ETV Bharat / bharat

ಸುಪ್ರೀಂ ಕೋರ್ಟ್​ ಮಧ್ಯಸ್ಥಿಕೆ ಬಳಿಕ 11 ದಿನಗಳ ವೈದ್ಯರ ಮುಷ್ಕರ ಅಂತ್ಯ: ನಾಳೆ ಕೆಲಸಕ್ಕೆ ಹಾಜರ್​ - Doctors Strike Called Off

author img

By ETV Bharat Karnataka Team

Published : Aug 22, 2024, 6:15 PM IST

ಬಂಗಾಳ ವೈದ್ಯೆ ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ದಿನಗಳಿಂದ ವೈದ್ಯರು ನಡೆಸುತ್ತಿದ್ದ ಮುಷ್ಕರ ಗುರುವಾರ ಅಂತ್ಯವಾಗಿದೆ. ಸುಪ್ರೀಂ ಕೋರ್ಟ್​ ಮಧ್ಯಸ್ಥಿಕೆ ಬಳಿಕ ನಾಳೆ (ಶುಕ್ರವಾರ) ಕೆಲಸಕ್ಕೆ ಹಾಜರಾಗುವುದಾಗಿ ವೈದ್ಯಕೀಯ ಸಂಘ ತಿಳಿಸಿದೆ.

ವೈದ್ಯರ ಮುಷ್ಕರ ಅಂತ್ಯ
ವೈದ್ಯರ ಮುಷ್ಕರ ಅಂತ್ಯ (ETV Bharat)

ನವದೆಹಲಿ: ಬಂಗಾಳದ ಆರ್‌.ಜಿ.ಕರ್ ಆಸ್ಪತ್ರೆಯಲ್ಲಿ ವೈದ್ಯೆ ವಿದ್ಯಾರ್ಥಿನಿಯ ಅತ್ಯಾಚಾರ, ಹತ್ಯೆ ಪ್ರಕರಣ ವಿರೋಧಿಸಿ ಕೆಲವು ದಿನಗಳಿಂದ ಧರಣಿ ನಡೆಸುತ್ತಿದ್ದ ವೈದ್ಯರು ಕೊನೆಗೂ ಸುಪ್ರೀಂ ಕೋರ್ಟ್​ ಸಲಹೆಯ ಬಳಿಕ ಮುಷ್ಕರವನ್ನು ಗುರುವಾರ ಹಿಂಪಡೆದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಉನ್ನತ ನ್ಯಾಯಾಲಯ ಭರವಸೆ ನೀಡಿದೆ.

ವೈದ್ಯರ ಬೇಡಿಕೆ ಮತ್ತು ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸುವ ಬಗ್ಗೆ ಭರವಸೆ ಸಿಕ್ಕ ಬಳಿಕ ಪ್ರತಿಭಟನೆ ವಾಪಸ್​ ಪಡೆಯಲಾಗಿದೆ. ಆಗಸ್ಟ್ 23ರಂದು ಬೆಳಿಗ್ಗೆ 8 ಗಂಟೆಯಿಂದ ಸೇವೆಯನ್ನು ಮರು ಆರಂಭಿಸಲಾಗುವುದು ಎಂದು ವೈದ್ಯಕೀಯ ಸಂಘ ತಿಳಿಸಿದೆ.

ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಡಾ.ಆರ್‌.ಎಂ.ಎಲ್.ಆಸ್ಪತ್ರೆ ವೈದ್ಯರ ಸಂಘವು, ಸುಪ್ರೀಂಕೋರ್ಟ್​ ತಮ್ಮ ಬೇಡಿಕೆಗಳು ಮತ್ತು ಕಾಳಜಿಯನ್ನು ಅರ್ಥ ಮಾಡಿಕೊಂಡಿದೆ. ಕೋರ್ಟ್​ನ ಮೇಲಿನ ನಂಬಿಕೆಯಿಂದಾಗಿ ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ. ವೈದ್ಯರು ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. 11 ದಿನಗಳ ಮುಷ್ಕರ ಅಂತ್ಯವಾಗಲಿದೆ ಎಂದು ತಿಳಿಸಿದೆ.

ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವ ಮೂಲಕ ಕೋಲ್ಕತ್ತಾ ಹೈಕೋರ್ಟ್‌ ನಮ್ಮ ಮೊದಲ ಬೇಡಿಕೆಯನ್ನು ಈಡೇರಿಸಿದೆ. ಬಳಿಕ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಕೊಲೆ ಕೇಸ್​ ಅನ್ನು ತನಿಖೆ ನಡೆಸುತ್ತಿದೆ. ಹೀಗಾಗಿ ವೈದ್ಯರ ಮುಷ್ಕರವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ದೆಹಲಿಯ ಏಮ್ಸ್​ ಆಸ್ಪತ್ರೆಯ ಜನರಲ್​ ಸೆಕ್ರೆಟರಿ ರಘುನಂದನ್​​ ದೀಕ್ಷಿತ್​ ಅವರು ಹೇಳಿದ್ದಾರೆ.

ಕೆಲಸಕ್ಕೆ ಮರಳಲು ಸೂಚಿಸಿದ್ದ ಸುಪ್ರೀಂ: ಇದಕ್ಕೂ ಮುನ್ನ, ಸುಪ್ರೀಂ ಕೋರ್ಟ್ ಗುರುವಾರ ಬಂಗಾಳ ವೈದ್ಯೆ ವಿದ್ಯಾರ್ಥಿನಿಯ ಪ್ರಕರಣವನ್ನು ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಈ ವೇಳೆ ವೈದ್ಯರು ಕೆಲಸ ಬಿಟ್ಟು ಪ್ರತಿಭಟನೆ ಮಾಡುತ್ತಿರುವುದಕ್ಕೆ ಬೇಸರಿಸಿ, ಆರೋಗ್ಯ ವ್ಯವಸ್ಥೆ ಕಾಪಾಡಲು ವೈದ್ಯರು ತಕ್ಷಣವೇ ಹೋರಾಟ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗಿ ಎಂದು ಸೂಚಿಸಿತ್ತು. ಮುಷ್ಕರದಿಂದ ರೋಗಿಗಳು ಎದುರಿಸುವ ಸಮಸ್ಯೆಗಳ ಬಗ್ಗೆ ವೈದ್ಯ ಸಂಘ ಯೋಚಿಸಬೇಕು ಎಂದು ಕೋರ್ಟ್​ ಹೇಳಿತ್ತು.

ವೈದ್ಯರು ಪ್ರತಿಭಟನೆ ನಡೆಸುತ್ತಿರುವ ವೇಳೆ ಹಾಕಿರುವ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕಾದರೆ, ಮೊದಲು ಕರ್ತವ್ಯಕ್ಕೆ ಮರಳಿ ಎಂದು ಕೋರ್ಟ್​ ಇದೇ ವೇಳೆ ಹೇಳಿತು. ಹೋರಾಟದ ವೇಳೆ ಹಾಕಲಾಗಿರುವ ಪ್ರಕರಣಗಳನ್ನು ವಾಪಸ್​ ಪಡೆಯುವ ಬಗ್ಗೆ ಪರಿಶೀಲಿಸಲಾಗುವುದು. ಜೊತೆಗೆ ವೈದ್ಯರ ಸುರಕ್ಷತೆಗಾಗಿ ಎರಡು ವಾರಗಳಲ್ಲಿ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರಗಳಿಗೆ ಆದೇಶಿಸಿತು. ಬಳಿಕ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿತು.

ಸಿಬಿಐ ಹೇಳಿದ್ದೇನು?: ಮತ್ತೊಂದೆಡೆ, ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಸಿಬಿಐ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದೆ. ಪ್ರಕರಣ ಹಸ್ತಾಂತರಿಸುವ ವೇಳೆಗೆ ಅಪರಾಧದ ದೃಶ್ಯವೇ ಬದಲಾಗಿದೆ. ಇದರಿಂದ ತನಿಖೆ ಸವಾಲಾಗಿ ಪರಿಣಮಿಸಿದೆ ಎಂದು ವರದಿಯಲ್ಲಿ ಹೇಳಿದೆ. ಈ ವೇಳೆ ಕೋಲ್ಕತ್ತಾ ಪೊಲೀಸರ ವರ್ತನೆಗೆ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರಕರಣ ಸಂಭವಿಸಿ 14 ಗಂಟೆ ಕಳೆದರೂ ಎಫ್‌ಐಆರ್ ಯಾಕೆ ದಾಖಲಿಸಲಿಲ್ಲ ಎಂದು ಬಂಗಾಳ ಸರ್ಕಾರವನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ಪ್ರತಿಭಟನೆ ಬಿಟ್ಟು ಕೆಲಸಕ್ಕೆ ಮರಳಿ; ವೈದ್ಯರಿಗೆ ಸುಪ್ರೀಂಕೋರ್ಟ್​​​ ಸೂಚನೆ - SC Ask doctors to resume work

