ETV Bharat / bharat

ಜನಸೇನಾ ಪಕ್ಷದ ನಾಯಕ ಪವನ್​ ಕಲ್ಯಾಣ್‌ಗೆ ಆಂಧ್ರ ಸರ್ಕಾರದಲ್ಲಿ ಡಿಸಿಎಂ ಸ್ಥಾನ ಸಾಧ್ಯತೆ - Pawan Kalyan

author img

By PTI

Published : Jun 11, 2024, 9:35 PM IST

ಆಂಧ್ರ ಪ್ರದೇಶದ ಎನ್​ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ಖ್ಯಾತ ನಟ, ಜನಸೇನಾ ಪಕ್ಷದ ಅಧ್ಯಕ್ಷ ಪವನ್​ ಕಲ್ಯಾಣ್​ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಜೋರಾಗಿ ಕೇಳಿಬರುತ್ತಿವೆ.

Pawan Kalyan, Chandrababu Naidu
ಪವನ್​ ಕಲ್ಯಾಣ್, ಚಂದ್ರಬಾಬು ನಾಯ್ಡು (ETV Bharat)

ಅಮರಾವತಿ(ಆಂಧ್ರಪ್ರದೇಶ): ಆಂಧ್ರ ಪ್ರದೇಶದಲ್ಲಿ ತೆಲುಗು ದೇಶಂ ಪಕ್ಷ (ಟಿಡಿಪಿ), ಜನಸೇನಾ ಮತ್ತು ಬಿಜೆಪಿಯನ್ನೊಳಗೊಂಡ ಎನ್​ಡಿಎ ಮೈತ್ರಿಕೂಟದ ಸರ್ಕಾರ ಬುಧವಾರ ಅಸ್ತಿತ್ವಕ್ಕೆ ಬರಲಿದೆ. ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಬಾರಿಯ ರಾಜ್ಯ ರಾಜಕೀಯ ಮತ್ತು ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಖ್ಯಾತ ನಟ, ಜನಸೇನಾ ಅಧ್ಯಕ್ಷ ಪವನ್​ ಕಲ್ಯಾಣ್​ ಉಪಮುಖ್ಯಮಂತ್ರಿ ಆಗಿ ಆಯ್ಕೆಯಾಗುವ ನಿರೀಕ್ಷೆ ಇದೆ.

ಆಂಧ್ರಪ್ರದೇಶಲ್ಲಿ ಇತ್ತೀಚೆಗೆ ಲೋಕಸಭೆಯೊಂದಿಗೆ ವಿಧಾನಸಭೆಗೂ ಚುನಾವಣೆ ನಡೆದಿತ್ತು. ಎರಡೂ ಚುನಾವಣೆಯಲ್ಲೂ ಎನ್​ಡಿಎ ಮೈತ್ರಿಕೂಟ ದೊಡ್ಡ ಗೆಲುವು ದಾಖಲಿಸಿದೆ. 175 ಸದಸ್ಯ ಬಲದ ವಿಧಾನಸಭೆಯಲ್ಲಿ ಟಿಡಿಪಿ - 135, ಜನಸೇನಾ -21 ಹಾಗೂ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯ ಸಾಧಿಸಿ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ನಾಳೆ(ಬುಧವಾರ) ಸಿಎಂ ಆಗಿ ಚಂದ್ರಬಾಬು ನಾಯ್ಡು ಬೆಳಗ್ಗೆ 11.27ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರ ಆಯ್ಕೆಗಾಗಿ ಮೂರೂ ಮೈತ್ರಿಪಕ್ಷಗಳಿಂದಲೂ ರಾಜಕೀಯ ಹಿನ್ನೆಲೆ, ಜಾತಿ ಸೇರಿದಂತೆ ಎಲ್ಲ ರೀತಿಯ ಲೆಕ್ಕಾಚಾರಗಳು ನಡೆಯುತ್ತಿವೆ.

ಜನಸೇನಾ-ಬಿಜೆಪಿಗೆ 6 ಸಚಿವ ಸ್ಥಾನ?: ಸರ್ಕಾರ ರಚನೆಗೆ ಸಜ್ಜಾಗಿರುವ ಟಿಡಿಪಿ, ಜನಸೇನಾ ಪಕ್ಷವು ಇಂದು ತಮ್ಮ ತಮ್ಮ ಶಾಸಕಾಂಗ ಪಕ್ಷದ ಸಭೆ ನಡೆಸಿವೆ. ನಿರೀಕ್ಷೆಯಂತೆ ಕ್ರಮವಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್​ ಆಯ್ಕೆಯಾಗಿದ್ದಾರೆ. ಸರ್ಕಾರದಲ್ಲಿ ತಮ್ಮೊಂದಿಗೆ ಪವನ್​ ಕಲ್ಯಾಣ್​ ಅವರಿಗೂ ಸಮಾನ ಗೌರವ ಇರುತ್ತದೆ ಎಂದು ಚಂದ್ರಬಾಬು ನಾಯ್ಡು ಸಭೆಯಲ್ಲಿ ತಿಳಿಸಿದ್ದಾರೆ.

