ETV Bharat / bharat

ಸಿಎಎ ಕಾಯ್ದೆಯಡಿ 14 ವಲಸಿಗರಿಗೆ ಭಾರತೀಯ ನಾಗರಿಕತ್ವ ನೀಡಿದ ಕೇಂದ್ರ ಸರ್ಕಾರ - citizenship issued under CAA

author img

By ETV Bharat Karnataka Team

Published : May 15, 2024, 8:23 PM IST

ಮಹತ್ವದ ವಿದ್ಯಮಾನವೊಂದರಲ್ಲಿ ಸಿಎಎ ಕಾಯ್ದೆಯಡಿ 14 ಜನರಿಗೆ ಭಾರತೀಯ ನಾಗರಿಕತ್ವವನ್ನು ಕೇಂದ್ರ ಸರ್ಕಾರ ನೀಡಿದೆ. ಈ ಮೂಲಕ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಸಿಎಎ
ಸಿಎಎ (Source: File Photo (ETV Bharat))

ನವದೆಹಲಿ: ಭಾರಿ ಆಕ್ಷೇಪದ ಮಧ್ಯೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಡಿ (ಸಿಎಎ) ಮೊದಲ ಕಂತಿನಲ್ಲಿ 14 ಜನರಿಗೆ ಭಾರತೀಯ ನಾಗರಿಕತ್ವವನ್ನು ನೀಡಲಾಗಿದೆ. ಎಲ್ಲರಿಗೂ ಪೌರತ್ವ ಪ್ರಮಾಣಪತ್ರವನ್ನು ಬುಧವಾರ ವಿತರಿಸಲಾಯಿತು.

ಈ ಮೂಲಕ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆ ನೀಡುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಅಧಿಕೃತ ಚಾಲನೆ ನೀಡಿದೆ.

ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು, 14 ಜನರು ಆನ್​ಲೈನ್​ ಮೂಲಕ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನಂತರ ಭಾರತೀಯ ಪೌರತ್ವ ನೀಡಿದ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು.

ಈ ಬಗ್ಗೆ ಮಾಹಿತಿ ನೀಡಿರುವ ಇಲಾಖೆ ವಕ್ತಾರರು, "ಪೌರತ್ವ ತಿದ್ದುಪಡಿ ಕಾಯ್ದೆಯಡಿ (ಸಿಎಎ) ನಾಗರಿಕತ್ವ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಗೃಹ ಕಾರ್ಯದರ್ಶಿಗಳು ಅರ್ಜಿದಾರರಿಗೆ ಅಧಿಕೃತ ಪ್ರಮಾಣಪತ್ರ ನೀಡಿದ್ದಾರೆ. ಜಿಲ್ಲಾ ಮಟ್ಟದ ಸಮಿತಿಗಳು (DLCs) ಹಿರಿಯ ಅಂಚೆ ಅಧೀಕ್ಷಕರು/ಪೋಸ್ಟ್ ಅಧೀಕ್ಷಕರು ಗೊತ್ತುಪಡಿಸಿದ ಅಧಿಕಾರಿಗಳ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆಯ ನಂತರ ಅರ್ಜಿಗಳನ್ನು ಅಖೈರು ಮಾಡಲಾಗಿದೆ" ಎಂದು ತಿಳಿಸಿದರು.

ಏನಿದು ಸಿಎಎ?: ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರು 2014 ರ ಡಿಸೆಂಬರ್ 31ಕ್ಕೂ ಮೊದಲು ಭಾರತಕ್ಕೆ ಬಂದಿದ್ದಲ್ಲಿ ಅವರಿಗೆ ಭಾರತದ ನಾಗರಿಕತ್ವ ನೀಡಲು ಕೇಂದ್ರ ಸರ್ಕಾರ ಸಿಎಎ ಕಾಯ್ದೆ ಜಾರಿಗೆ ತಂದಿದೆ. 2019 ರಲ್ಲಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಇದರಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಕಾಯ್ದೆಯಡಿ ಬರುತ್ತಾರೆ. ಮುಸ್ಲಿಮರಿಗೆ ಈ ಕಾಯ್ದೆಯಡಿ ಅವಕಾಶವಿಲ್ಲ.

2019 ರಲ್ಲಿ ಜಾರಿಯಾದರೂ, ಅದರ ನಿಯಮಗಳನ್ನು ರೂಪಿಸಲು ಸರ್ಕಾರ 4 ವರ್ಷ ಸಮಯಾವಕಾಶ ತೆಗೆದುಕೊಂಡಿತು. 2024 ರ ಮಾರ್ಚ್ 11 ರಂದು ಅಧಿಕೃತ ನಿಯಮಾವಳಿಗಳನ್ನು ರೂಪಿಸಿ ಆದೇಶ ಹೊರಡಿಸಿತು.

ಮುಸ್ಲಿಮೇತರ ಅರ್ಜಿದಾರರು ನಿಗದಿಪಡಿಸಿದ ಪೋರ್ಟಲ್​ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಇವುಗಳನ್ನು ಜಿಲ್ಲಾ ಮಟ್ಟದ ಸಮಿತಿ (ಡಿಎಲ್​ಸಿ), ರಾಜ್ಯ ಮಟ್ಟದ ಸಶಕ್ತ ಸಮಿತಿಯಿಂದ (ಇಸಿ) ಪರಿಶೀಲನೆ ಮಾಡಿದ ಬಳಿಕ ಪೌರತ್ವ ನೀಡಬೇಕೆ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ.

