ETV Bharat / bharat

ದೆಹಲಿ ಅಬಕಾರಿ ನೀತಿ ಹಗರಣ : ಬಿಆರ್​ಎಸ್​ ನಾಯಕಿ ಕವಿತಾಗೆ ರಿಲೀಫ್​ ನೀಡಿದ ಸುಪ್ರೀಂ ಕೋರ್ಟ್

author img

By ETV Bharat Karnataka Team

Published : Feb 29, 2024, 9:43 AM IST

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರ ವಿರುದ್ಧ ಮುಂದಿನ ವಿಚಾರಣೆವರೆಗೆ ಯಾವುದೇ ಬಲವಂತದ ಕ್ರಮದಿಂದ ರಿಲೀಫ್​ ನೀಡಿದೆ.

ಬಿಆರ್​ಎಸ್​ ನಾಯಕಿ ಕವಿತಾ
ಬಿಆರ್​ಎಸ್​ ನಾಯಕಿ ಕವಿತಾ

ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಮಾರ್ಚ್ 13 ರವರೆಗೆ ವಿಚಾರಣೆ ನಡೆಸದಂತೆ ಇಡಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರಿದ್ದ ಪೀಠವು ಮುಂದಿನ ವಿಚಾರಣೆಯನ್ನು ಮಾರ್ಚ್ 13 ರಂದು ನಡೆಸುವುದಾಗಿ ಹೇಳಿದೆ. ಕವಿತಾ ಅವರು ಸಮನ್ಸ್​ಗೆ ಸ್ಪಂದಿಸುತ್ತಿಲ್ಲ ಹಾಗೂ ಇಡಿ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ ಫೆಬ್ರವರಿ 5 ರಂದು ಸುಪ್ರೀಂಕೋರ್ಟ್​ಗೆ ಹೇಳಿತ್ತು. ಇಡಿ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಸುಪ್ರೀಂ ಪೀಠದ ಮುಂದೆ ತಮ್ಮ ವಾದ ಮಂಡಿಸಿದ್ದರು.

ಕವಿತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸಮನ್ಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸುವವರೆಗೆ ಕವಿತಾಳನ್ನು ವಿಚಾರಣೆಗೆ ಆಹ್ವಾನಿಸುವುದಿಲ್ಲ ಎಂದು ಎಎಸ್‌ಜಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು ಎಂದರು.

ಕವಿತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸಮನ್ಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುವವರೆಗೆ ಕವಿತಾ ಅವರನ್ನು ವಿಚಾರಣೆಗೆ ಕರೆಯುವುದಿಲ್ಲ ಎಂದು ಹೆಚ್ಚುವರಿ ಸಾಲಿಸಿಟರ್​ ಜನರಲ್​ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದ್ದರು ಎಂಬ ವಿಚಾರವನ್ನು ಕೋರ್ಟ್​ ಗಮನಕ್ಕೆ ತಂದಿದ್ದರು. ಈ ವೇಳೆ ಮುಂದಿನ ವಿಚಾರಣೆಯ ವೇಳೆ ಪರಿಶೀಲಿಸುವುದಾಗಿ ಪೀಠ ಹೇಳಿತ್ತು. ಇದೀಗ ಸಲ್ಲಿಕೆಗಳನ್ನು ಆಲಿಸಿದ ನಂತರ, ಸುಪ್ರೀಂ ಕೋರ್ಟ್ ಕವಿತಾ ಅವರಿಗೆ ತಾತ್ಕಾಲಿಕ ರಿಲೀಫ್​ ನೀಡಿದೆ.

ಕವಿತಾ ಅವರು 2021-22 ರ ಅಬಕಾರಿ ನೀತಿಯ ಅಡಿಯಲ್ಲಿ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) 100 ಕೋಟಿ ರೂಪಾಯಿಗಳನ್ನು ಪಾವತಿಸಿದ ಮದ್ಯದ ಕಾರ್ಟೆಲ್ 'ದಿ ಸೌತ್ ಗ್ರೂಪ್' ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ.

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ; ಕವಿತಾ ವಿಚಾರಣೆಗೆ ಹಾಜರಾಗುತ್ತಿಲ್ಲ, ಸುಪ್ರೀಂಗೆ ಇಡಿ ವಿವರಣೆ

ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಮಾರ್ಚ್ 13 ರವರೆಗೆ ವಿಚಾರಣೆ ನಡೆಸದಂತೆ ಇಡಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರಿದ್ದ ಪೀಠವು ಮುಂದಿನ ವಿಚಾರಣೆಯನ್ನು ಮಾರ್ಚ್ 13 ರಂದು ನಡೆಸುವುದಾಗಿ ಹೇಳಿದೆ. ಕವಿತಾ ಅವರು ಸಮನ್ಸ್​ಗೆ ಸ್ಪಂದಿಸುತ್ತಿಲ್ಲ ಹಾಗೂ ಇಡಿ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ ಫೆಬ್ರವರಿ 5 ರಂದು ಸುಪ್ರೀಂಕೋರ್ಟ್​ಗೆ ಹೇಳಿತ್ತು. ಇಡಿ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಸುಪ್ರೀಂ ಪೀಠದ ಮುಂದೆ ತಮ್ಮ ವಾದ ಮಂಡಿಸಿದ್ದರು.

ಕವಿತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸಮನ್ಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸುವವರೆಗೆ ಕವಿತಾಳನ್ನು ವಿಚಾರಣೆಗೆ ಆಹ್ವಾನಿಸುವುದಿಲ್ಲ ಎಂದು ಎಎಸ್‌ಜಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು ಎಂದರು.

ಕವಿತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸಮನ್ಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುವವರೆಗೆ ಕವಿತಾ ಅವರನ್ನು ವಿಚಾರಣೆಗೆ ಕರೆಯುವುದಿಲ್ಲ ಎಂದು ಹೆಚ್ಚುವರಿ ಸಾಲಿಸಿಟರ್​ ಜನರಲ್​ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದ್ದರು ಎಂಬ ವಿಚಾರವನ್ನು ಕೋರ್ಟ್​ ಗಮನಕ್ಕೆ ತಂದಿದ್ದರು. ಈ ವೇಳೆ ಮುಂದಿನ ವಿಚಾರಣೆಯ ವೇಳೆ ಪರಿಶೀಲಿಸುವುದಾಗಿ ಪೀಠ ಹೇಳಿತ್ತು. ಇದೀಗ ಸಲ್ಲಿಕೆಗಳನ್ನು ಆಲಿಸಿದ ನಂತರ, ಸುಪ್ರೀಂ ಕೋರ್ಟ್ ಕವಿತಾ ಅವರಿಗೆ ತಾತ್ಕಾಲಿಕ ರಿಲೀಫ್​ ನೀಡಿದೆ.

ಕವಿತಾ ಅವರು 2021-22 ರ ಅಬಕಾರಿ ನೀತಿಯ ಅಡಿಯಲ್ಲಿ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) 100 ಕೋಟಿ ರೂಪಾಯಿಗಳನ್ನು ಪಾವತಿಸಿದ ಮದ್ಯದ ಕಾರ್ಟೆಲ್ 'ದಿ ಸೌತ್ ಗ್ರೂಪ್' ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ.

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ; ಕವಿತಾ ವಿಚಾರಣೆಗೆ ಹಾಜರಾಗುತ್ತಿಲ್ಲ, ಸುಪ್ರೀಂಗೆ ಇಡಿ ವಿವರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.