ETV Bharat / bharat

ಛತ್ತೀಸ್​ಗಢ: ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ

ನಕ್ಸಲ್ ಚಟುವಟಿಕೆಗಳ ಕುರಿತು ಗುಪ್ತಚರ ವರದಿ ಮೇರೆಗೆ ಭದ್ರತಾ ಪಡೆಗಳು ಛತ್ತೀಸ್‌ಗಢದ ಸುಕ್ಮಾದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.

encounter-between-security-forces-and-maoists-in-the-forests-of-sukma-district
ಸಾಂದರ್ಭಿಕ ಚಿತ್ರ (ANI)
author img

By ETV Bharat Karnataka Team

Published : 3 hours ago

ಸುಕ್ಮಾ(ಛತ್ತೀಸ್​ಗಢ): ಛತ್ತೀಸ್​ಗಢದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ಇಲ್ಲಿನ ಬಸ್ತಾರ್​ ವಿಭಾಗದ ಸುಕ್ಮಾ ಅರಣ್ಯದಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಭೆಜ್ಜೈ ಪೊಲೀಸ್​ ಠಾಣಾ ವ್ಯಾಪ್ತಿಯ ಕಂಗಲ್ತೊಂಗ್​ ಪ್ರದೇಶದಲ್ಲಿ ಎನ್​ಕೌಂಟರ್​ ನಡೆದಿದೆ.

ಸ್ಥಳೀಯ ಪೊಲೀಸರ ಪ್ರಕಾರ, ಜಿಲ್ಲಾ ಮೀಸಲು ಗಾರ್ಡ್​​ (ಡಿಆರ್​ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್​) ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಈ ಪ್ರದೆಶದಲ್ಲಿ ನಕ್ಸಲರ ಚಟುವಟಿಕೆಗಳ ಕುರಿತು ಗುಪ್ತಚರ ವರದಿ ನೀಡಿದ ಮಾಹಿತಿ ಮೇರೆಗೆ ಇಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಯೋಧರು ಆಗಮಿಸುತ್ತಿದ್ದಂತೆ ನಕ್ಸಲರು ಗುಂಡಿನ ದಾಳಿ ಆರಂಭಿಸಿದ್ದು, ಇದಕ್ಕೆ ಪ್ರತಿಯಾಗಿ ಯೋಧರು ಕೂಡ ಸ್ವಯಂ ರಕ್ಷಣೆಗೆ ಗುಂಡು ಹಾರಿಸಿದ್ದಾರೆ.

ಆರಂಭಿಕ ವರದಿಗಳ ಪ್ರಕಾರ, ಎನ್​ಕೌಂಟರ್​ನಲ್ಲಿ ಅನೇಕ ನಕ್ಸಲರು ಗಾಯ ಇಲ್ಲವೇ ಸಾವನ್ನಪ್ಪಿರಬಹುದು. ಕಾರ್ಯಾಚರಣೆ ಕುರಿತು ಪ್ರತಿಕ್ರಿಯಿಸಿದ ಸುಕ್ಮಾ ಎಸ್​ಪಿ ಕಿರಣ್​ ಚೌಹಣ್​, ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಬಳಿಕ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಪ್ರತ್ಯೇಕ ಘಟನೆಯಲ್ಲಿ ಬಿಜಾಪುರ್​ನಲ್ಲಿ ಸಿಆರ್​ಪಿಎಫ್​ ಹೆಡ್​ಕಾನ್ಸ್​ಟೇಬಲ್​, ಕರ್ತವ್ಯ ನಿರ್ವಹಿಸುವ ವೇಳೆ ಸರ್ವಿಸ್​ ರೈಫಲ್​ನಿಂದ ಗುಂಡಿಕ್ಕಿ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆಯೂ ವರದಿಯಾಗಿದೆ. ಈ ಕುರಿತ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಕಾಶ್ಮೀರದ ವಾತಾವರಣ ಸೃಷ್ಟಿಸಿ ಕೇಸರಿ ಬೆಳೆದ ಅಣ್ಣ ತಂಗಿ: ಲಕ್ಷಾಂತರ ಆದಾಯದ ನಿರೀಕ್ಷೆ

ಸುಕ್ಮಾ(ಛತ್ತೀಸ್​ಗಢ): ಛತ್ತೀಸ್​ಗಢದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ಇಲ್ಲಿನ ಬಸ್ತಾರ್​ ವಿಭಾಗದ ಸುಕ್ಮಾ ಅರಣ್ಯದಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಭೆಜ್ಜೈ ಪೊಲೀಸ್​ ಠಾಣಾ ವ್ಯಾಪ್ತಿಯ ಕಂಗಲ್ತೊಂಗ್​ ಪ್ರದೇಶದಲ್ಲಿ ಎನ್​ಕೌಂಟರ್​ ನಡೆದಿದೆ.

ಸ್ಥಳೀಯ ಪೊಲೀಸರ ಪ್ರಕಾರ, ಜಿಲ್ಲಾ ಮೀಸಲು ಗಾರ್ಡ್​​ (ಡಿಆರ್​ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್​) ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಈ ಪ್ರದೆಶದಲ್ಲಿ ನಕ್ಸಲರ ಚಟುವಟಿಕೆಗಳ ಕುರಿತು ಗುಪ್ತಚರ ವರದಿ ನೀಡಿದ ಮಾಹಿತಿ ಮೇರೆಗೆ ಇಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಯೋಧರು ಆಗಮಿಸುತ್ತಿದ್ದಂತೆ ನಕ್ಸಲರು ಗುಂಡಿನ ದಾಳಿ ಆರಂಭಿಸಿದ್ದು, ಇದಕ್ಕೆ ಪ್ರತಿಯಾಗಿ ಯೋಧರು ಕೂಡ ಸ್ವಯಂ ರಕ್ಷಣೆಗೆ ಗುಂಡು ಹಾರಿಸಿದ್ದಾರೆ.

ಆರಂಭಿಕ ವರದಿಗಳ ಪ್ರಕಾರ, ಎನ್​ಕೌಂಟರ್​ನಲ್ಲಿ ಅನೇಕ ನಕ್ಸಲರು ಗಾಯ ಇಲ್ಲವೇ ಸಾವನ್ನಪ್ಪಿರಬಹುದು. ಕಾರ್ಯಾಚರಣೆ ಕುರಿತು ಪ್ರತಿಕ್ರಿಯಿಸಿದ ಸುಕ್ಮಾ ಎಸ್​ಪಿ ಕಿರಣ್​ ಚೌಹಣ್​, ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಬಳಿಕ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಪ್ರತ್ಯೇಕ ಘಟನೆಯಲ್ಲಿ ಬಿಜಾಪುರ್​ನಲ್ಲಿ ಸಿಆರ್​ಪಿಎಫ್​ ಹೆಡ್​ಕಾನ್ಸ್​ಟೇಬಲ್​, ಕರ್ತವ್ಯ ನಿರ್ವಹಿಸುವ ವೇಳೆ ಸರ್ವಿಸ್​ ರೈಫಲ್​ನಿಂದ ಗುಂಡಿಕ್ಕಿ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆಯೂ ವರದಿಯಾಗಿದೆ. ಈ ಕುರಿತ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಕಾಶ್ಮೀರದ ವಾತಾವರಣ ಸೃಷ್ಟಿಸಿ ಕೇಸರಿ ಬೆಳೆದ ಅಣ್ಣ ತಂಗಿ: ಲಕ್ಷಾಂತರ ಆದಾಯದ ನಿರೀಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.