ETV Bharat / bharat

ಸರ್ಕಾರದ ಎಂಎಸ್​ಪಿ ಪ್ರಸ್ತಾಪ ತಿರಸ್ಕರಿಸಿದ ರೈತರು: 21 ರಂದು ದಿಲ್ಲಿ ಚಲೋ ಹೋರಾಟ - Farmers reject Centres proposal

4ನೇ ಸುತ್ತಿನ ಮಾತುಕತೆಯಲ್ಲಿ ಸರ್ಕಾರ ಪ್ರಸ್ತಾಪಿಸಿದ ಎಂಎಸ್​ಪಿಯನ್ನು ರೈತರು ತಿರಸ್ಕರಿಸಿದ್ದಾರೆ. ಇದೇ 21 ರಂದು 'ದಿಲ್ಲಿ ಚಲೋ' ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.

ಎಂಎಸ್​ಪಿ ಪ್ರಸ್ತಾಪ ತಿರಸ್ಕರಿಸಿದ ರೈತರು
ಎಂಎಸ್​ಪಿ ಪ್ರಸ್ತಾಪ ತಿರಸ್ಕರಿಸಿದ ರೈತರು
author img

By ETV Bharat Karnataka Team

Published : Feb 20, 2024, 6:56 AM IST

Updated : Feb 20, 2024, 7:40 AM IST

ಅಂಬಾಲಾ (ಹರಿಯಾಣ): ಕನಿಷ್ಠ ಬೆಂಬಲ ಬೆಲೆ (ಎಂಎಸ್​ಪಿ) ಕುರಿತ ಸರ್ಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ. ಇದರಿಂದ ರೈತರು ಮತ್ತು ಕೇಂದ್ರ ಸರ್ಕಾರದ ಮಧ್ಯೆ ನಡೆದ ನಾಲ್ಕನೇ ಸುತ್ತಿನ ಮಾತುಕತೆಯೂ ಯಾವುದೇ ಫಲಿತಾಂಶವಿಲ್ಲದೇ ಅಂತ್ಯವಾಗಿದೆ. ಫೆಬ್ರವರಿ 21 ರಂದು ದೆಹಲಿಯತ್ತ ಮೆರವಣಿಗೆ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.

ಕೇಂದ್ರ ಸರ್ಕಾರದ ಸಚಿವರು ಮತ್ತು ರೈತ ಮುಖಂಡರು ಭಾನುವಾರ ಸಭೆ ನಡೆಸಿ ಎಂಎಸ್​​ಪಿ ಬಗ್ಗೆ ಚರ್ಚಿಸಿದ್ದರು. ಸರ್ಕಾರ ಬೆಳೆಗಳಿಗೆ ನೀಡುವ ದರ ಮತ್ತು ಯಾವ ಬೆಳೆ ಖರೀದಿ ಮಾಡಲಾಗುತ್ತದೆ ಎಂಬ ಬಗ್ಗೆ ರೈತರಿಗೆ ತಿಳಿಸಲಾಗಿತ್ತು. ಇದು ರೈತ ನಾಯಕರಲ್ಲಿ ಚರ್ಚೆಯ ನಂತರ ಸರ್ಕಾರದ ಪ್ರಸ್ತಾವನೆಯನ್ನು ಒಪ್ಪಲಾಗಲ್ಲ. ನಮ್ಮ ಬೇಡಿಕೆಗೆ ಅನುಗುಣವಾಗಿ ಪ್ರಸ್ತಾವ ಬಂದಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, ಚರ್ಚೆಯ ನಂತರ ರೈತ ಸಂಘಟನೆಗಳು ಸರ್ಕಾರದ ಎಂಎಸ್​ಪಿ ಪ್ರಸ್ತಾವನೆಯನ್ನು ತಿರಸ್ಕರಿಸಿವೆ. ಸರ್ಕಾರದ ಭರವಸೆಯು ರೈತರಿಗೆ ಅನುಕೂಲಕರವಾಗಿಲ್ಲ. ಹೀಗಾಗಿ ನಾವಿದನ್ನು ಒಪ್ಪಲ್ಲ. ನಮ್ಮ ಹೋರಾಟ ಮುಂದುವರಿಯಲಿದೆ. ಫೆಬ್ರವರಿ 21 ರಂದು ದೆಹಲಿಯತ್ತ ಸಾಗಲಾಗುವುದು ಎಂದು ತಿಳಿಸಿದರು.

