ETV Bharat / bharat

ಜಮ್ಮು-ಕಾಶ್ಮೀರ ಗಡಿಯಲ್ಲಿ ಒಳನುಸುಳಲು ಯತ್ನ: ಇಬ್ಬರು ಉಗ್ರರ ಹತ್ಯೆ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ - Terrorists Killed

author img

By PTI

Published : Sep 9, 2024, 9:20 AM IST

ಭಾರತೀಯ ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಪಾಕಿಸ್ತಾನದ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಗಡಿಭಾಗದ ನೌಶೇರಾದ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿ ಎನ್‌ಕೌಂಟರ್‌ ನಡೆಯಿತು.

ಭಾರತೀಯ ಭದ್ರತಾ ಪಡೆ
ಭಾರತೀಯ ಭದ್ರತಾ ಪಡೆ (ANI)

ರಜೌರಿ(ಜಮ್ಮು ಮತ್ತು ಕಾಶ್ಮೀರ): ಭಾರತೀಯ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ಹೊಡೆದುರುಳಿಸಿದೆ. ಇಲ್ಲಿನ ರಾಜೌರಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆಯಿತು.

ಜಮ್ಮು-ಕಾಶ್ಮೀರ ಪೊಲೀಸ್ ಹಾಗು ಗುಪ್ತಚರ ಇಲಾಖೆ ಉಗ್ರರ ಒಳನುಸುಳುವಿಕೆಯ ಕುರಿತು ಸುಳಿವು ನೀಡಿತ್ತು. ಈ ಮಾಹಿತಿ ಆಧರಿಸಿ ಭಯೋತ್ಪಾದಕರ ಚಲನವಲನ ಪತ್ತೆ ಹಚ್ಚಿದ ಯೋಧರು ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಸೇನೆ 'ಎಕ್ಸ್​'ನಲ್ಲಿ ಪೋಸ್ಟ್​ ಮಾಡಿದೆ. 'ಉಗ್ರರ ಒಳನುಸುಳುವಿಕೆ ಸಂಬಂಧಿಸಿದಂತೆ ಗುಪ್ತಚರ ಸಂಸ್ಥೆಗಳು ಮತ್ತು ಪೊಲೀಸರ ಮಾಹಿತಿಯ ಆಧಾರದಡಿ ಸೆಪ್ಟೆಂಬರ್ 8 ಮತ್ತು 9ರ ಮಧ್ಯರಾತ್ರಿ ನೌಶೇರಾದ ಲಾಮ್ ಸೆಕ್ಟರ್ ಪ್ರದೇಶದಲ್ಲಿ ಒಳನುಸುಳುವಿಕೆಯ ವಿರುದ್ಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಇಬ್ಬರು ನುಸುಳುಕೋರರನ್ನು ಹತ್ಯೆಗೈಯಲಾಗಿದೆ. ಎರಡು AK-47 ಗನ್, ಒಂದು ಪಿಸ್ತೂಲ್​ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ' ಎಂದು ತಿಳಿಸಿದೆ.

ಜಮ್ಮು ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ. ಇಲ್ಲಿನ ಪೀರ್​ ಪಂಜಾಲ್ ಶ್ರೇಣಿ ಎನ್‌ಕೌಂಟರ್‌ಗಳಿಗೆ ಕೇಂದ್ರವಾಗುತ್ತಿದೆ. ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ನಂತರ ಉಗ್ರರು ಕಾಶ್ಮೀರದಿಂದ ರಜೌರಿ, ಪೂಂಚ್, ದೋಡಾ, ಕಿಶ್ತ್ವಾರ್ ಮತ್ತು ಕಥುವಾ ಸೇರಿದಂತೆ ಜಮ್ಮು ಪ್ರದೇಶದ ಅರಣ್ಯ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಆ್ಯಂಟಿ ಡ್ರೋನ್​, ಭದ್ರತಾ ಸಿಬ್ಬಂದಿ ಹೆಚ್ಚಿಸಿದ ರಾಜ್ಯ ಸರ್ಕಾರ - Manipur Violence

ರಜೌರಿ(ಜಮ್ಮು ಮತ್ತು ಕಾಶ್ಮೀರ): ಭಾರತೀಯ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ಹೊಡೆದುರುಳಿಸಿದೆ. ಇಲ್ಲಿನ ರಾಜೌರಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆಯಿತು.

ಜಮ್ಮು-ಕಾಶ್ಮೀರ ಪೊಲೀಸ್ ಹಾಗು ಗುಪ್ತಚರ ಇಲಾಖೆ ಉಗ್ರರ ಒಳನುಸುಳುವಿಕೆಯ ಕುರಿತು ಸುಳಿವು ನೀಡಿತ್ತು. ಈ ಮಾಹಿತಿ ಆಧರಿಸಿ ಭಯೋತ್ಪಾದಕರ ಚಲನವಲನ ಪತ್ತೆ ಹಚ್ಚಿದ ಯೋಧರು ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಸೇನೆ 'ಎಕ್ಸ್​'ನಲ್ಲಿ ಪೋಸ್ಟ್​ ಮಾಡಿದೆ. 'ಉಗ್ರರ ಒಳನುಸುಳುವಿಕೆ ಸಂಬಂಧಿಸಿದಂತೆ ಗುಪ್ತಚರ ಸಂಸ್ಥೆಗಳು ಮತ್ತು ಪೊಲೀಸರ ಮಾಹಿತಿಯ ಆಧಾರದಡಿ ಸೆಪ್ಟೆಂಬರ್ 8 ಮತ್ತು 9ರ ಮಧ್ಯರಾತ್ರಿ ನೌಶೇರಾದ ಲಾಮ್ ಸೆಕ್ಟರ್ ಪ್ರದೇಶದಲ್ಲಿ ಒಳನುಸುಳುವಿಕೆಯ ವಿರುದ್ಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಇಬ್ಬರು ನುಸುಳುಕೋರರನ್ನು ಹತ್ಯೆಗೈಯಲಾಗಿದೆ. ಎರಡು AK-47 ಗನ್, ಒಂದು ಪಿಸ್ತೂಲ್​ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ' ಎಂದು ತಿಳಿಸಿದೆ.

ಜಮ್ಮು ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ. ಇಲ್ಲಿನ ಪೀರ್​ ಪಂಜಾಲ್ ಶ್ರೇಣಿ ಎನ್‌ಕೌಂಟರ್‌ಗಳಿಗೆ ಕೇಂದ್ರವಾಗುತ್ತಿದೆ. ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ನಂತರ ಉಗ್ರರು ಕಾಶ್ಮೀರದಿಂದ ರಜೌರಿ, ಪೂಂಚ್, ದೋಡಾ, ಕಿಶ್ತ್ವಾರ್ ಮತ್ತು ಕಥುವಾ ಸೇರಿದಂತೆ ಜಮ್ಮು ಪ್ರದೇಶದ ಅರಣ್ಯ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಆ್ಯಂಟಿ ಡ್ರೋನ್​, ಭದ್ರತಾ ಸಿಬ್ಬಂದಿ ಹೆಚ್ಚಿಸಿದ ರಾಜ್ಯ ಸರ್ಕಾರ - Manipur Violence

ETV Bharat Logo

Copyright © 2024 Ushodaya Enterprises Pvt. Ltd., All Rights Reserved.