ETV Bharat / bharat

ಇನ್ನಷ್ಟು ಕೆಲಸ ಮಾಡಲು ದೊಡ್ಡ ವೇದಿಕೆ ಸಿಗುತ್ತಿರುವುದಕ್ಕೆ ಸಂತಸವಾಗ್ತಿದೆ: ಸುಧಾ ಮೂರ್ತಿ

author img

By ANI

Published : Mar 8, 2024, 3:51 PM IST

Updated : Mar 8, 2024, 7:18 PM IST

ಈ ನಾಮನಿರ್ದೇಶನ ತಮಗೆ ಇನ್ನಷ್ಟು ಕೆಲಸ ಮಾಡುವ ಜವಾಬ್ದಾರಿ ನೀಡಿದೆ ಎಂದು ಸುಧಾಮೂರ್ತಿ ಹೇಳಿದ್ದಾರೆ.

Happy that I'm getting bigger platform to work": Sudha Murty on Rajya Sabha nomination
ಇನ್ನಷ್ಟು ಕೆಲಸ ಮಾಡಲು ದೊಡ್ಡ ವೇದಿಕೆ ಸಿಗುತ್ತಿರುವುದಕ್ಕೆ ಸಂತಸವಾಗ್ತಿದೆ: ಸುಧಾ ಮೂರ್ತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಟ್ವೀಟ್​ ಮಾಡಿ ಮಾಹಿತಿ ಹಂಚಿಕೊಂಡಿದ್ದರು. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, ಬಡವರಿಗಾಗಿ ಕೆಲಸ ಮಾಡಲು ದೊಡ್ಡ ವೇದಿಕೆ ಪಡೆಯುತ್ತಿರುವುದಕ್ಕೆ ಸಂತಸವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ತಮ್ಮ ಕೆಲಸಕ್ಕೂ ಮತ್ತು ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಕೆಲಸವನ್ನು ಗುರುತಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಸುಧಾ ಮೂರ್ತಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ರಾಷ್ಟ್ರಪತಿಗಳು ತಮ್ಮನ್ನು ಗುರುತಿಸಿರುವುದು ತಮಗೆ ಸಂತಸ ತಂದಿದೆ. ಇನ್ನು ಈ ಆಯ್ಕೆ ನನಗೆ ಹೆಚ್ಚಿನ ಜವಾಬ್ದಾರಿ ನೀಡಿದೆ ಎಂದು ನಾನು ಭಾವಿಸುತ್ತೇನೆ. ಮತ್ತು ಅವರ ಆಯ್ಕೆಯನ್ನು ಸಮರ್ಥಿಸುವ ನಿಟ್ಟಿನಲ್ಲಿ ನನ್ನ ಮಟ್ಟದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡುತ್ತೇನೆ. ಇನ್ನು ವೈಯಕ್ತಿಕವಾಗಿ ಬಡವರಿಗಾಗಿ ಕೆಲಸ ಮಾಡಲು ನಾನು ದೊಡ್ಡ ವೇದಿಕೆಯನ್ನು ಪಡೆಯುತ್ತಿದ್ದೇನೆ ಎಂಬ ಸಂತಸ ಕೂಡಾ ಇದೆ ಎಂದು ಸುದ್ದಿ ಮಾಧ್ಯಮಕ್ಕೆ ಸುಧಾಮೂರ್ತಿ ತಮಗೆ ಆದ ಸಂತಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಎದೆಯ ಮೇಲೆ ಸುಧಾ ಮೂರ್ತಿ ಅವರ ಭಾವಚಿತ್ರ ಹಾಕಿಸಿಕೊಂಡ ಅಭಿಮಾನಿ