ಎಣ್ಣೆಕಾಳಿಗೆ ಎಂಎಸ್​ಪಿ ನೀಡಿ: ಕೇಂದ್ರ ಸರ್ಕಾರ 1.75 ಕೋಟಿ ರೂಪಾಯಿ ಮೊತ್ತದ ತಾಳೆ ಎಣ್ಣೆಯನ್ನು ಹೊರಗಿನಿಂದ ಆಮದು ಮಾಡಿಕೊಳ್ಳುತ್ತಿದೆ. ಇದು ಉತ್ತಮ ಗುಣಮಟ್ಟದ್ದಾಗಿಲ್ಲ. ಆಮದಿಗೆ ನೀಡುವ ಹಣವನ್ನು ಎಣ್ಣೆ ಬೀಜ ಬೆಳೆಯುವ ರೈತರಿಗೆ ನೀಡಬೇಕು. ಇದನ್ನು ಸರ್ಕಾರ ಒಪ್ಪುತ್ತಿಲ್ಲ. ಹೀಗಾಗಿ ಸರ್ಕಾರದ ಎಂಎಸ್​​ಪಿಗೆ ಒಪ್ಪಿಗೆ ಇಲ್ಲ. ಎಂಎಸ್​ಪಿಗೆ ಕಾನೂನು ಮಾನ್ಯತೆ ನೀಡದಿದ್ದರೆ, ರೈತರ ಸುಲಿಗೆ ಮುಂದುವರಿಯಲಿದೆ. ಇದನ್ನು ಆಗಲು ಬಿಡುವುದಿಲ್ಲ ಎಂದರು.

ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಣ್ ಸಿಂಗ್ ಪಂಧೇರ್ ಮಾತನಾಡಿ, ಫೆಬ್ರವರಿ 21 ರಂದು ರೈತರು 'ದಿಲ್ಲಿ ಚಲೋ' ಮೆರವಣಿಗೆಯೊಂದಿಗೆ ಮುಂದುವರಿಯಲಿದ್ದಾರೆ. ಸರ್ಕಾರ ಪ್ರಸ್ತಾಪಿಸಿದ ಎಂಎಸ್​ಪಿಯ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಭಾನುವಾರದ ಸಭೆಯ ನಂತರ ಮಾತನಾಡಿದ್ದ ರೈತ ಮುಖಂಡರು, ಬೇಳೆಕಾಳುಗಳು, ಮೆಕ್ಕೆಜೋಳ ಮತ್ತು ಹತ್ತಿಗೆ ಎಂಎಸ್​ಪಿ ನೀಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ. ಈ ಬಗ್ಗೆ ಎರಡು ಸರ್ಕಾರಿ ಸಂಸ್ಥೆಗಳು ಮೇಲ್ವಿಚಾರಣೆ ಮಾಡುತ್ತವೆ ಎಂದಿದ್ದರು.

ಪಂಜಾಬ್​ ಮತ್ತು ಹರಿಯಾಣದ ಗಡಿಗಳಲ್ಲಿ ಎಂಎಸ್‌ಪಿಗೆ ಕಾನೂನು ಖಾತರಿ ಮತ್ತು ಸಾಲ ಮನ್ನಾ ಕುರಿತು ಸುಗ್ರೀವಾಜ್ಞೆ ಸೇರಿದಂತೆ ವಿವಿಧ ಮಹತ್ತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಕೇಂದ್ರ ಸರ್ಕಾರದ ಸಚಿವರು, ಫೆಬ್ರವರಿ 8, 12 ಮತ್ತು 15 ರಂದು ಮೂರು ಬಾರಿ ಸಭೆ ನಡೆಸಿ ಮಾತುಕತೆ ನಡೆಸಿದ್ದು, ಯಾವುದೇ ಫಲಪ್ರದವಾಗಿಲ್ಲ.

