ETV Bharat / bharat

ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಆರೋಗ್ಯ ಗಂಭೀರ - RAM TEMPLE HEAD PRIEST CRITICAL

ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ಮಹಾಂತ್ ಸತ್ಯೇಂದ್ರ ದಾಸ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್
ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ (ANI)
author img

By ETV Bharat Karnataka Team

Published : Feb 3, 2025, 3:52 PM IST

ಲಖನೌ(ಉತ್ತರ ಪ್ರದೇಶ): ಅಯೋಧ್ಯೆ ಶ್ರೀರಾಮ ಮಂದಿರ ದೇವಾಲಯದ ಪ್ರಧಾನ ಅರ್ಚಕರಾದ ಮಹಾಂತ್ ಸತ್ಯೇಂದ್ರ ದಾಸ್ (85) ಅವರು ಮೆದುಳಿನ ಪಾರ್ಶ್ವವಾಯುವಿಗೆ ತುತ್ತಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿರುವ ಮಹಾಂತ್ ಸತ್ಯೇಂದ್ರ ದಾಸ್ ಅವರನ್ನು ಭಾನುವಾರ ಇಲ್ಲಿನ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಎಸ್‌ಜಿಪಿಜಿಐ) ದಾಖಲಿಸಲಾಗಿದೆ. ತೀವ್ರ ನಿಗಾ ವಹಿಸಲಾಗಿದೆ. ಆದರೆ, ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನ ಅರ್ಚಕರು ಮೆದುಳಿನ ಪಾರ್ಶ್ವವಾಯು, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಪ್ರಸ್ತುತ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಿತಿ ಗಂಭೀರವಾಗಿದ್ದರೂ ಅವರು ಮಾತುಗಳನ್ನು ಆಲಿಸುತ್ತಿದ್ದಾರೆ. ದೇಹದ ಇತರ ಅಂಗಗಳು ಸ್ಥಿರವಾಗಿವೆ. ನುರಿತ ವೈದ್ಯರ ತಂಡ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ.

ಅಯೋಧ್ಯೆ ಹೋರಾಟದ ಸಾಕ್ಷಿದಾರ: 1992ರ ಡಿಸೆಂಬರ್ 6ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರಕ್ಕಾಗಿ ನಡೆದ ಹೋರಾಟಕ್ಕೂ (ಬಾಬರಿ ಮಸೀದಿ ಧ್ವಂಸ) ಮೊದಲು ಅವರು, ಪ್ರಧಾನ ಅರ್ಚಕರಾಗಿ ನೇಮಕವಾಗಿದ್ದರು. 20ನೇ ವಯಸ್ಸಿನಲ್ಲೇ ಸನ್ಯಾಸ ಜೀವನ ಸ್ವೀಕರಿಸಿದ್ದರು. ನಿರ್ವಾಣಿ ಅಖಾಡಕ್ಕೆ ಸೇರಿದ ಮಹಾಂತರು, ಮಂದಿರಕ್ಕಾಗಿ ನಡೆದ ಚಳವಳಿಯ ನಾಡಿಮಿಡಿತ ಬಲ್ಲ ಪ್ರಮುಖರಲ್ಲಿ ಒಬ್ಬರು.

"ಮಹಾಂತರು ಸರ್ವರೂ ಗೌರವಿಸಲ್ಪಡುವ ವ್ಯಕ್ತಿ. ಅಯೋಧ್ಯೆ ಚಳುವಳಿಯ ಇತಿಹಾಸವನ್ನು ನೆಲದಿಂದ ಅರಿತವರು. ಅನಾರೋಗ್ಯದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ" ಎಂದು ವಿಶ್ವ ಹಿಂದೂ ಪರಿಷತ್‌ನ ಅಯೋಧ್ಯಾ ವಕ್ತಾರ ಶರದ್ ಶರ್ಮಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಟ್ರಸ್ಟ್​​ ಅಧ್ಯಕ್ಷ ಮಹಂತ್​ ನೃತ್ಯ ಗೋಪಾಲ್​ ದಾಸ್​ ಆರೋಗ್ಯ ಗಂಭೀರ - Mahant Gopal Das Hospitalised

ಅಯೋಧ್ಯೆ: ಜೂನ್​ 2025ರ ಹೊತ್ತಿಗೆ ಸಂಪೂರ್ಣ ರಾಮ ಮಂದಿರ ನಿರ್ಮಾಣ - Ayodhya Ram Temple complex

