ETV Bharat / bharat

ಹತ್ರಾಸ್ ಪ್ರಕರಣ: ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ರಾಹುಲ್ ಗಾಂಧಿ - Rahul Gandhi

author img

By ETV Bharat Karnataka Team

Published : Jul 5, 2024, 11:51 AM IST

ಹತ್ರಾಸ್ ಸತ್ಸಂಗ ಕಾಲ್ತುಳಿತ ಪ್ರಕರಣದಲ್ಲಿ ಸಾವನ್ನಪ್ಪಿರುವ ಅಲಿಗಢದ ಸಂತ್ರಸ್ತರ ಕುಟುಂಬಗಳನ್ನು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ಭೇಟಿ ಮಾಡಿ ಸಾಂತ್ವನ ಹೇಳಿದರು.

HATHRAS STAMPEDE LATEST UPDATE  HATHRAS NEWS  ALIGARH NEWS  CONGRESS MP RAHUL GANDHI
ಹತ್ರಾಸ್ ಕಾಲ್ತುಳಿತ: ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ (ETV Bharat)

ಅಲಿಗಢ(ಉತ್ತರ ಪ್ರದೇಶ): ಹತ್ರಾಸ್ ಸತ್ಸಂಗ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದಲ್ಲಿ 123 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಅಲಿಗಢದ ಪಿಲ್ಖಾನಾ ಗ್ರಾಮಕ್ಕೆ ಆಗಮಿಸಿ, ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಪಿಲ್ಖಾನಾ ಎಂಬಲ್ಲಿನ ಛೋಟಾಲಾಲ್ ಅವರ ಪತ್ನಿ ಮಂಜು, ಪುತ್ರ ಪಂಕಜ್, ಗ್ರಾಮದ ಪ್ರೇಮಾವತಿ, ಶಾಂತಿದೇವಿ ಎಂಬವರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇವರ ಕುಟುಂಬ ಸದಸ್ಯರು ರಾಹುಲ್ ಗಾಂಧಿ ಜೊತೆ ತಮ್ಮ ಅಳಲು ತೋಡಿಕೊಂಡರು.

#WATCH | Hathras, UP: After meeting the victims of the stampede, Congress MP and LoP in Lok Sabha, Rahul Gandhi says

ಇಲ್ಲಿಂದ ಹತ್ರಾಸ್​ನ ನವಿಪುರ ಖುರ್ದ್ ವೈಭವ್ ನಗರದಲ್ಲಿರುವ ಗ್ರೀನ್ ಪಾರ್ಕ್‌ಗೆ ರಾಹುಲ್ ಗಾಂಧಿ ತೆರಳಲಿದರು. ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮುನ್ನಿದೇವಿ ಮತ್ತು ಆಶಾದೇವಿ ಎಂಬ ಮಹಿಳೆಯರ ಕುಟುಂಬಗಳನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಸಂತ್ರಸ್ತೆಯ ಕುಟುಂಬ ಸದಸ್ಯರು ನೆಲದ ಮೇಲೆ ಕುಳಿತಿದ್ದರು. ರಾಹುಲ್ ಗಾಂಧಿ ಅವರಿಗೆ ಕುಳಿತುಕೊಳ್ಳಲು ಸ್ಟೂಲ್ ಇಡಲಾಗಿತ್ತು. ಆದರೆ, ಸ್ಟೂಲ್​ ತೆಗೆದು ಪಕ್ಕಕ್ಕಿಟ್ಟ ರಾಹುಲ್, ಕುಟುಂಬ ಸದಸ್ಯರೊಂದಿಗೆ ನೆಲದ ಮೇಲೆಯೇ ಕುಳಿತುಕೊಂಡು ಸಂತ್ರಸ್ತರ ನೋವಿಗೆ ಕಿವಿಯಾದರು. ಈ ಸಂದರ್ಭದಲ್ಲಿ ಮಾತನಾಡುತ್ತಾ, ಸಂತ್ರಸ್ತರ ಕುಟುಂಬಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಭರವಸೆ ನೀಡಿದರು.