ಇದನ್ನೂ ಓದಿ: ಫೆ.21ರಂದು ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಮುಂದುವರಿಸುತ್ತೇವೆ: ಕೇಂದ್ರ ಸಚಿವರ ಭೇಟಿ ಬಳಿಕ ರೈತ ಮುಖಂಡರ ಹೇಳಿಕೆ

ಅಂಬಾಲಾ (ಹರಿಯಾಣ): ಕನಿಷ್ಠ ಬೆಂಬಲ ಬೆಲೆ (ಎಂಎಸ್​ಪಿ) ಕುರಿತ ಸರ್ಕಾರದ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ. ಇದರಿಂದ ರೈತರು ಮತ್ತು ಕೇಂದ್ರ ಸರ್ಕಾರದ ಮಧ್ಯೆ ನಡೆದ ನಾಲ್ಕನೇ ಸುತ್ತಿನ ಮಾತುಕತೆಯೂ ಯಾವುದೇ ಫಲಿತಾಂಶವಿಲ್ಲದೇ ಅಂತ್ಯವಾಗಿದೆ. ಫೆಬ್ರವರಿ 21 ರಂದು ದೆಹಲಿಯತ್ತ ಮೆರವಣಿಗೆ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.

ಕೇಂದ್ರ ಸರ್ಕಾರದ ಸಚಿವರು ಮತ್ತು ರೈತ ಮುಖಂಡರು ಭಾನುವಾರ ಸಭೆ ನಡೆಸಿ ಎಂಎಸ್​​ಪಿ ಬಗ್ಗೆ ಚರ್ಚಿಸಿದ್ದರು. ಸರ್ಕಾರ ಬೆಳೆಗಳಿಗೆ ನೀಡುವ ದರ ಮತ್ತು ಯಾವ ಬೆಳೆ ಖರೀದಿ ಮಾಡಲಾಗುತ್ತದೆ ಎಂಬ ಬಗ್ಗೆ ರೈತರಿಗೆ ತಿಳಿಸಲಾಗಿತ್ತು. ಇದು ರೈತ ನಾಯಕರಲ್ಲಿ ಚರ್ಚೆಯ ನಂತರ ಸರ್ಕಾರದ ಪ್ರಸ್ತಾವನೆಯನ್ನು ಒಪ್ಪಲಾಗಲ್ಲ. ನಮ್ಮ ಬೇಡಿಕೆಗೆ ಅನುಗುಣವಾಗಿ ಪ್ರಸ್ತಾವ ಬಂದಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, ಚರ್ಚೆಯ ನಂತರ ರೈತ ಸಂಘಟನೆಗಳು ಸರ್ಕಾರದ ಎಂಎಸ್​ಪಿ ಪ್ರಸ್ತಾವನೆಯನ್ನು ತಿರಸ್ಕರಿಸಿವೆ. ಸರ್ಕಾರದ ಭರವಸೆಯು ರೈತರಿಗೆ ಅನುಕೂಲಕರವಾಗಿಲ್ಲ. ಹೀಗಾಗಿ ನಾವಿದನ್ನು ಒಪ್ಪಲ್ಲ. ನಮ್ಮ ಹೋರಾಟ ಮುಂದುವರಿಯಲಿದೆ. ಫೆಬ್ರವರಿ 21 ರಂದು ದೆಹಲಿಯತ್ತ ಸಾಗಲಾಗುವುದು ಎಂದು ತಿಳಿಸಿದರು.