ಇದು ರಾಜಕೀಯ ಕ್ಷೇತ್ರಕ್ಕೆ ಒಂದು ಹೆಜ್ಜೆ ಎಂದು ಪರಿಗಣಿಸಬಹುದೇ ಎಂದು ಮಾಧ್ಯಮದವರು ಕೇಳಿದಾಗ, ತನ್ನನ್ನು ತಾವು ರಾಜಕಾರಣಿ ಎಂದು ಪರಿಗಣಿಸುವುದಿಲ್ಲ ಹಾಗೂ ರಾಜಕಾರಣಿ ಎಂದು ಪರಿಗಣಿಸಬಹುದು ಎಂದು ನಾನು ಭಾವಿಸುವುದಿಲ್ಲ. ನಾನು ನಾಮ ನಿರ್ದೇಶಿತ ರಾಜ್ಯಸಭಾ ಸದಸ್ಯೆ ಮಾತ್ರ ಎಂದರು. ನನ್ನ ಅಳಿಯ ಇಂಗ್ಲೆಂಡ್​ ಪ್ರಧಾನಿಯಾಗಿದ್ದಾರೆ, ಅವರ ರಾಜಕೀಯ ಬೇರೆ, ಇಲ್ಲಿ ನನ್ನ ಕೆಲಸವೂ ವಿಭಿನ್ನವಾಗಿದೆ. ನಾನು ಈಗ ಸರ್ಕಾರಿ ಉದ್ಯೋಗಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಮೇಲ್ಮನೆಗೆ ನಾಮ ನಿರ್ದೇಶನಗೊಂಡಿರುವ ಬಗ್ಗೆ ಪ್ರಧಾನಿ ಟ್ವೀಟ್​ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮೂರ್ತಿ, ಅವರ ಈ ಮೆಚ್ಚುಗೆ ಪ್ರಧಾನಿ ಎಷ್ಟು ಒಳ್ಳೆಯವರು ಎಂಬುದನ್ನು ತೋರಿಸುತ್ತದೆ ಮತ್ತು ಅವರು ನನ್ನ ಕೆಲಸವನ್ನು ಮೆಚ್ಚಿದ್ದಾರೆ. ನಾನು ಪ್ರಧಾನ ಮಂತ್ರಿಗಳಿಗೆ ತುಂಬಾ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

ಇದನ್ನೂ ಓದಿ: ಶ್ವಾನದ ಕೈಯಲ್ಲಿ ಪುಸ್ತಕ ಬಿಡುಗಡೆ ಮಾಡಿಸಿದ ಇನ್ಫೋಸಿಸ್ ಸುಧಾ ಮೂರ್ತಿ

ಭಾರತದ ರಾಷ್ಟ್ರಪತಿಗಳು ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಗಳ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ 'ನಾರಿ ಶಕ್ತಿ'ಗೆ ಪ್ರಬಲ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ ಆಗಿದೆ‘‘ ಎಂದು ಪ್ರಧಾನಿ ತಮ್ಮ ಟ್ವೀಟ್​ನಲ್ಲಿ ಅಭಿನಂದಿಸಿದ್ದರು.

ಇದನ್ನು ಓದಿ: ಕನ್ನಡತಿ ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಟ್ವೀಟ್​ ಮಾಡಿ ಮಾಹಿತಿ ಹಂಚಿಕೊಂಡಿದ್ದರು. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, ಬಡವರಿಗಾಗಿ ಕೆಲಸ ಮಾಡಲು ದೊಡ್ಡ ವೇದಿಕೆ ಪಡೆಯುತ್ತಿರುವುದಕ್ಕೆ ಸಂತಸವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ತಮ್ಮ ಕೆಲಸಕ್ಕೂ ಮತ್ತು ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಕೆಲಸವನ್ನು ಗುರುತಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಸುಧಾ ಮೂರ್ತಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ರಾಷ್ಟ್ರಪತಿಗಳು ತಮ್ಮನ್ನು ಗುರುತಿಸಿರುವುದು ತಮಗೆ ಸಂತಸ ತಂದಿದೆ. ಇನ್ನು ಈ ಆಯ್ಕೆ ನನಗೆ ಹೆಚ್ಚಿನ ಜವಾಬ್ದಾರಿ ನೀಡಿದೆ ಎಂದು ನಾನು ಭಾವಿಸುತ್ತೇನೆ. ಮತ್ತು ಅವರ ಆಯ್ಕೆಯನ್ನು ಸಮರ್ಥಿಸುವ ನಿಟ್ಟಿನಲ್ಲಿ ನನ್ನ ಮಟ್ಟದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡುತ್ತೇನೆ. ಇನ್ನು ವೈಯಕ್ತಿಕವಾಗಿ ಬಡವರಿಗಾಗಿ ಕೆಲಸ ಮಾಡಲು ನಾನು ದೊಡ್ಡ ವೇದಿಕೆಯನ್ನು ಪಡೆಯುತ್ತಿದ್ದೇನೆ ಎಂಬ ಸಂತಸ ಕೂಡಾ ಇದೆ ಎಂದು ಸುದ್ದಿ ಮಾಧ್ಯಮಕ್ಕೆ ಸುಧಾಮೂರ್ತಿ ತಮಗೆ ಆದ ಸಂತಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಎದೆಯ ಮೇಲೆ ಸುಧಾ ಮೂರ್ತಿ ಅವರ ಭಾವಚಿತ್ರ ಹಾಕಿಸಿಕೊಂಡ ಅಭಿಮಾನಿ

