ಹತ್ರಾಸ್ (ಯು.ಪಿ): ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಧಾರ್ಮಿಕ ಸತ್ಸಂಗದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಈ ಪೈಕಿ ಹೆಚ್ಚಿನವರ ಗುರುತು ಪತ್ತೆ ಹಚ್ಚಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. ಈ ಧಾರ್ಮಿಕ ಸತ್ಸಂಗಕ್ಕೆ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳು ಹಾಗೂ ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು ಎಂದು ತಿಳಿದುಬಂದಿದೆ.
#WATCH | Uttar Pradesh: Visuals from the incident spot where a stampede took place yesterday, claiming the lives of 116 people in Hathras.
— ANI (@ANI) July 3, 2024
The incident happened during a Satsang conducted by 'Bhole Baba'. pic.twitter.com/7wfXYFRHIO
ಈ ಕುರಿತು ಅಲಿಘರ್ ವಲಯ ಐಜಿ ಶಲಭ್ ಮಾಥುರ್ ಪ್ರತಿಕ್ರಿಯಿಸಿ, "ಹತ್ರಾಸ್ನಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಇಟಾಹ್ ಮತ್ತು ಹತ್ರಾಸ್ ಪಕ್ಕದ ಜಿಲ್ಲೆಗಳಿಂದ ಹೆಚ್ಚಿನ ಜನರು ಸತ್ಸಂಗದಲ್ಲಿ ಪಾಲ್ಗೊಂಡಿದ್ದರು. ಈ ಪೈಕಿ ಹೆಚ್ಚಿನವರ ಗುರುತು ಪತ್ತೆ ಹಚ್ಚಲಾಗಿದ್ದು, ಉಳಿದವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ" ಎಂದು ತಿಳಿಸಿದರು.
ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಮಹಿಳೆಯರು: ಇದಕ್ಕೂ ಮೊದಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಪತ್ರಕರ್ತರಿಗೆ ಸಾವನ್ನಪ್ಪಿದವರ ಬಗ್ಗೆ ಮಾಹಿತಿ ನೀಡಿದರು. ಘಟನೆಯಲ್ಲಿ ಮೃತಪಟ್ಟವರ ಪೈಕಿ ಏಳು ಮಕ್ಕಳು, ಒಬ್ಬ ಪುರುಷ ಇದ್ದು ಉಳಿದವರು ಮಹಿಳೆಯರು ಎಂದು ಹೇಳಿದರು.
#WATCH | Uttar Pradesh: On Hathras stampede incident, CMO Agra Dr. Arun Kumar Srivastava says,
ಕಾರ್ಯಕ್ರಮದ ಆಯೋಜಕರ ವಿರುದ್ಧ ಪ್ರಕರಣ: ಇನ್ನು ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು, ಕಾರ್ಯಕ್ರಮದ ಆಯೋಜಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇಂದು ಸಿಎಂ ಯೋಗಿ ಭೇಟಿ: ಘಟನಾ ಸ್ಥಳಕ್ಕೆ ಇಂದು ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ.
#WATCH | Uttar Pradesh: Forensic experts along with dog squad collect evidence at the incident site in Hathras, where a stampede took place yesterday, claiming the lives of 116 people pic.twitter.com/a9u9t1bXDi
— ANI (@ANI) July 3, 2024