ನವದೆಹಲಿ: ಬಂಗಾಳದ ಆರ್‌.ಜಿ.ಕರ್ ಆಸ್ಪತ್ರೆಯಲ್ಲಿ ವೈದ್ಯೆ ವಿದ್ಯಾರ್ಥಿನಿಯ ಅತ್ಯಾಚಾರ, ಹತ್ಯೆ ಪ್ರಕರಣ ವಿರೋಧಿಸಿ ಕೆಲವು ದಿನಗಳಿಂದ ಧರಣಿ ನಡೆಸುತ್ತಿದ್ದ ವೈದ್ಯರು ಕೊನೆಗೂ ಸುಪ್ರೀಂ ಕೋರ್ಟ್​ ಸಲಹೆಯ ಬಳಿಕ ಮುಷ್ಕರವನ್ನು ಗುರುವಾರ ಹಿಂಪಡೆದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಉನ್ನತ ನ್ಯಾಯಾಲಯ ಭರವಸೆ ನೀಡಿದೆ.

ವೈದ್ಯರ ಬೇಡಿಕೆ ಮತ್ತು ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸುವ ಬಗ್ಗೆ ಭರವಸೆ ಸಿಕ್ಕ ಬಳಿಕ ಪ್ರತಿಭಟನೆ ವಾಪಸ್​ ಪಡೆಯಲಾಗಿದೆ. ಆಗಸ್ಟ್ 23ರಂದು ಬೆಳಿಗ್ಗೆ 8 ಗಂಟೆಯಿಂದ ಸೇವೆಯನ್ನು ಮರು ಆರಂಭಿಸಲಾಗುವುದು ಎಂದು ವೈದ್ಯಕೀಯ ಸಂಘ ತಿಳಿಸಿದೆ.

ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಡಾ.ಆರ್‌.ಎಂ.ಎಲ್.ಆಸ್ಪತ್ರೆ ವೈದ್ಯರ ಸಂಘವು, ಸುಪ್ರೀಂಕೋರ್ಟ್​ ತಮ್ಮ ಬೇಡಿಕೆಗಳು ಮತ್ತು ಕಾಳಜಿಯನ್ನು ಅರ್ಥ ಮಾಡಿಕೊಂಡಿದೆ. ಕೋರ್ಟ್​ನ ಮೇಲಿನ ನಂಬಿಕೆಯಿಂದಾಗಿ ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ. ವೈದ್ಯರು ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. 11 ದಿನಗಳ ಮುಷ್ಕರ ಅಂತ್ಯವಾಗಲಿದೆ ಎಂದು ತಿಳಿಸಿದೆ.

ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವ ಮೂಲಕ ಕೋಲ್ಕತ್ತಾ ಹೈಕೋರ್ಟ್‌ ನಮ್ಮ ಮೊದಲ ಬೇಡಿಕೆಯನ್ನು ಈಡೇರಿಸಿದೆ. ಬಳಿಕ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಕೊಲೆ ಕೇಸ್​ ಅನ್ನು ತನಿಖೆ ನಡೆಸುತ್ತಿದೆ. ಹೀಗಾಗಿ ವೈದ್ಯರ ಮುಷ್ಕರವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ದೆಹಲಿಯ ಏಮ್ಸ್​ ಆಸ್ಪತ್ರೆಯ ಜನರಲ್​ ಸೆಕ್ರೆಟರಿ ರಘುನಂದನ್​​ ದೀಕ್ಷಿತ್​ ಅವರು ಹೇಳಿದ್ದಾರೆ.

