ETV Bharat / bharat

ಮಹಿಳೆಗೆ ₹3 ಸಾವಿರ, ₹25 ಲಕ್ಷ ಆರೋಗ್ಯ ವಿಮೆ: ಕಾಶ್ಮೀರ ಪ್ರಜೆಗಳಿಗೆ ಕಾಂಗ್ರೆಸ್​ 'ಪಂಚ ಗ್ಯಾರಂಟಿ' - congress manifesto

author img

By PTI

Published : Sep 11, 2024, 7:49 PM IST

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಘೋಷಿಸಿದ್ದ ಪಂಚ ಗ್ಯಾರಂಟಿಗಳು ಜಮ್ಮು ಮತ್ತು ಕಾಶ್ಮೀರದಲ್ಲೂ ಮುಂದುವರಿದಿವೆ. ಮಹತ್ವದ ಭರವಸೆಗಳನ್ನು ಪಕ್ಷ ಇಂದು ಪ್ರಕಟಿಸಿದೆ.

ಕಾಂಗ್ರೆಸ್​ ಪಂಚ ಗ್ಯಾರಂಟಿ
ಕಾಂಗ್ರೆಸ್​ ಪಂಚ ಗ್ಯಾರಂಟಿ (ETV Bharat)

ಅನಂತನಾಗ್ (ಜಮ್ಮು- ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಸೆಪ್ಟೆಂಬರ್​ 18 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಇದಕ್ಕೂ ಮೊದಲು ರಾಜಕೀಯ ಪಕ್ಷಗಳು ಮತಕ್ಕಾಗಿ ಭರವಸೆಗಳ ಮಹಾಪೂರವನ್ನೇ ಹರಿಸುತ್ತಿವೆ. ಬಿಜೆಪಿ ಬಳಿಕ ಕಾಂಗ್ರೆಸ್​ ಕೂಡ ಭರ್ಜರಿ ಘೋಷಣೆಗಳನ್ನು ಪ್ರಕಟಿಸಿದೆ.

ಬುಧವಾರ ಇಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಶ್ಮೀರದ ಜನರಿಗೆ ಐದು ಭರವಸೆಗಳನ್ನು ಘೋಷಿಸಿದ್ದಾರೆ. ಇದರಲ್ಲಿ ಮಹಿಳಾ ಉದ್ಯಮಿಗಳಿಗೆ 5 ಲಕ್ಷ ಬಡ್ಡಿ ರಹಿತ ಸಾಲ, ಪ್ರತಿ ಕುಟುಂಬಕ್ಕೆ 25 ಲಕ್ಷ ಆರೋಗ್ಯ ವಿಮೆ, ಮಹಿಳೆಗೆ ಮಾಸಿಕ 3 ಸಾವಿರ ರೂಪಾಯಿ, ಪ್ರತಿ ವ್ಯಕ್ತಿಗೆ 11 ಕೆಜಿ ಅಕ್ಕಿ ನೀಡುವುದಾಗಿ ಪ್ರಕಟಿಸಿದರು.

ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್​ ಕಾನ್ಫ್​​ರೆನ್ಸ್​ ಮೈತ್ರಿಕೂಟ ಅಧಿಕಾರಕ್ಕೆ ಬಂದಲ್ಲಿ, ಐದು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗುವುದು. ಕರ್ನಾಟಕದ ಮಾದರಿಯಲ್ಲಿ ಕುಟುಂಬದ ಮಹಿಳೆಗೆ ಮಾಸಿಕ 3 ಸಾವಿರ ನೀಡಲಾಗುವುದು. ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯ ನೀಡುವುದನ್ನು ಪುನಃಸ್ಥಾಪನೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ನೀಡಿದ್ದ ವಲಸಿಗ ಕಾಶ್ಮೀರ ಪಂಡಿತರಿಗೆ ಪುನರ್ವಸತಿ ನೀಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಭರವಸೆ ನೀಡಿದರು.

ಈ ವೇಳೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಸುಬೋಧ್ ಕಾಂತ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಇದ್ದರು.

