ETV Bharat / bharat

ಹತ್ರಾಸ್ ಕಾಲ್ತುಳಿತ ಪ್ರಕರಣ: ಸ್ವಯಂಘೋಷಿತ ದೇವಮಾನವ ಭೋಲೆ ಬಾಬಾ ಮೊದಲ ಪ್ರತಿಕ್ರಿಯೆ - Hathras stampede case

Hathras stampede case: ಜುಲೈ 2ರಂದು ನಡೆದ ಹತ್ರಾಸ್ ಕಾಲ್ತುಳಿತ ಘಟನೆಯ ನಂತರ ನಾವು ತುಂಬಾ ನೊಂದಿದ್ದೇನೆ ಎಂದು ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ 'ಭೋಲೆ ಬಾಬಾ' ಹೇಳಿದ್ದಾರೆ.

author img

By ETV Bharat Karnataka Team

Published : Jul 6, 2024, 12:24 PM IST

Bhole Baba first reaction  Hathras stampede case  Hathras accident  Bhole Baba
ಹತ್ರಾಸ್ ಅಪಘಾತದ ನಂತರ ಯಂಘೋಷಿತ ದೇವಮಾನವ ಭೋಲೆ ಬಾಬಾ ಮೊದಲ ಪ್ರತಿಕ್ರಿಯೆ (ANI)

ಮೈನ್‌ಪುರಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸಂಘಟನಾ ಸಮಿತಿಯ ಆರು ಸದಸ್ಯರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಈ ಘಟನೆಯಲ್ಲಿ ಒಟ್ಟು 123 ಮಂದಿ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಇದೀಗ ಈ ಅಪಘಾತದ ನಂತರ ಮೊದಲ ಬಾರಿಗೆ ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ 'ಭೋಲೆ ಬಾಬಾ' ವಿಡಿಯೋ ಮೂಲಕ ಮೊದಲ ಹೇಳಿಕೆ ನೀಡಿದ್ದಾರೆ.

"ಜುಲೈ 2ರ ಘಟನೆಯ ನಂತರ ನಾವು ತೀವ್ರವಾಗಿ ನೊಂದಿದ್ದೇನೆ. ಈ ದುಃಖದ ಸಮಯ ಜಯಿಸಲು ದೇವರು ನಮಗೆ ಶಕ್ತಿ ನೀಡಲಿ. ಎಲ್ಲರೂ ಸರ್ಕಾರ ಮತ್ತು ಆಡಳಿತದಲ್ಲಿ ನಂಬಿಕೆ ಇಡಬೇಕು. ಘಟನೆಗೆ ಕಾರಣರಾದ ಕಿಡಿಗೇಡಿಗಳಾದವರನ್ನು ಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ. ದುಃಖಿತ ಕುಟುಂಬಗಳು ಮತ್ತು ಗಾಯಾಳುಗಳ ಜೊತೆಗೆ ನಿಂತು ಅವರ ಜೀವನದುದ್ದಕ್ಕೂ ಅವರಿಗೆ ಸಹಾಯ ಮಾಡುವಂತೆ ನನ್ನ ವಕೀಲ ಎ.ಪಿ.ಸಿಂಗ್ ಮೂಲಕ ಸಮಿತಿಯ ಸದಸ್ಯರನ್ನು ವಿನಂತಿಸಿದ್ದೇನೆ" ಎಂದು ಈ ವಿಡಿಯೋ ಹೇಳಿಕೆಯಲ್ಲಿ ಹತ್ರಾಸ್ ಕಾಲ್ತುಳಿತ ಘಟನೆಯ ಕುರಿತು ಭೋಲೆ ಬಾಬಾ ತಿಳಿಸಿದ್ದಾರೆ.