ಕೆಲಸಕ್ಕೆ ಮರಳಲು ಸೂಚಿಸಿದ್ದ ಸುಪ್ರೀಂ: ಇದಕ್ಕೂ ಮುನ್ನ, ಸುಪ್ರೀಂ ಕೋರ್ಟ್ ಗುರುವಾರ ಬಂಗಾಳ ವೈದ್ಯೆ ವಿದ್ಯಾರ್ಥಿನಿಯ ಪ್ರಕರಣವನ್ನು ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಈ ವೇಳೆ ವೈದ್ಯರು ಕೆಲಸ ಬಿಟ್ಟು ಪ್ರತಿಭಟನೆ ಮಾಡುತ್ತಿರುವುದಕ್ಕೆ ಬೇಸರಿಸಿ, ಆರೋಗ್ಯ ವ್ಯವಸ್ಥೆ ಕಾಪಾಡಲು ವೈದ್ಯರು ತಕ್ಷಣವೇ ಹೋರಾಟ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗಿ ಎಂದು ಸೂಚಿಸಿತ್ತು. ಮುಷ್ಕರದಿಂದ ರೋಗಿಗಳು ಎದುರಿಸುವ ಸಮಸ್ಯೆಗಳ ಬಗ್ಗೆ ವೈದ್ಯ ಸಂಘ ಯೋಚಿಸಬೇಕು ಎಂದು ಕೋರ್ಟ್​ ಹೇಳಿತ್ತು.

ವೈದ್ಯರು ಪ್ರತಿಭಟನೆ ನಡೆಸುತ್ತಿರುವ ವೇಳೆ ಹಾಕಿರುವ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕಾದರೆ, ಮೊದಲು ಕರ್ತವ್ಯಕ್ಕೆ ಮರಳಿ ಎಂದು ಕೋರ್ಟ್​ ಇದೇ ವೇಳೆ ಹೇಳಿತು. ಹೋರಾಟದ ವೇಳೆ ಹಾಕಲಾಗಿರುವ ಪ್ರಕರಣಗಳನ್ನು ವಾಪಸ್​ ಪಡೆಯುವ ಬಗ್ಗೆ ಪರಿಶೀಲಿಸಲಾಗುವುದು. ಜೊತೆಗೆ ವೈದ್ಯರ ಸುರಕ್ಷತೆಗಾಗಿ ಎರಡು ವಾರಗಳಲ್ಲಿ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರಗಳಿಗೆ ಆದೇಶಿಸಿತು. ಬಳಿಕ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿತು.

ಸಿಬಿಐ ಹೇಳಿದ್ದೇನು?: ಮತ್ತೊಂದೆಡೆ, ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಸಿಬಿಐ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದೆ. ಪ್ರಕರಣ ಹಸ್ತಾಂತರಿಸುವ ವೇಳೆಗೆ ಅಪರಾಧದ ದೃಶ್ಯವೇ ಬದಲಾಗಿದೆ. ಇದರಿಂದ ತನಿಖೆ ಸವಾಲಾಗಿ ಪರಿಣಮಿಸಿದೆ ಎಂದು ವರದಿಯಲ್ಲಿ ಹೇಳಿದೆ. ಈ ವೇಳೆ ಕೋಲ್ಕತ್ತಾ ಪೊಲೀಸರ ವರ್ತನೆಗೆ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರಕರಣ ಸಂಭವಿಸಿ 14 ಗಂಟೆ ಕಳೆದರೂ ಎಫ್‌ಐಆರ್ ಯಾಕೆ ದಾಖಲಿಸಲಿಲ್ಲ ಎಂದು ಬಂಗಾಳ ಸರ್ಕಾರವನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ಪ್ರತಿಭಟನೆ ಬಿಟ್ಟು ಕೆಲಸಕ್ಕೆ ಮರಳಿ; ವೈದ್ಯರಿಗೆ ಸುಪ್ರೀಂಕೋರ್ಟ್​​​ ಸೂಚನೆ - SC Ask doctors to resume work

ETV Bharat Logo

Copyright © 2024 Ushodaya Enterprises Pvt. Ltd., All Rights Reserved.