ETV Bharat / bharat

ಮಾನನಷ್ಟ ಮೊಕದ್ದಮೆ: ನಾಳೆ ಸುಲ್ತಾನ್​ಪುರ ನ್ಯಾಯಾಲಯಕ್ಕೆ ಹಾಜರಾಗಲಿರುವ ರಾಹುಲ್​ ಗಾಂಧಿ - Rahul Gandhi appear in Court

ಪ್ರತಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಅವರು ತಮ್ಮ ಹೇಳಿಕೆ ದಾಖಲಿಸಲು ನಾಳೆ ಸುಲ್ತಾನ್‌ಪುರ ಸಂಸದ-ಶಾಸಕ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭಿಷೇಕ್​ ಸಿಂಗ್ ರಾಣಾ​ ಖಚಿತಪಡಿಸಿದ್ದಾರೆ.

author img

By ETV Bharat Karnataka Team

Published : Jul 25, 2024, 6:25 PM IST

Rahul Gandhi
ರಾಹುಲ್ ಗಾಂಧಿ (ETV Bharat)

ಸುಲ್ತಾನ್​ಪುರ (ಉತ್ತರಪ್ರದೇಶ): ಕಾಂಗ್ರೆಸ್​ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್​ ಗಾಂಧಿ ಅವರು ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ದಾಖಲಿಸಲು ಶುಕ್ರವಾರ ಉತ್ತರಪ್ರದೇಶದ ಸುಲ್ತಾನ್​ಪುರದ ಸಂಸದ - ಶಾಸಕರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ವಿರುದ್ಧ ರಾಹುಲ್​ ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಗ್ಗೆ ಬಿಜೆಪಿ ಮುಖಂಡ ವಿಜಯ್​ ಮಿಶ್ರಾ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

2018ರಲ್ಲಿ ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ರಾಹುಲ್​ ಗಾಂಧಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಾಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಕುರಿತು ಸುಲ್ತಾನ್​ಪುರದ ಕೊತ್ವಾಲಿ ದೇಹತ್​ ಪೊಲೀಸ್​ ಠಾಣಾ ವ್ಯಾಪ್ತಿಯ ಹನುಮಗಂಜ್​ ನಿವಾಸಿ, ಸಹಕಾರಿ ಬ್ಯಾಂಕ್​ವೊಂದರ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ವಿಜಯ್​ ಮಿಶ್ರಾ 2018ರ ಆಗಸ್ಟ್​ 4ರಂದು ನ್ಯಾಯಾಲಯದ ಮೂಲಕ ರಾಹುಲ್​ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.​

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 20ರಂದು ನ್ಯಾಯ ಯಾತ್ರೆ ವೇಳೆ ರಾಹುಲ್​ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ, ರಾಹುಲ್​ ಪರ ವಕೀಲರು ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆಗ ನ್ಯಾಯಾಲಯ ಕಾಂಗ್ರೆಸ್​ ನಾಯಕರಿಗೆ 25,000 ರೂ.ಗಳ ಶ್ಯೂರಿಟಿ ಬಾಂಡ್​ ಮೇಲೆ ಜಾಮೀನು ನೀಡಿ, ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲು ಹಾಜರಾಗುವಂತೆ ದಿನಾಂಕ ನೀಡಿತ್ತು.

ಆದರೆ, ನಂತರದಲ್ಲಿ ಲೋಕಸಭಾ ಚುನಾವಣೆಯ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ರಾಹುಲ್​ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ತಿಂಗಳ ಆರಂಭದಲ್ಲಿ ವಿಶೇಷ ಮ್ಯಾಜಿಸ್ಟ್ರೇಟ್​ ಶುಭಂ ವರ್ಮಾ ಅವರು ಜುಲೈ 26 ರಂದು ಹೇಳಿಕೆ ದಾಖಲಿಸಿಕೊಳ್ಳಲು ರಾಹುಲ್​ ಗಾಂಧಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದ್ದರು. ಈ ಹಿನ್ನೆಲೆ ನಾಳೆ ರಾಹುಲ್​ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಅಭಿಷೇಕ್​ ಸಿಂಗ್ ರಾಣಾ​ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ರಾಜ್ಯ ಕಾಂಗ್ರೆಸ್​ ಸಮಿತಿ ನೀಡಿರುವ ಮಾಹಿತಿಯಂತೆ, ಶುಕ್ರವಾರ ರಾಹುಲ್​ ಗಾಂಧಿ ಅವರು ನ್ಯಾಯಾಲಯಕ್ಕೆ ಹಾಜರಾಗಲು ಜಿಲ್ಲೆಗೆ ಆಗಮಿಸಲಿದ್ದಾರೆ. ಶುಕ್ರವಾರ ಬೆಳಗ್ಗೆ 9 ಗಂಟೆಗೆ ಲಖನೌ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ರಾಹುಲ್​ ಗಾಂಧಿ ನಂತರ ಸುಲ್ತಾನ್​ಪುರಕ್ಕೆ ತೆರಳಲಿದ್ದಾರೆ. ಈ ವೇಳೆ ಕಾರ್ಯಕರ್ತರನ್ನೂ ಭೇಟಿ ಮಾಡಲಿದ್ದಾರೆ. ರಾಹುಲ್​ ಗಾಂಧಿ ಅವರ ಆಗಮನದ ಬಗ್ಗೆ ಕಾಂಗ್ರೆಸ್​ ಕಾರ್ಯಕರ್ತರಲ್ಲಿ ಉತ್ಸಾಹ ತಂದಿದೆ" ಎಂದು ತಿಳಿಸಿದ್ದಾರೆ. ರಾಹುಲ್​ ಪರ ವಕೀಲ ಕಾಶಿ ಪ್ರಸಾದ್​ ಶುಕ್ಲಾ ಕೂಡ ರಾಹುಲ್​ ಅವರು ನ್ಯಾಯಾಲಯಕ್ಕೆ ಹಾಜರಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಂಸತ್​​​ ಅಧಿವೇಶನದಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ಎತ್ತಲು ರಾಹುಲ್​ ಗಾಂಧಿ ಕಾರ್ಯತಂತ್ರ - Rahul Gandhi Prepares Strategy