ಸಂಘಟನಾ ಸಮಿತಿಗೆ ಸಂಬಂಧಿಸಿದ ಆರೋಪಿಗಳ ಬಂಧನ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್ ಲಡೈಟ್, ಉಪೇಂದ್ರ ಸಿಂಗ್, ಮೇಘ್ ಸಿಂಗ್, ಮುಕೇಶ್ ಕುಮಾರ್, ಮಂಜು ಯಾದವ್ ಮತ್ತು ಮಂಜು ದೇವಿ ಎಂಬುವರನ್ನು ಬಂಧಿಸಲಾಗಿದೆ. ಈ ವ್ಯಕ್ತಿಗಳು ಸಂಘಟನಾ ಸಮಿತಿಯೊಂದಿಗೆ ಸಂಪರ್ಕ ಹೊಂದಿರುವುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ. ಈ ಹಿಂದೆಯೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಇವರ ಕೆಲಸವೆಂದರೆ ಪಂಡಲ್ ವ್ಯವಸ್ಥೆ ಮಾಡುವುದು ಮತ್ತು ಜನರನ್ನು ಒಟ್ಟುಗೂಡಿಸುವುದಾಗಿದೆ.

ಇನ್ನೊಂದೆಡೆ ಭೋಲೆ ಬಾಬಾ ಬಂಧನ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಐಜಿ ಶಲಭ್ ಮಾಥುರ್ ಅವರು, ''ಮುಂದೆ ಯಾರನ್ನು ಬಂಧಿಸಬೇಕು ಮತ್ತು ಯಾರನ್ನು ಬಂಧಿಸುವುದಿಲ್ಲ ಎಂಬುದು ತನಿಖೆಯ ಮೇಲೆ ಅವಲಂಬಿತವಾಗಿರುತ್ತದೆ. ಮುಂದಿನ ತನಿಖೆಯನ್ನು ಕ್ರಮಬದ್ಧವಾಗಿ ಮಾಡಲಾಗುತ್ತದೆ. ಮಂಗಳವಾರ ಹತ್ರಾಸ್‌ನಲ್ಲಿ ನಡೆದ ಭೋಲೆ ಬಾಬಾ ಅವರ ಕಾರ್ಯಕ್ರಮದ ವೇಳೆ ಉಂಟಾದ ಕಾಲ್ತುಳಿತದಲ್ಲಿ 123 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 30 ಜನ ಗಾಯಗೊಂಡಿದ್ದಾರೆ" ಎಂದರು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಅಲ್ಲದೆ, ಈ ಸಂಪೂರ್ಣ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸರ್ಕಾರವು ವಹಿಸಿಕೊಂಡಿದ್ದು, ಜೊತೆಗೆ ಸಮಿತಿಯನ್ನು ರಚಿಸಿದೆ.

ಇದನ್ನೂ ಓದಿ: ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ - Amarnath Yatra suspended

ಮೈನ್‌ಪುರಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸಂಘಟನಾ ಸಮಿತಿಯ ಆರು ಸದಸ್ಯರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಈ ಘಟನೆಯಲ್ಲಿ ಒಟ್ಟು 123 ಮಂದಿ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಇದೀಗ ಈ ಅಪಘಾತದ ನಂತರ ಮೊದಲ ಬಾರಿಗೆ ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ 'ಭೋಲೆ ಬಾಬಾ' ವಿಡಿಯೋ ಮೂಲಕ ಮೊದಲ ಹೇಳಿಕೆ ನೀಡಿದ್ದಾರೆ.

