ETV Bharat / bharat

J&K ಚುನಾವಣೆ : ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು 'ಜುಮ್ಲಾ ಪತ್ರ' ಎಂದು ಕರೆದ ಕಾಂಗ್ರೆಸ್ - BJPs election manifesto

author img

By PTI

Published : Sep 7, 2024, 9:16 AM IST

ಜಮ್ಮು ಮತ್ತು ಕಾಶ್ಮೀರ ಚುನಾವಣೆಗಾಗಿ ಬಿಜೆಪಿ ಹೊರಡಿಸಿರುವ ಪ್ರಣಾಳಿಕೆಯನ್ನು ಕಾಂಗ್ರೆಸ್​ ಪಕ್ಷ 'ಜುಮ್ಲಾ ಪತ್ರ' ಎಂದು ಕರೆದಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ 2014 ರಲ್ಲಿ ನೀಡಲಾಗಿದ್ದ ಭರವಸೆಗಳು ಈಡೇರುವುದಿಲ್ಲ ಎಂದಿದೆ.

BJP
ಬಿಜೆಪಿ (IANS)

ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೊರಡಿಸಿರುವ ಪ್ರಣಾಳಿಕೆಯನ್ನು ಶುಕ್ರವಾರ ಕಾಂಗ್ರೆಸ್ "ಜುಮ್ಲಾ ಪತ್ರ" ಎಂದು ಕರೆದಿದೆ. ಅಲ್ಲದೇ, ಕೇಸರಿ ಪಕ್ಷವು ಸಮಾಜದ ವಿವಿಧ ವರ್ಗಗಳಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದೆ.

ಬಿಜೆಪಿ ಅಧಿಕಾರಾವಧಿಯಲ್ಲಿ ಭಾರಿ ತೆರಿಗೆ, ಅಭೂತಪೂರ್ವ ನಿರುದ್ಯೋಗ ಮತ್ತು ದಾಖಲೆಯ ಹಣದುಬ್ಬರದಿಂದಾಗಿ ಜನರಿಗೆ ಹೊರೆಯಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಶ್ವೇತಪತ್ರ ಹೊರಡಿಸುವುದು ಮತ್ತು ಕಾಶ್ಮೀರದಲ್ಲಿ ಪಾಳುಬಿದ್ದಿರುವ 100 ದೇವಾಲಯಗಳನ್ನು ಮರುಸ್ಥಾಪಿಸುವ ಜೊತೆಗೆ ಭಯೋತ್ಪಾದನೆಗೆ ಬಲಿಯಾದ ಎಲ್ಲರಿಗೆ ನೆರವನ್ನು ಖಾತರಿಪಡಿಸುವುದು ಸೇರಿದಂತೆ 25 ಭರವಸೆಗಳನ್ನು ನೀಡುವುದಾಗಿ ಭರವಸೆ ನೀಡಿದೆ.

ಇಲ್ಲಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲು ಕೈಗೊಂಡ ಎರಡು ದಿನಗಳ ಪ್ರವಾಸದ ಮೊದಲ ದಿನದಂದು ಮಾಧ್ಯಮಗೋಷ್ಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಶ್ಮೀರಿ ವಲಸಿಗ ಪಂಡಿತರ ಮರಳುವಿಕೆ ಮತ್ತು ಪುನರ್ವಸತಿ ಮತ್ತು ಐದು ಲಕ್ಷ ಉದ್ಯೋಗ ಸೃಷ್ಟಿಯ ಬಗ್ಗೆಯೂ ಮಾತನಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ 2014 ರಿಂದ ಅಧಿಕಾರದಲ್ಲಿದೆ. 2018 ರಿಂದ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ ಮೂಲಕ ನೇರವಾಗಿ ಆಡಳಿತ ನಡೆಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ಹೇಳಿದೆ.

ಬಿಜೆಪಿ ಈಗ ಪ್ರಸ್ತಾಪಿಸುತ್ತಿರುವ ಯಾವುದೇ ಭರವಸೆಗಳನ್ನು ಅವರ ಆಡಳಿತದಲ್ಲಿ ಜಾರಿಗೊಳಿಸಿಲ್ಲ. ಬದಲಿಗೆ ಸಾರ್ವಜನಿಕರಿಗೆ ಭಾರಿ ತೆರಿಗೆಗಳು, ಶುಲ್ಕ ಮತ್ತು ಸುಂಕಗಳ ಹೆಚ್ಚಳ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಲವಾರು ನೇಮಕಾತಿ ಹಗರಣಗಳು ಸಂಭವಿಸಿದವು, ನಿರುದ್ಯೋಗಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದರು ಎಂದು ಕಾಂಗ್ರೆಸ್ ವಕ್ತಾರರು ಹೇಳಿದ್ದಾರೆ.