ಎಣ್ಣೆಕಾಳಿಗೆ ಎಂಎಸ್​ಪಿ ನೀಡಿ: ಕೇಂದ್ರ ಸರ್ಕಾರ 1.75 ಕೋಟಿ ರೂಪಾಯಿ ಮೊತ್ತದ ತಾಳೆ ಎಣ್ಣೆಯನ್ನು ಹೊರಗಿನಿಂದ ಆಮದು ಮಾಡಿಕೊಳ್ಳುತ್ತಿದೆ. ಇದು ಉತ್ತಮ ಗುಣಮಟ್ಟದ್ದಾಗಿಲ್ಲ. ಆಮದಿಗೆ ನೀಡುವ ಹಣವನ್ನು ಎಣ್ಣೆ ಬೀಜ ಬೆಳೆಯುವ ರೈತರಿಗೆ ನೀಡಬೇಕು. ಇದನ್ನು ಸರ್ಕಾರ ಒಪ್ಪುತ್ತಿಲ್ಲ. ಹೀಗಾಗಿ ಸರ್ಕಾರದ ಎಂಎಸ್​​ಪಿಗೆ ಒಪ್ಪಿಗೆ ಇಲ್ಲ. ಎಂಎಸ್​ಪಿಗೆ ಕಾನೂನು ಮಾನ್ಯತೆ ನೀಡದಿದ್ದರೆ, ರೈತರ ಸುಲಿಗೆ ಮುಂದುವರಿಯಲಿದೆ. ಇದನ್ನು ಆಗಲು ಬಿಡುವುದಿಲ್ಲ ಎಂದರು.

ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಣ್ ಸಿಂಗ್ ಪಂಧೇರ್ ಮಾತನಾಡಿ, ಫೆಬ್ರವರಿ 21 ರಂದು ರೈತರು 'ದಿಲ್ಲಿ ಚಲೋ' ಮೆರವಣಿಗೆಯೊಂದಿಗೆ ಮುಂದುವರಿಯಲಿದ್ದಾರೆ. ಸರ್ಕಾರ ಪ್ರಸ್ತಾಪಿಸಿದ ಎಂಎಸ್​ಪಿಯ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಭಾನುವಾರದ ಸಭೆಯ ನಂತರ ಮಾತನಾಡಿದ್ದ ರೈತ ಮುಖಂಡರು, ಬೇಳೆಕಾಳುಗಳು, ಮೆಕ್ಕೆಜೋಳ ಮತ್ತು ಹತ್ತಿಗೆ ಎಂಎಸ್​ಪಿ ನೀಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ. ಈ ಬಗ್ಗೆ ಎರಡು ಸರ್ಕಾರಿ ಸಂಸ್ಥೆಗಳು ಮೇಲ್ವಿಚಾರಣೆ ಮಾಡುತ್ತವೆ ಎಂದಿದ್ದರು.

ಪಂಜಾಬ್​ ಮತ್ತು ಹರಿಯಾಣದ ಗಡಿಗಳಲ್ಲಿ ಎಂಎಸ್‌ಪಿಗೆ ಕಾನೂನು ಖಾತರಿ ಮತ್ತು ಸಾಲ ಮನ್ನಾ ಕುರಿತು ಸುಗ್ರೀವಾಜ್ಞೆ ಸೇರಿದಂತೆ ವಿವಿಧ ಮಹತ್ತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಕೇಂದ್ರ ಸರ್ಕಾರದ ಸಚಿವರು, ಫೆಬ್ರವರಿ 8, 12 ಮತ್ತು 15 ರಂದು ಮೂರು ಬಾರಿ ಸಭೆ ನಡೆಸಿ ಮಾತುಕತೆ ನಡೆಸಿದ್ದು, ಯಾವುದೇ ಫಲಪ್ರದವಾಗಿಲ್ಲ.

ಇದನ್ನೂ ಓದಿ: ಫೆ.21ರಂದು ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಮುಂದುವರಿಸುತ್ತೇವೆ: ಕೇಂದ್ರ ಸಚಿವರ ಭೇಟಿ ಬಳಿಕ ರೈತ ಮುಖಂಡರ ಹೇಳಿಕೆ

Last Updated : Feb 20, 2024, 7:40 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.