"ಜುಲೈ 2ರ ಘಟನೆಯ ನಂತರ ನಾವು ತೀವ್ರವಾಗಿ ನೊಂದಿದ್ದೇನೆ. ಈ ದುಃಖದ ಸಮಯ ಜಯಿಸಲು ದೇವರು ನಮಗೆ ಶಕ್ತಿ ನೀಡಲಿ. ಎಲ್ಲರೂ ಸರ್ಕಾರ ಮತ್ತು ಆಡಳಿತದಲ್ಲಿ ನಂಬಿಕೆ ಇಡಬೇಕು. ಘಟನೆಗೆ ಕಾರಣರಾದ ಕಿಡಿಗೇಡಿಗಳಾದವರನ್ನು ಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ. ದುಃಖಿತ ಕುಟುಂಬಗಳು ಮತ್ತು ಗಾಯಾಳುಗಳ ಜೊತೆಗೆ ನಿಂತು ಅವರ ಜೀವನದುದ್ದಕ್ಕೂ ಅವರಿಗೆ ಸಹಾಯ ಮಾಡುವಂತೆ ನನ್ನ ವಕೀಲ ಎ.ಪಿ.ಸಿಂಗ್ ಮೂಲಕ ಸಮಿತಿಯ ಸದಸ್ಯರನ್ನು ವಿನಂತಿಸಿದ್ದೇನೆ" ಎಂದು ಈ ವಿಡಿಯೋ ಹೇಳಿಕೆಯಲ್ಲಿ ಹತ್ರಾಸ್ ಕಾಲ್ತುಳಿತ ಘಟನೆಯ ಕುರಿತು ಭೋಲೆ ಬಾಬಾ ತಿಳಿಸಿದ್ದಾರೆ.

ಸಂಘಟನಾ ಸಮಿತಿಗೆ ಸಂಬಂಧಿಸಿದ ಆರೋಪಿಗಳ ಬಂಧನ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್ ಲಡೈಟ್, ಉಪೇಂದ್ರ ಸಿಂಗ್, ಮೇಘ್ ಸಿಂಗ್, ಮುಕೇಶ್ ಕುಮಾರ್, ಮಂಜು ಯಾದವ್ ಮತ್ತು ಮಂಜು ದೇವಿ ಎಂಬುವರನ್ನು ಬಂಧಿಸಲಾಗಿದೆ. ಈ ವ್ಯಕ್ತಿಗಳು ಸಂಘಟನಾ ಸಮಿತಿಯೊಂದಿಗೆ ಸಂಪರ್ಕ ಹೊಂದಿರುವುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ. ಈ ಹಿಂದೆಯೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಇವರ ಕೆಲಸವೆಂದರೆ ಪಂಡಲ್ ವ್ಯವಸ್ಥೆ ಮಾಡುವುದು ಮತ್ತು ಜನರನ್ನು ಒಟ್ಟುಗೂಡಿಸುವುದಾಗಿದೆ.

ಇನ್ನೊಂದೆಡೆ ಭೋಲೆ ಬಾಬಾ ಬಂಧನ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಐಜಿ ಶಲಭ್ ಮಾಥುರ್ ಅವರು, ''ಮುಂದೆ ಯಾರನ್ನು ಬಂಧಿಸಬೇಕು ಮತ್ತು ಯಾರನ್ನು ಬಂಧಿಸುವುದಿಲ್ಲ ಎಂಬುದು ತನಿಖೆಯ ಮೇಲೆ ಅವಲಂಬಿತವಾಗಿರುತ್ತದೆ. ಮುಂದಿನ ತನಿಖೆಯನ್ನು ಕ್ರಮಬದ್ಧವಾಗಿ ಮಾಡಲಾಗುತ್ತದೆ. ಮಂಗಳವಾರ ಹತ್ರಾಸ್‌ನಲ್ಲಿ ನಡೆದ ಭೋಲೆ ಬಾಬಾ ಅವರ ಕಾರ್ಯಕ್ರಮದ ವೇಳೆ ಉಂಟಾದ ಕಾಲ್ತುಳಿತದಲ್ಲಿ 123 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 30 ಜನ ಗಾಯಗೊಂಡಿದ್ದಾರೆ" ಎಂದರು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಅಲ್ಲದೆ, ಈ ಸಂಪೂರ್ಣ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸರ್ಕಾರವು ವಹಿಸಿಕೊಂಡಿದ್ದು, ಜೊತೆಗೆ ಸಮಿತಿಯನ್ನು ರಚಿಸಿದೆ.

ಇದನ್ನೂ ಓದಿ: ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ - Amarnath Yatra suspended

ETV Bharat Logo

Copyright © 2024 Ushodaya Enterprises Pvt. Ltd., All Rights Reserved.