ಮತ್ತೊಂದೆಡೆ, ಟಿಡಿಪಿ-ಜನಸೇನಾ-ಬಿಜೆಪಿ ಮೈತ್ರಿಕೂಟವು ಒಂಟಿಯಾಗಿಯೂ ಸಭೆ ನಡೆಸಿದೆ. ವಿಜಯವಾಡದಲ್ಲಿ ನಡೆದ ಎಲ್ಲ ಪಕ್ಷಗಳ ಶಾಸಕರ ಸಭೆಯಲ್ಲಿ ಸಿಎಂ ಆಗಿ ಚಂದ್ರಬಾಬು ಅವರ ಹೆಸರನ್ನು ಪವನ್ ಕಲ್ಯಾಣ್ ಸೂಚಿಸಿದರು. ಈ ಪ್ರಸ್ತಾವನೆಗೆ ಬಿಜೆಪಿ ರಾಜ್ಯಾಧ್ಯಕ್ಷೆ ಪುರಂದೇಶ್ವರಿ ಬೆಂಬಲ ವ್ಯಕ್ತಪಡಿಸಿದರು. ಬಳಿಕ ಮೈತ್ರಿಕೂಟದ ನಾಯಕರು ತಮ್ಮ ಸರ್ವಾನುಮತದ ನಿರ್ಣಯವನ್ನು ರಾಜ್ಯಪಾಲರಿಗೆ ರವಾನಿಸಿದರು. ರಾಜ್ಯಪಾಲರು ಸರ್ಕಾರ ರಚನೆಗೆ ಸಮ್ಮಿಶ್ರ ಸರ್ಕಾರಕ್ಕೆ ಆಹ್ವಾನ ನೀಡಿದ್ದಾರೆ.

ಚಂದ್ರಬಾಬು ಪುತ್ರ ನಾರಾ ಲೋಕೇಶ್‌ಗೆ ಸಚಿವ ಸ್ಥಾನ?: ಸರ್ಕಾರದಲ್ಲಿ ಪವನ್​ ಕಲ್ಯಾಣ್​ ಅವರ ಜನಸೇನಾ ಹಾಗೂ ಬಿಜೆಪಿಗೆ ಐದಾರು ಸಚಿವ ಸ್ಥಾನಗಳು ಸಿಗಲಿವೆ. ಪವನ್ ಹಾಗೂ ಅವರ ಪಕ್ಷದ ರಾಜಕೀಯ ವ್ಯವಹಾರ ಸಮಿತಿಯ ಅಧ್ಯಕ್ಷ ನಾದೇಂಡ್ಲ ಮನೋಹರ್​ ಸಂಪುಟ ಸೇರಲಿದ್ದಾರೆ. ಪವನ್​ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ, ಚಂದ್ರಬಾಬು ಪುತ್ರ ನಾರಾ ಲೋಕೇಶ್​ ಸಹ ಸಂಪುಟ ಸೇರುವ ನಿರೀಕ್ಷೆ ಇದೆ.

ಇದನ್ನೂ ಓದಿ: ನಾಳೆ ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ

ಅಮರಾವತಿ(ಆಂಧ್ರಪ್ರದೇಶ): ಆಂಧ್ರ ಪ್ರದೇಶದಲ್ಲಿ ತೆಲುಗು ದೇಶಂ ಪಕ್ಷ (ಟಿಡಿಪಿ), ಜನಸೇನಾ ಮತ್ತು ಬಿಜೆಪಿಯನ್ನೊಳಗೊಂಡ ಎನ್​ಡಿಎ ಮೈತ್ರಿಕೂಟದ ಸರ್ಕಾರ ಬುಧವಾರ ಅಸ್ತಿತ್ವಕ್ಕೆ ಬರಲಿದೆ. ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಬಾರಿಯ ರಾಜ್ಯ ರಾಜಕೀಯ ಮತ್ತು ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಖ್ಯಾತ ನಟ, ಜನಸೇನಾ ಅಧ್ಯಕ್ಷ ಪವನ್​ ಕಲ್ಯಾಣ್​ ಉಪಮುಖ್ಯಮಂತ್ರಿ ಆಗಿ ಆಯ್ಕೆಯಾಗುವ ನಿರೀಕ್ಷೆ ಇದೆ.