ಸುಲ್ತಾನ್​ಪುರ (ಉತ್ತರಪ್ರದೇಶ): ಕಾಂಗ್ರೆಸ್​ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್​ ಗಾಂಧಿ ಅವರು ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ದಾಖಲಿಸಲು ಶುಕ್ರವಾರ ಉತ್ತರಪ್ರದೇಶದ ಸುಲ್ತಾನ್​ಪುರದ ಸಂಸದ - ಶಾಸಕರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ವಿರುದ್ಧ ರಾಹುಲ್​ ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಗ್ಗೆ ಬಿಜೆಪಿ ಮುಖಂಡ ವಿಜಯ್​ ಮಿಶ್ರಾ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

2018ರಲ್ಲಿ ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ರಾಹುಲ್​ ಗಾಂಧಿ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಾಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಕುರಿತು ಸುಲ್ತಾನ್​ಪುರದ ಕೊತ್ವಾಲಿ ದೇಹತ್​ ಪೊಲೀಸ್​ ಠಾಣಾ ವ್ಯಾಪ್ತಿಯ ಹನುಮಗಂಜ್​ ನಿವಾಸಿ, ಸಹಕಾರಿ ಬ್ಯಾಂಕ್​ವೊಂದರ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ವಿಜಯ್​ ಮಿಶ್ರಾ 2018ರ ಆಗಸ್ಟ್​ 4ರಂದು ನ್ಯಾಯಾಲಯದ ಮೂಲಕ ರಾಹುಲ್​ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.​

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 20ರಂದು ನ್ಯಾಯ ಯಾತ್ರೆ ವೇಳೆ ರಾಹುಲ್​ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ, ರಾಹುಲ್​ ಪರ ವಕೀಲರು ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆಗ ನ್ಯಾಯಾಲಯ ಕಾಂಗ್ರೆಸ್​ ನಾಯಕರಿಗೆ 25,000 ರೂ.ಗಳ ಶ್ಯೂರಿಟಿ ಬಾಂಡ್​ ಮೇಲೆ ಜಾಮೀನು ನೀಡಿ, ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲು ಹಾಜರಾಗುವಂತೆ ದಿನಾಂಕ ನೀಡಿತ್ತು.

ಆದರೆ, ನಂತರದಲ್ಲಿ ಲೋಕಸಭಾ ಚುನಾವಣೆಯ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ರಾಹುಲ್​ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ತಿಂಗಳ ಆರಂಭದಲ್ಲಿ ವಿಶೇಷ ಮ್ಯಾಜಿಸ್ಟ್ರೇಟ್​ ಶುಭಂ ವರ್ಮಾ ಅವರು ಜುಲೈ 26 ರಂದು ಹೇಳಿಕೆ ದಾಖಲಿಸಿಕೊಳ್ಳಲು ರಾಹುಲ್​ ಗಾಂಧಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದ್ದರು. ಈ ಹಿನ್ನೆಲೆ ನಾಳೆ ರಾಹುಲ್​ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಅಭಿಷೇಕ್​ ಸಿಂಗ್ ರಾಣಾ​ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ರಾಜ್ಯ ಕಾಂಗ್ರೆಸ್​ ಸಮಿತಿ ನೀಡಿರುವ ಮಾಹಿತಿಯಂತೆ, ಶುಕ್ರವಾರ ರಾಹುಲ್​ ಗಾಂಧಿ ಅವರು ನ್ಯಾಯಾಲಯಕ್ಕೆ ಹಾಜರಾಗಲು ಜಿಲ್ಲೆಗೆ ಆಗಮಿಸಲಿದ್ದಾರೆ. ಶುಕ್ರವಾರ ಬೆಳಗ್ಗೆ 9 ಗಂಟೆಗೆ ಲಖನೌ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ರಾಹುಲ್​ ಗಾಂಧಿ ನಂತರ ಸುಲ್ತಾನ್​ಪುರಕ್ಕೆ ತೆರಳಲಿದ್ದಾರೆ. ಈ ವೇಳೆ ಕಾರ್ಯಕರ್ತರನ್ನೂ ಭೇಟಿ ಮಾಡಲಿದ್ದಾರೆ. ರಾಹುಲ್​ ಗಾಂಧಿ ಅವರ ಆಗಮನದ ಬಗ್ಗೆ ಕಾಂಗ್ರೆಸ್​ ಕಾರ್ಯಕರ್ತರಲ್ಲಿ ಉತ್ಸಾಹ ತಂದಿದೆ" ಎಂದು ತಿಳಿಸಿದ್ದಾರೆ. ರಾಹುಲ್​ ಪರ ವಕೀಲ ಕಾಶಿ ಪ್ರಸಾದ್​ ಶುಕ್ಲಾ ಕೂಡ ರಾಹುಲ್​ ಅವರು ನ್ಯಾಯಾಲಯಕ್ಕೆ ಹಾಜರಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಂಸತ್​​​ ಅಧಿವೇಶನದಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ಎತ್ತಲು ರಾಹುಲ್​ ಗಾಂಧಿ ಕಾರ್ಯತಂತ್ರ - Rahul Gandhi Prepares Strategy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.