ಬಿಜೆಪಿ ವಿರುದ್ಧ ವಾಗ್ದಾಳಿ: ಐದು ಮಹತ್ವದ ಭರವಸೆಗಳನ್ನು ಘೋಷಣೆ ಬಳಿಕ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷರು, ಬಿಜೆಪಿ ಸರ್ಕಾರ 5 ಲಕ್ಷ ಉದ್ಯೋಗ ನೀಡುವ ಭರವಸೆ ಸುಳ್ಳು. ಈ ಹಿಂದೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಈಗ ಐದು ಲಕ್ಷ ಉದ್ಯೋಗ ನೀಡುವುದಾಗಿ ಹೇಳುತ್ತಿರುವುದು ವಿಪರ್ಯಾಸದ ಸಂಗತಿ. ಈ ಹಿಂದಿನ ವಾಗ್ದಾನದಂತೆ 10 ವರ್ಷಗಳಲ್ಲಿ 1 ಲಕ್ಷ ಜನರಿಗೆ ಉದ್ಯೋಗ ನೀಡಿಲ್ಲ. 5 ಲಕ್ಷ ಕೆಲಸ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಕಾಂಗ್ರೆಸ್​ ಘೋಷಿಸಿದ ಪಂಚ ಗ್ಯಾರಂಟಿ

  • ಮಹಿಳಾ ಉದ್ಯಮಿಗಳಿಗೆ ₹5 ಲಕ್ಷ ಬಡ್ಡಿ ರಹಿತ ಸಾಲ
  • ಪ್ರತಿ ಕುಟುಂಬಕ್ಕೆ 25 ಲಕ್ಷ ರೂಪಾಯಿ ಆರೋಗ್ಯ ವಿಮೆ
  • ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯ
  • ಕಾಶ್ಮೀರಿ ಪಂಡಿತ ವಲಸಿಗರಿಗೆ ಪುನರ್ವಸತಿ
  • ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 3 ಸಾವಿರ ರೂಪಾಯಿ

ಇದನ್ನೂ ಓದಿ: I.N.D.I.A ಕೂಟಕ್ಕೆ ಇನ್ನು 20 ಸೀಟು ಸಿಕ್ಕಿದ್ದರೆ ಬಿಜೆಪಿಗರು ಜೈಲಿನಲ್ಲಿ ಇರುತ್ತಿದ್ದರು: ಮಲ್ಲಿಕಾರ್ಜುನ್​ ಖರ್ಗೆ - Mallikarjun Kharge fire on BJP

ಅನಂತನಾಗ್ (ಜಮ್ಮು- ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಸೆಪ್ಟೆಂಬರ್​ 18 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಇದಕ್ಕೂ ಮೊದಲು ರಾಜಕೀಯ ಪಕ್ಷಗಳು ಮತಕ್ಕಾಗಿ ಭರವಸೆಗಳ ಮಹಾಪೂರವನ್ನೇ ಹರಿಸುತ್ತಿವೆ. ಬಿಜೆಪಿ ಬಳಿಕ ಕಾಂಗ್ರೆಸ್​ ಕೂಡ ಭರ್ಜರಿ ಘೋಷಣೆಗಳನ್ನು ಪ್ರಕಟಿಸಿದೆ.

ಬುಧವಾರ ಇಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಶ್ಮೀರದ ಜನರಿಗೆ ಐದು ಭರವಸೆಗಳನ್ನು ಘೋಷಿಸಿದ್ದಾರೆ. ಇದರಲ್ಲಿ ಮಹಿಳಾ ಉದ್ಯಮಿಗಳಿಗೆ 5 ಲಕ್ಷ ಬಡ್ಡಿ ರಹಿತ ಸಾಲ, ಪ್ರತಿ ಕುಟುಂಬಕ್ಕೆ 25 ಲಕ್ಷ ಆರೋಗ್ಯ ವಿಮೆ, ಮಹಿಳೆಗೆ ಮಾಸಿಕ 3 ಸಾವಿರ ರೂಪಾಯಿ, ಪ್ರತಿ ವ್ಯಕ್ತಿಗೆ 11 ಕೆಜಿ ಅಕ್ಕಿ ನೀಡುವುದಾಗಿ ಪ್ರಕಟಿಸಿದರು.

ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್​ ಕಾನ್ಫ್​​ರೆನ್ಸ್​ ಮೈತ್ರಿಕೂಟ ಅಧಿಕಾರಕ್ಕೆ ಬಂದಲ್ಲಿ, ಐದು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗುವುದು. ಕರ್ನಾಟಕದ ಮಾದರಿಯಲ್ಲಿ ಕುಟುಂಬದ ಮಹಿಳೆಗೆ ಮಾಸಿಕ 3 ಸಾವಿರ ನೀಡಲಾಗುವುದು. ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯ ನೀಡುವುದನ್ನು ಪುನಃಸ್ಥಾಪನೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ನೀಡಿದ್ದ ವಲಸಿಗ ಕಾಶ್ಮೀರ ಪಂಡಿತರಿಗೆ ಪುನರ್ವಸತಿ ನೀಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಭರವಸೆ ನೀಡಿದರು.

ಈ ವೇಳೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಸುಬೋಧ್ ಕಾಂತ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಇದ್ದರು.

ಬಿಜೆಪಿ ವಿರುದ್ಧ ವಾಗ್ದಾಳಿ: ಐದು ಮಹತ್ವದ ಭರವಸೆಗಳನ್ನು ಘೋಷಣೆ ಬಳಿಕ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷರು, ಬಿಜೆಪಿ ಸರ್ಕಾರ 5 ಲಕ್ಷ ಉದ್ಯೋಗ ನೀಡುವ ಭರವಸೆ ಸುಳ್ಳು. ಈ ಹಿಂದೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಈಗ ಐದು ಲಕ್ಷ ಉದ್ಯೋಗ ನೀಡುವುದಾಗಿ ಹೇಳುತ್ತಿರುವುದು ವಿಪರ್ಯಾಸದ ಸಂಗತಿ. ಈ ಹಿಂದಿನ ವಾಗ್ದಾನದಂತೆ 10 ವರ್ಷಗಳಲ್ಲಿ 1 ಲಕ್ಷ ಜನರಿಗೆ ಉದ್ಯೋಗ ನೀಡಿಲ್ಲ. 5 ಲಕ್ಷ ಕೆಲಸ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಕಾಂಗ್ರೆಸ್​ ಘೋಷಿಸಿದ ಪಂಚ ಗ್ಯಾರಂಟಿ

  • ಮಹಿಳಾ ಉದ್ಯಮಿಗಳಿಗೆ ₹5 ಲಕ್ಷ ಬಡ್ಡಿ ರಹಿತ ಸಾಲ
  • ಪ್ರತಿ ಕುಟುಂಬಕ್ಕೆ 25 ಲಕ್ಷ ರೂಪಾಯಿ ಆರೋಗ್ಯ ವಿಮೆ
  • ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯ
  • ಕಾಶ್ಮೀರಿ ಪಂಡಿತ ವಲಸಿಗರಿಗೆ ಪುನರ್ವಸತಿ
  • ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 3 ಸಾವಿರ ರೂಪಾಯಿ

ಇದನ್ನೂ ಓದಿ: I.N.D.I.A ಕೂಟಕ್ಕೆ ಇನ್ನು 20 ಸೀಟು ಸಿಕ್ಕಿದ್ದರೆ ಬಿಜೆಪಿಗರು ಜೈಲಿನಲ್ಲಿ ಇರುತ್ತಿದ್ದರು: ಮಲ್ಲಿಕಾರ್ಜುನ್​ ಖರ್ಗೆ - Mallikarjun Kharge fire on BJP

ETV Bharat Logo

Copyright © 2024 Ushodaya Enterprises Pvt. Ltd., All Rights Reserved.