ಆಂಧ್ರಪ್ರದೇಶಲ್ಲಿ ಇತ್ತೀಚೆಗೆ ಲೋಕಸಭೆಯೊಂದಿಗೆ ವಿಧಾನಸಭೆಗೂ ಚುನಾವಣೆ ನಡೆದಿತ್ತು. ಎರಡೂ ಚುನಾವಣೆಯಲ್ಲೂ ಎನ್​ಡಿಎ ಮೈತ್ರಿಕೂಟ ದೊಡ್ಡ ಗೆಲುವು ದಾಖಲಿಸಿದೆ. 175 ಸದಸ್ಯ ಬಲದ ವಿಧಾನಸಭೆಯಲ್ಲಿ ಟಿಡಿಪಿ - 135, ಜನಸೇನಾ -21 ಹಾಗೂ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯ ಸಾಧಿಸಿ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ನಾಳೆ(ಬುಧವಾರ) ಸಿಎಂ ಆಗಿ ಚಂದ್ರಬಾಬು ನಾಯ್ಡು ಬೆಳಗ್ಗೆ 11.27ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರ ಆಯ್ಕೆಗಾಗಿ ಮೂರೂ ಮೈತ್ರಿಪಕ್ಷಗಳಿಂದಲೂ ರಾಜಕೀಯ ಹಿನ್ನೆಲೆ, ಜಾತಿ ಸೇರಿದಂತೆ ಎಲ್ಲ ರೀತಿಯ ಲೆಕ್ಕಾಚಾರಗಳು ನಡೆಯುತ್ತಿವೆ.

ಜನಸೇನಾ-ಬಿಜೆಪಿಗೆ 6 ಸಚಿವ ಸ್ಥಾನ?: ಸರ್ಕಾರ ರಚನೆಗೆ ಸಜ್ಜಾಗಿರುವ ಟಿಡಿಪಿ, ಜನಸೇನಾ ಪಕ್ಷವು ಇಂದು ತಮ್ಮ ತಮ್ಮ ಶಾಸಕಾಂಗ ಪಕ್ಷದ ಸಭೆ ನಡೆಸಿವೆ. ನಿರೀಕ್ಷೆಯಂತೆ ಕ್ರಮವಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್​ ಆಯ್ಕೆಯಾಗಿದ್ದಾರೆ. ಸರ್ಕಾರದಲ್ಲಿ ತಮ್ಮೊಂದಿಗೆ ಪವನ್​ ಕಲ್ಯಾಣ್​ ಅವರಿಗೂ ಸಮಾನ ಗೌರವ ಇರುತ್ತದೆ ಎಂದು ಚಂದ್ರಬಾಬು ನಾಯ್ಡು ಸಭೆಯಲ್ಲಿ ತಿಳಿಸಿದ್ದಾರೆ.

ಮತ್ತೊಂದೆಡೆ, ಟಿಡಿಪಿ-ಜನಸೇನಾ-ಬಿಜೆಪಿ ಮೈತ್ರಿಕೂಟವು ಒಂಟಿಯಾಗಿಯೂ ಸಭೆ ನಡೆಸಿದೆ. ವಿಜಯವಾಡದಲ್ಲಿ ನಡೆದ ಎಲ್ಲ ಪಕ್ಷಗಳ ಶಾಸಕರ ಸಭೆಯಲ್ಲಿ ಸಿಎಂ ಆಗಿ ಚಂದ್ರಬಾಬು ಅವರ ಹೆಸರನ್ನು ಪವನ್ ಕಲ್ಯಾಣ್ ಸೂಚಿಸಿದರು. ಈ ಪ್ರಸ್ತಾವನೆಗೆ ಬಿಜೆಪಿ ರಾಜ್ಯಾಧ್ಯಕ್ಷೆ ಪುರಂದೇಶ್ವರಿ ಬೆಂಬಲ ವ್ಯಕ್ತಪಡಿಸಿದರು. ಬಳಿಕ ಮೈತ್ರಿಕೂಟದ ನಾಯಕರು ತಮ್ಮ ಸರ್ವಾನುಮತದ ನಿರ್ಣಯವನ್ನು ರಾಜ್ಯಪಾಲರಿಗೆ ರವಾನಿಸಿದರು. ರಾಜ್ಯಪಾಲರು ಸರ್ಕಾರ ರಚನೆಗೆ ಸಮ್ಮಿಶ್ರ ಸರ್ಕಾರಕ್ಕೆ ಆಹ್ವಾನ ನೀಡಿದ್ದಾರೆ.

ಚಂದ್ರಬಾಬು ಪುತ್ರ ನಾರಾ ಲೋಕೇಶ್‌ಗೆ ಸಚಿವ ಸ್ಥಾನ?: ಸರ್ಕಾರದಲ್ಲಿ ಪವನ್​ ಕಲ್ಯಾಣ್​ ಅವರ ಜನಸೇನಾ ಹಾಗೂ ಬಿಜೆಪಿಗೆ ಐದಾರು ಸಚಿವ ಸ್ಥಾನಗಳು ಸಿಗಲಿವೆ. ಪವನ್ ಹಾಗೂ ಅವರ ಪಕ್ಷದ ರಾಜಕೀಯ ವ್ಯವಹಾರ ಸಮಿತಿಯ ಅಧ್ಯಕ್ಷ ನಾದೇಂಡ್ಲ ಮನೋಹರ್​ ಸಂಪುಟ ಸೇರಲಿದ್ದಾರೆ. ಪವನ್​ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ, ಚಂದ್ರಬಾಬು ಪುತ್ರ ನಾರಾ ಲೋಕೇಶ್​ ಸಹ ಸಂಪುಟ ಸೇರುವ ನಿರೀಕ್ಷೆ ಇದೆ.

ಇದನ್ನೂ ಓದಿ: ನಾಳೆ ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.