ಇದು ರಾಜಕೀಯ ಕ್ಷೇತ್ರಕ್ಕೆ ಒಂದು ಹೆಜ್ಜೆ ಎಂದು ಪರಿಗಣಿಸಬಹುದೇ ಎಂದು ಮಾಧ್ಯಮದವರು ಕೇಳಿದಾಗ, ತನ್ನನ್ನು ತಾವು ರಾಜಕಾರಣಿ ಎಂದು ಪರಿಗಣಿಸುವುದಿಲ್ಲ ಹಾಗೂ ರಾಜಕಾರಣಿ ಎಂದು ಪರಿಗಣಿಸಬಹುದು ಎಂದು ನಾನು ಭಾವಿಸುವುದಿಲ್ಲ. ನಾನು ನಾಮ ನಿರ್ದೇಶಿತ ರಾಜ್ಯಸಭಾ ಸದಸ್ಯೆ ಮಾತ್ರ ಎಂದರು. ನನ್ನ ಅಳಿಯ ಇಂಗ್ಲೆಂಡ್​ ಪ್ರಧಾನಿಯಾಗಿದ್ದಾರೆ, ಅವರ ರಾಜಕೀಯ ಬೇರೆ, ಇಲ್ಲಿ ನನ್ನ ಕೆಲಸವೂ ವಿಭಿನ್ನವಾಗಿದೆ. ನಾನು ಈಗ ಸರ್ಕಾರಿ ಉದ್ಯೋಗಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಮೇಲ್ಮನೆಗೆ ನಾಮ ನಿರ್ದೇಶನಗೊಂಡಿರುವ ಬಗ್ಗೆ ಪ್ರಧಾನಿ ಟ್ವೀಟ್​ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮೂರ್ತಿ, ಅವರ ಈ ಮೆಚ್ಚುಗೆ ಪ್ರಧಾನಿ ಎಷ್ಟು ಒಳ್ಳೆಯವರು ಎಂಬುದನ್ನು ತೋರಿಸುತ್ತದೆ ಮತ್ತು ಅವರು ನನ್ನ ಕೆಲಸವನ್ನು ಮೆಚ್ಚಿದ್ದಾರೆ. ನಾನು ಪ್ರಧಾನ ಮಂತ್ರಿಗಳಿಗೆ ತುಂಬಾ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

ಇದನ್ನೂ ಓದಿ: ಶ್ವಾನದ ಕೈಯಲ್ಲಿ ಪುಸ್ತಕ ಬಿಡುಗಡೆ ಮಾಡಿಸಿದ ಇನ್ಫೋಸಿಸ್ ಸುಧಾ ಮೂರ್ತಿ

ಭಾರತದ ರಾಷ್ಟ್ರಪತಿಗಳು ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಗಳ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ 'ನಾರಿ ಶಕ್ತಿ'ಗೆ ಪ್ರಬಲ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ ಆಗಿದೆ‘‘ ಎಂದು ಪ್ರಧಾನಿ ತಮ್ಮ ಟ್ವೀಟ್​ನಲ್ಲಿ ಅಭಿನಂದಿಸಿದ್ದರು.

ಇದನ್ನು ಓದಿ: ಕನ್ನಡತಿ ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

Last Updated : Mar 8, 2024, 7:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.