ಇದನ್ನೂ ಓದಿ: ಹತ್ರಾಸ್ ಕಾಲ್ತುಳಿತ: ಮೃತರ ಸಂಖ್ಯೆ 123ಕ್ಕೇರಿಕೆ, 6 ಸಂಘಟಕರ ಸೆರೆ; ರಾಹುಲ್ ಭೇಟಿ ಸಾಧ್ಯತೆ - Hathras Stampede

ಅಲಿಗಢ(ಉತ್ತರ ಪ್ರದೇಶ): ಹತ್ರಾಸ್ ಸತ್ಸಂಗ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದಲ್ಲಿ 123 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಅಲಿಗಢದ ಪಿಲ್ಖಾನಾ ಗ್ರಾಮಕ್ಕೆ ಆಗಮಿಸಿ, ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಪಿಲ್ಖಾನಾ ಎಂಬಲ್ಲಿನ ಛೋಟಾಲಾಲ್ ಅವರ ಪತ್ನಿ ಮಂಜು, ಪುತ್ರ ಪಂಕಜ್, ಗ್ರಾಮದ ಪ್ರೇಮಾವತಿ, ಶಾಂತಿದೇವಿ ಎಂಬವರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇವರ ಕುಟುಂಬ ಸದಸ್ಯರು ರಾಹುಲ್ ಗಾಂಧಿ ಜೊತೆ ತಮ್ಮ ಅಳಲು ತೋಡಿಕೊಂಡರು.

ಇಲ್ಲಿಂದ ಹತ್ರಾಸ್​ನ ನವಿಪುರ ಖುರ್ದ್ ವೈಭವ್ ನಗರದಲ್ಲಿರುವ ಗ್ರೀನ್ ಪಾರ್ಕ್‌ಗೆ ರಾಹುಲ್ ಗಾಂಧಿ ತೆರಳಲಿದರು. ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮುನ್ನಿದೇವಿ ಮತ್ತು ಆಶಾದೇವಿ ಎಂಬ ಮಹಿಳೆಯರ ಕುಟುಂಬಗಳನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಸಂತ್ರಸ್ತೆಯ ಕುಟುಂಬ ಸದಸ್ಯರು ನೆಲದ ಮೇಲೆ ಕುಳಿತಿದ್ದರು. ರಾಹುಲ್ ಗಾಂಧಿ ಅವರಿಗೆ ಕುಳಿತುಕೊಳ್ಳಲು ಸ್ಟೂಲ್ ಇಡಲಾಗಿತ್ತು. ಆದರೆ, ಸ್ಟೂಲ್​ ತೆಗೆದು ಪಕ್ಕಕ್ಕಿಟ್ಟ ರಾಹುಲ್, ಕುಟುಂಬ ಸದಸ್ಯರೊಂದಿಗೆ ನೆಲದ ಮೇಲೆಯೇ ಕುಳಿತುಕೊಂಡು ಸಂತ್ರಸ್ತರ ನೋವಿಗೆ ಕಿವಿಯಾದರು. ಈ ಸಂದರ್ಭದಲ್ಲಿ ಮಾತನಾಡುತ್ತಾ, ಸಂತ್ರಸ್ತರ ಕುಟುಂಬಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ಭರವಸೆ ನೀಡಿದರು.

ಇದನ್ನೂ ಓದಿ: ಹತ್ರಾಸ್ ಕಾಲ್ತುಳಿತ: ಮೃತರ ಸಂಖ್ಯೆ 123ಕ್ಕೇರಿಕೆ, 6 ಸಂಘಟಕರ ಸೆರೆ; ರಾಹುಲ್ ಭೇಟಿ ಸಾಧ್ಯತೆ - Hathras Stampede

ETV Bharat Logo

Copyright © 2024 Ushodaya Enterprises Pvt. Ltd., All Rights Reserved.