ETV Bharat / bharat

ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐನಿಂದ ಸಿಎಂ ಅರವಿಂದ್​ ಕೇಜ್ರಿವಾಲ್​ ಬಂಧನ - Aravind kejriwal arrest

author img

By ETV Bharat Karnataka Team

Published : Jun 26, 2024, 11:34 AM IST

Updated : Jun 26, 2024, 12:26 PM IST

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರನ್ನು ಇಂದು ಸಿಬಿಐ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ.

ಸಿಎಂ ಅರವಿಂದ್​ ಕೇಜ್ರಿವಾಲ್​ ಅಧಿಕೃತ ಬಂಧನ
ಸಿಎಂ ಅರವಿಂದ್​ ಕೇಜ್ರಿವಾಲ್​ ಅಧಿಕೃತ ಬಂಧನ (ETV Bharat)

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರನ್ನು ಇಂದು ಸಿಬಿಐ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ. ಇದಕ್ಕೂ ಮೊದಲು ಸೋಮವಾರದಂದು ತಿಹಾರ್​ ಜೈಲಿನಲ್ಲೇ ಕೇಜ್ರಿವಾಲ್​ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದರು.

ಮಂಗಳವಾರವೂ ಮತ್ತೊಮ್ಮೆ ವಿಚಾರಣೆ ನಡೆಸಿದ್ದರು. ಬಳಿಕ ಬುಧವಾರ ವಿಚಾರಣಾ ನ್ಯಾಯಾಲಯಕ್ಕೆ ಕೇಜ್ರಿವಾಲ್​ ಅವರನ್ನು ಹಾಜರು ಪಡಿಸಲು ಅನುಮತಿಯನ್ನು ಸಿಬಿಐ ಪಡೆದಿತ್ತು. ಇದೀಗ ನ್ಯಾಯಾಲಯಕ್ಕೆ ಹಾಜರು ಪಡಿಸಿ ಅಧಿಕೃತವಾಗಿ ಬಂಧಿಸಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಇಡಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಅವರ ನಿವಾಸದಿಂದ ಬಂಧಿಸಿತ್ತು. ಏಪ್ರಿಲ್ 1 ರಂದು ತಿಹಾರ್‌ಗೆ ಕಳುಹಿಸಲಾಗಿತ್ತು.

ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್‌ ಅರವಿಂದ್​ ಕೇಜ್ರಿವಾಲ್‌ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನನ್ನು ತಡೆ ನೀಡಿ ಹೈಕೋರ್ಟ್ ಆದೇಶಿಸಿತ್ತು. ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರಿದ್ದ ಪೀಠವು ರೋಸ್​​​ ಅವೆನ್ಯೂ ನ್ಯಾಯಾಲಯದ ತೀರ್ಪಿಗೆ ತಡೆಯಾಜ್ಞೆ ನೀಡಿ ಆದೇಶ ಮಾಡಿತ್ತು.

ಇಂದು ಸುಪ್ರೀಂನಲ್ಲಿ ವಿಚಾರಣೆ: ದೆಹಲಿ ಹೈಕೋರ್ಟ್​ನ​ ಜಾಮೀನು ತಡೆಯಾಜ್ಞೆ ಆದೇಶವನ್ನು ಪ್ರಶ್ನಿಸಿ ಕಳೆದ ಎರಡು ದಿನಗಳ ಹಿಂದೆ ಸಿಎಂ ಕೇಜ್ರಿವಾಲ್​ ಅವರು ಸುಪ್ರೀಂ ಕೋರ್ಟ್​ ಕದ ತಟ್ಟಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌ವಿಎನ್ ಭಟ್ಟಿ ಮತ್ತು ಮನೋಜ್ ಮಿಶ್ರಾ ಅವರಿದ್ದ ದ್ವಿಸದಸ್ಯ ಪೀಠವು, ಹೈಕೋರ್ಟ್​ ವಿಚಾರಣೆ ನಡೆಸುತ್ತಿರುವ ಹಿನ್ನೆಲೆ ತೀರ್ಪು ಪ್ರಕಟವಾಗುವವರೆಗೆ ಕಾಯ್ದಿರಲು ಸೂಚಿಸಿ ಜೂ.26ಕ್ಕೆ (ಇಂದಿಗೆ) ವಿಚಾರಣೆ ಮುಂದೂಡಿತ್ತು.

ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿರುವ ಕೇಜ್ರಿವಾಲ್ ಅವರಿಗೆ ಕೆಳ ಹಂತದ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: ದೆಹಲಿ ಸಿಎಂ​ ಜಾಮೀನು ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್​: ತಿಹಾರ್​ ಜೈಲಿನಲ್ಲಿ ಕೇಜ್ರಿವಾಲ್​ಗೆ ಸಿಬಿಐ ಗ್ರಿಲ್​ - Aravind Kejriwal

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರನ್ನು ಇಂದು ಸಿಬಿಐ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ. ಇದಕ್ಕೂ ಮೊದಲು ಸೋಮವಾರದಂದು ತಿಹಾರ್​ ಜೈಲಿನಲ್ಲೇ ಕೇಜ್ರಿವಾಲ್​ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದರು.

ಮಂಗಳವಾರವೂ ಮತ್ತೊಮ್ಮೆ ವಿಚಾರಣೆ ನಡೆಸಿದ್ದರು. ಬಳಿಕ ಬುಧವಾರ ವಿಚಾರಣಾ ನ್ಯಾಯಾಲಯಕ್ಕೆ ಕೇಜ್ರಿವಾಲ್​ ಅವರನ್ನು ಹಾಜರು ಪಡಿಸಲು ಅನುಮತಿಯನ್ನು ಸಿಬಿಐ ಪಡೆದಿತ್ತು. ಇದೀಗ ನ್ಯಾಯಾಲಯಕ್ಕೆ ಹಾಜರು ಪಡಿಸಿ ಅಧಿಕೃತವಾಗಿ ಬಂಧಿಸಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಇಡಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಅವರ ನಿವಾಸದಿಂದ ಬಂಧಿಸಿತ್ತು. ಏಪ್ರಿಲ್ 1 ರಂದು ತಿಹಾರ್‌ಗೆ ಕಳುಹಿಸಲಾಗಿತ್ತು.

ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್‌ ಅರವಿಂದ್​ ಕೇಜ್ರಿವಾಲ್‌ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನನ್ನು ತಡೆ ನೀಡಿ ಹೈಕೋರ್ಟ್ ಆದೇಶಿಸಿತ್ತು. ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರಿದ್ದ ಪೀಠವು ರೋಸ್​​​ ಅವೆನ್ಯೂ ನ್ಯಾಯಾಲಯದ ತೀರ್ಪಿಗೆ ತಡೆಯಾಜ್ಞೆ ನೀಡಿ ಆದೇಶ ಮಾಡಿತ್ತು.

ಇಂದು ಸುಪ್ರೀಂನಲ್ಲಿ ವಿಚಾರಣೆ: ದೆಹಲಿ ಹೈಕೋರ್ಟ್​ನ​ ಜಾಮೀನು ತಡೆಯಾಜ್ಞೆ ಆದೇಶವನ್ನು ಪ್ರಶ್ನಿಸಿ ಕಳೆದ ಎರಡು ದಿನಗಳ ಹಿಂದೆ ಸಿಎಂ ಕೇಜ್ರಿವಾಲ್​ ಅವರು ಸುಪ್ರೀಂ ಕೋರ್ಟ್​ ಕದ ತಟ್ಟಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌ವಿಎನ್ ಭಟ್ಟಿ ಮತ್ತು ಮನೋಜ್ ಮಿಶ್ರಾ ಅವರಿದ್ದ ದ್ವಿಸದಸ್ಯ ಪೀಠವು, ಹೈಕೋರ್ಟ್​ ವಿಚಾರಣೆ ನಡೆಸುತ್ತಿರುವ ಹಿನ್ನೆಲೆ ತೀರ್ಪು ಪ್ರಕಟವಾಗುವವರೆಗೆ ಕಾಯ್ದಿರಲು ಸೂಚಿಸಿ ಜೂ.26ಕ್ಕೆ (ಇಂದಿಗೆ) ವಿಚಾರಣೆ ಮುಂದೂಡಿತ್ತು.

ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿರುವ ಕೇಜ್ರಿವಾಲ್ ಅವರಿಗೆ ಕೆಳ ಹಂತದ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: ದೆಹಲಿ ಸಿಎಂ​ ಜಾಮೀನು ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್​: ತಿಹಾರ್​ ಜೈಲಿನಲ್ಲಿ ಕೇಜ್ರಿವಾಲ್​ಗೆ ಸಿಬಿಐ ಗ್ರಿಲ್​ - Aravind Kejriwal

Last Updated : Jun 26, 2024, 12:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.