ದಿನಗೂಲಿ ಕಾರ್ಮಿಕರು, ಇತರ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ದುಸ್ಥಿತಿಯ ಬಗ್ಗೆ ಕಾಂಗ್ರೆಸ್​ ಪಕ್ಷ ಎತ್ತಿ ತೋರಿಸಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ 2014 ರ ಚುನಾವಣೆಯ ಸಮಯದಲ್ಲಿ ನೀಡಲಾದ ಈ ಭರವಸೆಗಳು ಈಡೇರುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ : ಜಮ್ಮು & ಕಾಶ್ಮೀರ ಚುನಾವಣೆ: 44 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಹಿಂಪಡೆದ ಬಿಜೆಪಿ - J and K polls

ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೊರಡಿಸಿರುವ ಪ್ರಣಾಳಿಕೆಯನ್ನು ಶುಕ್ರವಾರ ಕಾಂಗ್ರೆಸ್ "ಜುಮ್ಲಾ ಪತ್ರ" ಎಂದು ಕರೆದಿದೆ. ಅಲ್ಲದೇ, ಕೇಸರಿ ಪಕ್ಷವು ಸಮಾಜದ ವಿವಿಧ ವರ್ಗಗಳಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದೆ.

ಬಿಜೆಪಿ ಅಧಿಕಾರಾವಧಿಯಲ್ಲಿ ಭಾರಿ ತೆರಿಗೆ, ಅಭೂತಪೂರ್ವ ನಿರುದ್ಯೋಗ ಮತ್ತು ದಾಖಲೆಯ ಹಣದುಬ್ಬರದಿಂದಾಗಿ ಜನರಿಗೆ ಹೊರೆಯಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಶ್ವೇತಪತ್ರ ಹೊರಡಿಸುವುದು ಮತ್ತು ಕಾಶ್ಮೀರದಲ್ಲಿ ಪಾಳುಬಿದ್ದಿರುವ 100 ದೇವಾಲಯಗಳನ್ನು ಮರುಸ್ಥಾಪಿಸುವ ಜೊತೆಗೆ ಭಯೋತ್ಪಾದನೆಗೆ ಬಲಿಯಾದ ಎಲ್ಲರಿಗೆ ನೆರವನ್ನು ಖಾತರಿಪಡಿಸುವುದು ಸೇರಿದಂತೆ 25 ಭರವಸೆಗಳನ್ನು ನೀಡುವುದಾಗಿ ಭರವಸೆ ನೀಡಿದೆ.

ಇಲ್ಲಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲು ಕೈಗೊಂಡ ಎರಡು ದಿನಗಳ ಪ್ರವಾಸದ ಮೊದಲ ದಿನದಂದು ಮಾಧ್ಯಮಗೋಷ್ಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಶ್ಮೀರಿ ವಲಸಿಗ ಪಂಡಿತರ ಮರಳುವಿಕೆ ಮತ್ತು ಪುನರ್ವಸತಿ ಮತ್ತು ಐದು ಲಕ್ಷ ಉದ್ಯೋಗ ಸೃಷ್ಟಿಯ ಬಗ್ಗೆಯೂ ಮಾತನಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ 2014 ರಿಂದ ಅಧಿಕಾರದಲ್ಲಿದೆ. 2018 ರಿಂದ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ ಮೂಲಕ ನೇರವಾಗಿ ಆಡಳಿತ ನಡೆಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ಹೇಳಿದೆ.

ಬಿಜೆಪಿ ಈಗ ಪ್ರಸ್ತಾಪಿಸುತ್ತಿರುವ ಯಾವುದೇ ಭರವಸೆಗಳನ್ನು ಅವರ ಆಡಳಿತದಲ್ಲಿ ಜಾರಿಗೊಳಿಸಿಲ್ಲ. ಬದಲಿಗೆ ಸಾರ್ವಜನಿಕರಿಗೆ ಭಾರಿ ತೆರಿಗೆಗಳು, ಶುಲ್ಕ ಮತ್ತು ಸುಂಕಗಳ ಹೆಚ್ಚಳ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಲವಾರು ನೇಮಕಾತಿ ಹಗರಣಗಳು ಸಂಭವಿಸಿದವು, ನಿರುದ್ಯೋಗಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದರು ಎಂದು ಕಾಂಗ್ರೆಸ್ ವಕ್ತಾರರು ಹೇಳಿದ್ದಾರೆ.

ದಿನಗೂಲಿ ಕಾರ್ಮಿಕರು, ಇತರ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ದುಸ್ಥಿತಿಯ ಬಗ್ಗೆ ಕಾಂಗ್ರೆಸ್​ ಪಕ್ಷ ಎತ್ತಿ ತೋರಿಸಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ 2014 ರ ಚುನಾವಣೆಯ ಸಮಯದಲ್ಲಿ ನೀಡಲಾದ ಈ ಭರವಸೆಗಳು ಈಡೇರುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ : ಜಮ್ಮು & ಕಾಶ್ಮೀರ ಚುನಾವಣೆ: 44 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಹಿಂಪಡೆದ ಬಿಜೆಪಿ - J and K polls

ETV Bharat Logo

Copyright © 2024 Ushodaya Enterprises Pvt. Ltd., All Rights Reserved.