ಈ ನಿಯಮಗಳ ಅನುಸಾರವಾಗಿ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯದವರು ಮಾತ್ರ ಭಾರತದ ನಾಗರಿಕತ್ವಕ್ಕಾಗಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: ಸಿಎಎ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹೆಚ್ಚಿವೆ: ಅಡ್ವೊಕೇಟ್ ಗೋವಿಂದ್ ಚಂದ್ರ ಪ್ರಮಾಣಿಕ್

ನವದೆಹಲಿ: ಭಾರಿ ಆಕ್ಷೇಪದ ಮಧ್ಯೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಡಿ (ಸಿಎಎ) ಮೊದಲ ಕಂತಿನಲ್ಲಿ 14 ಜನರಿಗೆ ಭಾರತೀಯ ನಾಗರಿಕತ್ವವನ್ನು ನೀಡಲಾಗಿದೆ. ಎಲ್ಲರಿಗೂ ಪೌರತ್ವ ಪ್ರಮಾಣಪತ್ರವನ್ನು ಬುಧವಾರ ವಿತರಿಸಲಾಯಿತು.

ಈ ಮೂಲಕ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆ ನೀಡುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಅಧಿಕೃತ ಚಾಲನೆ ನೀಡಿದೆ.

ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು, 14 ಜನರು ಆನ್​ಲೈನ್​ ಮೂಲಕ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನಂತರ ಭಾರತೀಯ ಪೌರತ್ವ ನೀಡಿದ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು.

ಈ ಬಗ್ಗೆ ಮಾಹಿತಿ ನೀಡಿರುವ ಇಲಾಖೆ ವಕ್ತಾರರು, "ಪೌರತ್ವ ತಿದ್ದುಪಡಿ ಕಾಯ್ದೆಯಡಿ (ಸಿಎಎ) ನಾಗರಿಕತ್ವ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಗೃಹ ಕಾರ್ಯದರ್ಶಿಗಳು ಅರ್ಜಿದಾರರಿಗೆ ಅಧಿಕೃತ ಪ್ರಮಾಣಪತ್ರ ನೀಡಿದ್ದಾರೆ. ಜಿಲ್ಲಾ ಮಟ್ಟದ ಸಮಿತಿಗಳು (DLCs) ಹಿರಿಯ ಅಂಚೆ ಅಧೀಕ್ಷಕರು/ಪೋಸ್ಟ್ ಅಧೀಕ್ಷಕರು ಗೊತ್ತುಪಡಿಸಿದ ಅಧಿಕಾರಿಗಳ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆಯ ನಂತರ ಅರ್ಜಿಗಳನ್ನು ಅಖೈರು ಮಾಡಲಾಗಿದೆ" ಎಂದು ತಿಳಿಸಿದರು.

ಏನಿದು ಸಿಎಎ?: ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರು 2014 ರ ಡಿಸೆಂಬರ್ 31ಕ್ಕೂ ಮೊದಲು ಭಾರತಕ್ಕೆ ಬಂದಿದ್ದಲ್ಲಿ ಅವರಿಗೆ ಭಾರತದ ನಾಗರಿಕತ್ವ ನೀಡಲು ಕೇಂದ್ರ ಸರ್ಕಾರ ಸಿಎಎ ಕಾಯ್ದೆ ಜಾರಿಗೆ ತಂದಿದೆ. 2019 ರಲ್ಲಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಇದರಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಕಾಯ್ದೆಯಡಿ ಬರುತ್ತಾರೆ. ಮುಸ್ಲಿಮರಿಗೆ ಈ ಕಾಯ್ದೆಯಡಿ ಅವಕಾಶವಿಲ್ಲ.

2019 ರಲ್ಲಿ ಜಾರಿಯಾದರೂ, ಅದರ ನಿಯಮಗಳನ್ನು ರೂಪಿಸಲು ಸರ್ಕಾರ 4 ವರ್ಷ ಸಮಯಾವಕಾಶ ತೆಗೆದುಕೊಂಡಿತು. 2024 ರ ಮಾರ್ಚ್ 11 ರಂದು ಅಧಿಕೃತ ನಿಯಮಾವಳಿಗಳನ್ನು ರೂಪಿಸಿ ಆದೇಶ ಹೊರಡಿಸಿತು.

ಮುಸ್ಲಿಮೇತರ ಅರ್ಜಿದಾರರು ನಿಗದಿಪಡಿಸಿದ ಪೋರ್ಟಲ್​ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಇವುಗಳನ್ನು ಜಿಲ್ಲಾ ಮಟ್ಟದ ಸಮಿತಿ (ಡಿಎಲ್​ಸಿ), ರಾಜ್ಯ ಮಟ್ಟದ ಸಶಕ್ತ ಸಮಿತಿಯಿಂದ (ಇಸಿ) ಪರಿಶೀಲನೆ ಮಾಡಿದ ಬಳಿಕ ಪೌರತ್ವ ನೀಡಬೇಕೆ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ.

ಈ ನಿಯಮಗಳ ಅನುಸಾರವಾಗಿ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯದವರು ಮಾತ್ರ ಭಾರತದ ನಾಗರಿಕತ್ವಕ್ಕಾಗಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: ಸಿಎಎ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹೆಚ್ಚಿವೆ: ಅಡ್ವೊಕೇಟ್ ಗೋವಿಂದ್ ಚಂದ್ರ ಪ್ರಮಾಣಿಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.