾವು ಅವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯ? ಹೀಗಾಗಿ ದಲಿತರು ಕಾಂಗ್ರೆಸ್​ ಅಥವಾ ಬಿಜೆಪಿಗೆ ಮತ ನೀಡಿ ತಮ್ಮ ಮತವನ್ನು ವ್ಯರ್ಥ ಮಾಡಬಾರದು" ಎಂದು ಮಾಯಾವತಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಕಾಂಗ್ರೆಸ್ ನಿರಂತರವಾಗಿ ಮೀಸಲಾತಿಯನ್ನು ವಿರೋಧಿಸುತ್ತಿದೆ ಎಂದು ಆರೋಪಿಸಿದ ಅವರು, "ದಲಿತರು ಬಿಎಸ್​ಪಿಗೆ ಸಾಮೂಹಿಕವಾಗಿ ಮತ ಚಲಾಯಿಸಬೇಕು. ದಲಿತರ ಹಿತಾಸಕ್ತಿಗಳನ್ನು ರಕ್ಷಿಸಲು, ಅವರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರ ಸಾಂವಿಧಾನಿಕ ಹಕ್ಕುಗಳನ್ನು ಪಡೆಯಲು ನಿರಂತರವಾಗಿ ಹೋರಾಡುವ ಏಕೈಕ ಪಕ್ಷ ಬಿಎಸ್​ಪಿ ಆಗಿದೆ" ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್, ಬಿಜೆಪಿ ಅಥವಾ ಇತರ ಯಾವುದೇ ಮೈತ್ರಿಕೂಟಗಳ ಸುಳ್ಳು ಭರವಸೆಗಳಿಂದ ಪ್ರಭಾವಿತರಾಗದಂತೆ ಜಮ್ಮು ಮತ್ತು ಕಾಶ್ಮೀರದ ದಲಿತ ಸಮುದಾಯಕ್ಕೆ ಅವರು ಮನವಿ ಮಾಡಿದರು. ಆ ಪಕ್ಷಗಳ ದಲಿತ ವಿರೋಧಿ ಇತಿಹಾಸವನ್ನು ಗಮನದಲ್ಲಿಟ್ಟುಕೊಂಡು, ದಲಿತ ಮತದಾರರು ತಮ್ಮ ಅಮೂಲ್ಯವಾದ ಮತಗಳನ್ನು ಬಿಎಸ್​ಪಿಗೆ ಮಾತ್ರ ಚಲಾಯಿಸಬೇಕು ಎಂದು ಅವರು ಹೇಳಿದರು.

ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್​ಪಿ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್​ಡಿ)ದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದ್ದು, 90 ಸ್ಥಾನಗಳ ಪೈಕಿ 37 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪ್ರಸ್ತುತ, ಹರಿಯಾಣ ವಿಧಾನಸಭೆಯಲ್ಲಿ ಬಿಎಸ್​ಪಿಯ ಯಾವುದೇ ಶಾಸಕರಿಲ್ಲ. ಐಎನ್ಎಲ್​​ಡಿಯ ಅಭಯ್ ಚೌಟಾಲಾ ಆ ಪಕ್ಷದ ಏಕೈಕ ಶಾಸಕರಾಗಿದ್ದಾರೆ.

ಈ ಹಿಂದೆ 2014ರಿಂದ 2019ರವರೆಗೆ ಹರಿಯಾಣ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದ ಚೌಟಾಲಾ, ಪ್ರಸ್ತುತ ವಿಧಾನಸಭೆಯಲ್ಲಿ ಐಎನ್ಎಲ್​ಡಿಯ ಏಕೈಕ ಪ್ರತಿನಿಧಿಯಾಗಿ ಉಳಿದಿದ್ದಾರೆ.

ಎರಡೂ ಪಕ್ಷಗಳು 2024ರ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದವು. ಆದರೆ ಆ ಚುನಾವಣೆಯಲ್ಲಿ ಈ ಮೈತ್ರಿಕೂಟಕ್ಕೆ ಹೇಳಿಕೊಳ್ಳುವಂಥ ಯಶಸ್ಸು ಸಿಕ್ಕಿರಲಿಲ್ಲ. ಐಎನ್ಎಲ್​ಡಿ ಶೇ 1.74ರಷ್ಟು ಮತಗಳನ್ನು ಪಡೆದರೆ, ಬಿಎಸ್​ಪಿ ಶೇ 1.28ರಷ್ಟು ಮತಗಳನ್ನು ಗಳಿಸಿದೆ. ಐಎನ್ಎಲ್​ಡಿ ಏಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಎಸ್​ಪಿ ಒಂಬತ್ತು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ಇದನ್ನೂ ಓದಿ: ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನಾಳೆ ಪ್ರಮಾಣ ವಚನ ಸ್ವೀಕಾರ - Udhayanidhi Stalin

ETV Bharat Logo

Copyright © 2024 Ushodaya Enterprises Pvt. Ltd., All Rights Reserved.