ETV Bharat / bharat

ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್​ ಪ್ರತಿಭಟನೆ; ಪೊಲೀಸರಿಂದ ಬಿಗಿ ಭದ್ರತೆ - Himachal Pradesh Mosque Row

author img

By ETV Bharat Karnataka Team

Published : Sep 11, 2024, 11:31 AM IST

ಹಿಮಾಚಲ ಪ್ರದೇಶದ ಸಂಜೌಲಿ ಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯ ಜೊತೆಗೆ ತುರ್ತು ಸ್ಪಂದನಾ ತಂಡವನ್ನೂ ನಿಯೋಜಿಸಲಾಗಿದೆ. ಐದಕ್ಕಿಂತ ಹೆಚ್ಚು ಜನರು ಒಟ್ಟುಗೂಡುವುದನ್ನು ಪೊಲೀಸರು ನಿರ್ಬಂಧಿಸಿದ್ದಾರೆ. ಇಷ್ಟಕ್ಕೂ ಅಲ್ಲಿ ನಡೆದ ಘಟನೆ ಏನು ಗೊತ್ತೇ?

shimlas-sanjauli-amid-protest-call-by-hindu-outfits
ಶಿಮ್ಲಾದಲ್ಲಿ ನಡೆದ ಬೃಹತ್ ಪ್ರತಿಭಟನೆ (ANI)

ಶಿಮ್ಲಾ: ಇಲ್ಲಿನ ಸಂಜೌಲಿ ಪ್ರದೇಶದಲ್ಲಿ ಅನ್ಯ ಕೋಮಿನವರು ಅಕ್ರಮವಾಗಿ ಪ್ರಾರ್ಥನಾ ಮಂದಿರ ನಿರ್ಮಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಂಜೌಲಿಯಲ್ಲಿ ಪೊಲೀಸರು ಇಂದು ಬಿಎನ್​ಎಸ್​ ಸೆಕ್ಷನ್​ 163 (ನಿಷೇಧಾಜ್ಞೆ) ಜಾರಿ ಮಾಡಿದ್ದಾರೆ. ಬೆಳಗ್ಗೆ 7ರಿಂದ ರಾತ್ರಿ 11.59ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಶಿಮ್ಲಾ ಜಿಲ್ಲಾಧಿಕಾರಿ ಅನೂಪ್​ ಕಶ್ಯಪ್​ ತಿಳಿಸಿದ್ದಾರೆ.

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಜೌಲಿ ನಗರದಲ್ಲಿ ಯಾವುದೇ ಅನುಮತಿ ಇಲ್ಲದೇ ಘೋಷಣೆ, ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶವಿಲ್ಲ. ಶಸಾಸ್ತ್ರಗಳು ಹಾಗೂ ದಹನಶೀಲ ವಸ್ತುಗಳನ್ನು ಸಾಗಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ನಗರದ ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್​ ಹಾಕಲಾಗಿದ್ದು, ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅಕ್ರಮವಾಗಿ ನಿರ್ಮಿಸಿರುವ ಪ್ರಾರ್ಥನಾ ಮಂದಿರವನ್ನು ತೆರವುಗೊಳಿಸಬೇಕು. ರಾಜ್ಯಕ್ಕೆ ಆಗಮಿಸುವ ಹೊರಗಿನವರ ನೋಂದಣಿ ಮಾಡಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ಈ ಕುರಿತು ಮಾತನಾಡಿರುವ ಸಿಎಂ ಸುಖ್ವೀಂದರ್​ ಸಿಂಗ್​ ಸುಖು, "ಜನರಿಗೆ ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ಯಾವುದೇ ಸಮುದಾಯದಿಂದ ಯಾವುದೇ ಹಾನಿ ಆಗಬಾರದು. ಜನರು ಇದಕ್ಕೆ ಯಾವುದೇ ರಾಜಕೀಯ ಬಣ್ಣ ನೀಡದೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು" ಎಂದು ಮನವಿ ಮಾಡಿದ್ದಾರೆ. (ಐಎಎನ್​ಎಸ್​)

ಇದನ್ನೂ ಓದಿ: 'ಅಕ್ರಮ' ಕಟ್ಟಡ ನಿರ್ಮಾಣ ಆರೋಪ: ಶಿಮ್ಲಾದಲ್ಲಿ ಬೃಹತ್ ಪ್ರತಿಭಟನೆ

ಶಿಮ್ಲಾ: ಇಲ್ಲಿನ ಸಂಜೌಲಿ ಪ್ರದೇಶದಲ್ಲಿ ಅನ್ಯ ಕೋಮಿನವರು ಅಕ್ರಮವಾಗಿ ಪ್ರಾರ್ಥನಾ ಮಂದಿರ ನಿರ್ಮಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಂಜೌಲಿಯಲ್ಲಿ ಪೊಲೀಸರು ಇಂದು ಬಿಎನ್​ಎಸ್​ ಸೆಕ್ಷನ್​ 163 (ನಿಷೇಧಾಜ್ಞೆ) ಜಾರಿ ಮಾಡಿದ್ದಾರೆ. ಬೆಳಗ್ಗೆ 7ರಿಂದ ರಾತ್ರಿ 11.59ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಶಿಮ್ಲಾ ಜಿಲ್ಲಾಧಿಕಾರಿ ಅನೂಪ್​ ಕಶ್ಯಪ್​ ತಿಳಿಸಿದ್ದಾರೆ.

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಜೌಲಿ ನಗರದಲ್ಲಿ ಯಾವುದೇ ಅನುಮತಿ ಇಲ್ಲದೇ ಘೋಷಣೆ, ಪ್ರತಿಭಟನೆ, ಧರಣಿ ನಡೆಸುವುದಕ್ಕೆ ಅವಕಾಶವಿಲ್ಲ. ಶಸಾಸ್ತ್ರಗಳು ಹಾಗೂ ದಹನಶೀಲ ವಸ್ತುಗಳನ್ನು ಸಾಗಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ನಗರದ ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್​ ಹಾಕಲಾಗಿದ್ದು, ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅಕ್ರಮವಾಗಿ ನಿರ್ಮಿಸಿರುವ ಪ್ರಾರ್ಥನಾ ಮಂದಿರವನ್ನು ತೆರವುಗೊಳಿಸಬೇಕು. ರಾಜ್ಯಕ್ಕೆ ಆಗಮಿಸುವ ಹೊರಗಿನವರ ನೋಂದಣಿ ಮಾಡಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ಈ ಕುರಿತು ಮಾತನಾಡಿರುವ ಸಿಎಂ ಸುಖ್ವೀಂದರ್​ ಸಿಂಗ್​ ಸುಖು, "ಜನರಿಗೆ ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ಯಾವುದೇ ಸಮುದಾಯದಿಂದ ಯಾವುದೇ ಹಾನಿ ಆಗಬಾರದು. ಜನರು ಇದಕ್ಕೆ ಯಾವುದೇ ರಾಜಕೀಯ ಬಣ್ಣ ನೀಡದೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು" ಎಂದು ಮನವಿ ಮಾಡಿದ್ದಾರೆ. (ಐಎಎನ್​ಎಸ್​)

ಇದನ್ನೂ ಓದಿ: 'ಅಕ್ರಮ' ಕಟ್ಟಡ ನಿರ್ಮಾಣ ಆರೋಪ: ಶಿಮ್ಲಾದಲ್ಲಿ ಬೃಹತ್ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.