ಹಳದಿ ನಿಲುವಂಗಿ, ಬಿಳಿ ಧೋತಿ: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ವಿಶಿಷ್ಟ ಡ್ರೆಸ್​ಕೋಡ್

ಲಖನೌ(ಉತ್ತರ ಪ್ರದೇಶ): ಅಯೋಧ್ಯೆ ಶ್ರೀರಾಮ ಮಂದಿರ ದೇವಾಲಯದ ಪ್ರಧಾನ ಅರ್ಚಕರಾದ ಮಹಾಂತ್ ಸತ್ಯೇಂದ್ರ ದಾಸ್ (85) ಅವರು ಮೆದುಳಿನ ಪಾರ್ಶ್ವವಾಯುವಿಗೆ ತುತ್ತಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿರುವ ಮಹಾಂತ್ ಸತ್ಯೇಂದ್ರ ದಾಸ್ ಅವರನ್ನು ಭಾನುವಾರ ಇಲ್ಲಿನ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಎಸ್‌ಜಿಪಿಜಿಐ) ದಾಖಲಿಸಲಾಗಿದೆ. ತೀವ್ರ ನಿಗಾ ವಹಿಸಲಾಗಿದೆ. ಆದರೆ, ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನ ಅರ್ಚಕರು ಮೆದುಳಿನ ಪಾರ್ಶ್ವವಾಯು, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಪ್ರಸ್ತುತ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಿತಿ ಗಂಭೀರವಾಗಿದ್ದರೂ ಅವರು ಮಾತುಗಳನ್ನು ಆಲಿಸುತ್ತಿದ್ದಾರೆ. ದೇಹದ ಇತರ ಅಂಗಗಳು ಸ್ಥಿರವಾಗಿವೆ. ನುರಿತ ವೈದ್ಯರ ತಂಡ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ.

ಅಯೋಧ್ಯೆ ಹೋರಾಟದ ಸಾಕ್ಷಿದಾರ: 1992ರ ಡಿಸೆಂಬರ್ 6ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರಕ್ಕಾಗಿ ನಡೆದ ಹೋರಾಟಕ್ಕೂ (ಬಾಬರಿ ಮಸೀದಿ ಧ್ವಂಸ) ಮೊದಲು ಅವರು, ಪ್ರಧಾನ ಅರ್ಚಕರಾಗಿ ನೇಮಕವಾಗಿದ್ದರು. 20ನೇ ವಯಸ್ಸಿನಲ್ಲೇ ಸನ್ಯಾಸ ಜೀವನ ಸ್ವೀಕರಿಸಿದ್ದರು. ನಿರ್ವಾಣಿ ಅಖಾಡಕ್ಕೆ ಸೇರಿದ ಮಹಾಂತರು, ಮಂದಿರಕ್ಕಾಗಿ ನಡೆದ ಚಳವಳಿಯ ನಾಡಿಮಿಡಿತ ಬಲ್ಲ ಪ್ರಮುಖರಲ್ಲಿ ಒಬ್ಬರು.

"ಮಹಾಂತರು ಸರ್ವರೂ ಗೌರವಿಸಲ್ಪಡುವ ವ್ಯಕ್ತಿ. ಅಯೋಧ್ಯೆ ಚಳುವಳಿಯ ಇತಿಹಾಸವನ್ನು ನೆಲದಿಂದ ಅರಿತವರು. ಅನಾರೋಗ್ಯದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ" ಎಂದು ವಿಶ್ವ ಹಿಂದೂ ಪರಿಷತ್‌ನ ಅಯೋಧ್ಯಾ ವಕ್ತಾರ ಶರದ್ ಶರ್ಮಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಟ್ರಸ್ಟ್​​ ಅಧ್ಯಕ್ಷ ಮಹಂತ್​ ನೃತ್ಯ ಗೋಪಾಲ್​ ದಾಸ್​ ಆರೋಗ್ಯ ಗಂಭೀರ - Mahant Gopal Das Hospitalised

ಅಯೋಧ್ಯೆ: ಜೂನ್​ 2025ರ ಹೊತ್ತಿಗೆ ಸಂಪೂರ್ಣ ರಾಮ ಮಂದಿರ ನಿರ್ಮಾಣ - Ayodhya Ram Temple complex

ಹಳದಿ ನಿಲುವಂಗಿ, ಬಿಳಿ ಧೋತಿ: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ವಿಶಿಷ್ಟ ಡ್ರೆಸ್​ಕೋಡ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.